ರಾಜಸ್ಥಾನ | SIR ಪ್ರಕ್ರಿಯೆಯಲ್ಲಿ ಮುಸ್ಲಿಂ ಮತಗಳನ್ನು ಅಳಿಸಲು ಒತ್ತಡ: ಬಿಎಲ್‌ಒ ಆರೋಪ

Date:

ರಾಜಸ್ಥಾನದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಡೆಯುತ್ತಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಅಲ್ಪ ಮತಗಳಿಂದ ಗೆದ್ದಿರುವ ಕ್ಷೇತ್ರಗಳಲ್ಲಿ ಮುಸ್ಲಿಮರ ಮತಗಳನ್ನು ಅಳಿಸಲು ಬಿಜೆಪಿ ಏಜೆಂಟ್‌ಗಳು ಒತ್ತಡ ಹೇರುತ್ತಿದ್ದಾರೆ ಎಂದು ಬಿಎಲ್‌ಒವೊಬ್ಬರು ಆರೋಪಿಸಿದ್ದಾರೆ. ‘ತಾವು ಎಸ್‌ಐಆರ್‌ ಪ್ರಕ್ರಿಯೆ ನಡೆಸುತ್ತಿರುವ ಮತಗಟ್ಟೆಯಲ್ಲಿ 470 (40%) ಮತದಾರರ ಹೆಸರನ್ನು ಅಳಿಸಲು ಬಿಜೆಪಿ ಆಕ್ಷೇಪಣೆ ಅರ್ಜಿ ಸಲ್ಲಿಸಿದೆ. ಆ ಅರ್ಜಿಗಳು ಮುಸ್ಲಿಂ ಮತದಾರರನ್ನ ಗುರಿಯಾಗಿಸಿಕೊಂಡಿವೆ. ಅವುಗಳನ್ನು ಪರಿಶೀಲಿಸುವಂತೆ ಬೆದರಿಕೆ ಹಾಕಲಾಗುತ್ತಿದೆ. ಆದರೆ, ತಾವು ಈಗಾಗಲೇ ಎಲ್ಲ ಮತದಾರರನ್ನೂ ಪರಿಶೀಲಿಸಿದ್ದೇನೆ’ ಎಂದು ಜೈಪುರದ ಹವಾ ಮಹಲ್ ವಿಧಾನಸಭಾ ಕ್ಷೇತ್ರದ ಬಿಎಲ್ಒ ಕೀರ್ತಿಕುಮಾರ್ ಆರೋಪಿಸಿರುವುದಾಗಿ ‘ನ್ಯೂಸ್‌ಲ್ಯಾಂಡ್ರಿ’ ವರದಿ ಮಾಡಿದೆ.

ಬಿಎಲ್‌ಒ ಕೀರ್ತಿಕುಮಾರ್‌ ಅವರು ಫೋನ್ ಕರೆಯಲ್ಲಿ ಕೂಗಾಡುತ್ತಿರುವ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅದರಲ್ಲಿ, ‘ನಾನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ ಎಂದು ಅವರು ಹೇಳುತ್ತಿರುವುದು ಕಂಡುಬಂದಿದೆ.

ಕೀರ್ತಿಕುಮಾರ್ ಅವರು ಎಸ್‌ಐಆರ್ ಪ್ರಕ್ರಿಯೆ ನಡೆಸುತ್ತಿರುವ ಹವಾ ಮಹಲ್ ಕ್ಷೇತ್ರದ ಬಸ್ತಿ ಪ್ರದೇಶದಲ್ಲಿ ಹೆಚ್ಚು ಮುಸ್ಲಿಂ ಮತದಾರರನ್ನು ಹೊಂದಿದೆ. ಈ ಕ್ಷೇತ್ರವನ್ನು ಬಿಜೆಪಿ ಶಾಸಕ ಬಾಲಮುಕುಂದ ಆಚಾರ್ಯ ಅವರು ಪ್ರತಿನಿಧಿಸುತ್ತಿದ್ದಾರೆ. ಅವರು, ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 974 ಮತಗಳ ಅಂತರದಿಂದ ಗೆದ್ದಿದ್ದರು. ಈ ಅಲ್ಪ ಮತಗಳಿಂದ ಗೆದ್ದಿದ್ದ ಬಿಜೆಪಿ, ಮುಂದಿನ ಚುನಾವಣೆಯಲ್ಲಿಯೂ ಗೆಲ್ಲುತ್ತದೆ ಎಂಬುದಕ್ಕೆ ಖಾತ್ರಿ ಇಲ್ಲವೆಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೀಗಾಗಿ, “ಮುಂದಿನ (2028) ವಿಧಾನಸಭಾ ಚುನಾವಣೆಯಲ್ಲಿ ಆಚಾರ್ಯ (ಬಿಜೆಪಿ) ಗೆಲುವನ್ನು ಖಚಿತಪಡಿಸಿಕೊಳ್ಳಲು ಮತದಾರರ ಪಟ್ಟಿಯಿಂದ ಮತದಾರರನ್ನು ಹೆಸರನ್ನು ಅಳಿಸಿಹಾಕುವಂತೆ 470 ಆಕ್ಷೇಪಣೆಗಳನ್ನು ಸಲ್ಲಿಸಲಾಗಿದೆ. ಅವುಗಳಲ್ಲಿರುವ ಹೆಸರುಗಳನ್ನು ಅಲಿಸುವಂತೆ ಒತ್ತಡ ಹೇರಲಾಗುತ್ತಿದೆ. ಆದರೆ, ಹಿಂದು ಮತದಾರರು ಹೆಚ್ಚಾಗಿರುವ ಬೂತ್‌ಗಳಲ್ಲಿ ಈ ಪ್ರಮಾಣದ ಆಕ್ಷೇಪಣೆಗಳು ಬಂದಿಲ್ಲ. ಇಡೀ ಬಸ್ತಿಯ ಮತದಾರರನ್ನೇ ತೆಗೆದುಹಾಕಿಬಿಡುತ್ತೇನೆ. ಆಗ ಆಚಾರ್ಯ ಸುಲಭವಾಗಿ ಗೆಲ್ಲಬಹುದು” ಎಂದು ಕುಮಾರ್ ಹತಾಶೆ ವ್ಯಕ್ತಪಡಿಸಿದ್ದಾರೆ.

ಈ ಲೇಖನ ಓದಿದ್ದೀರಾ?: 2025ರಲ್ಲಿ ಕೋಮುದ್ವೇಷ ತೀವ್ರ ಏರಿಕೆ; ಮುಸ್ಲಿಮರೇ ಹೆಚ್ಚು ಗುರಿ: ವರದಿ

“ಚುನಾವಣಾ ಆಯೋಗವೇ ನೀಡಿರುವ ಕೈಪಿಡಿಯ ಪ್ರಕಾರ, ಒಬ್ಬ ಬೂತ್ ಮಟ್ಟದ ಏಜೆಂಟ್ ಒಂದು ದಿನಕ್ಕೆ 10ಕ್ಕಿಂತ ಹೆಚ್ಚು ಆಕ್ಷೇಪಣೆಗಳನ್ನು ಸಲ್ಲಿಸುವಂತಿಲ್ಲ. ಆದರೆ, ನಮ್ಮ ಬೂತ್‌ನಲ್ಲಿ ಬಿಜೆಪಿ ಏಜೆಂಟ್‌ಗಳು ಎರಡೇ ದಿನಗಳಲ್ಲಿ 400ಕ್ಕೂ ಹೆಚ್ಚು ಆಕ್ಷೇಪಣೆಗಳನ್ನು ಸಲ್ಲಿಸಿದ್ದಾರೆ. ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಈ ಅರ್ಜಿಗಳನ್ನು ಪರಿಶೀಲಿಸಿ ಡಿಜಿಟಲೀಕರಣ ಮಾಡುವುದು ಅಸಾಧ್ಯ” ಎಂದು ಬಿಎಲ್‌ಒ ಹೇಳಿದ್ದಾರೆ.

ರಾಜಸ್ಥಾನದಲ್ಲಿ ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೆಲಸ ಮತ್ತು ರಾಜಕೀಯ ಒತ್ತಡ, ಬೆದರಿಕೆಗಳ ಕಾರಣದಿಂದಾಘಿ ಮೂವರು ಬಿಎಲ್‌ಒಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...