ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯೆಲ್ ನೇಮಕ

Date:

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯೆಲ್ ಅವರನ್ನು ನೇಮಕ ಮಾಡಲಾಗಿದೆ.

ನವೆಂಬರ್ 30ರಂದು ಹಾಲಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರ ಅವಧಿ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ರಜನೀಶ್ ಗೋಯಲ್ ಅವರನ್ನು ನೂತನ ಮುಖ್ಯ ಕಾರ್ಯದರ್ಶಿಯಾಗಿ ಸರ್ಕಾರ ನೇಮಕ ಮಾಡಿ, ನ.21ರಂದು ಸಂಜೆ ಅಧಿಕೃತ ಆದೇಶ ಹೊರಡಿಸಿದೆ.

WhatsApp Image 2023 11 21 at 8.40.17 PM

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಂದಿತಾ ಶರ್ಮಾ ಅವರ ಅವಧಿ ಮುಕ್ತಾಯ ಹಿನ್ನೆಲೆಯಲ್ಲಿ ಪ್ರಸ್ತುತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ(ಗೃಹ ಇಲಾಖೆ)ಯಾಗಿರುವ ರಜನೀಶ್ ಗೋಯಲ್ ಅವರನ್ನು ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿದೆ.

vandita sharma ias
ವಂದಿತಾ ಶರ್ಮಾ

ಇವರ ಪತ್ನಿ ಶಾಲಿನಿ ರಜನೀಶ್ ಕೂಡ ಐಎಎಸ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಜನೀಶ್ ಗೋಯೆಲ್, 1986-ನೇ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದಾರೆ. ಡಿಸೆಂಬರ್ 1ರಂದು ನೂತನ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

rajaneesh goel and shalini rajaneesh
ರಜನೀಶ್ ಗೋಯೆಲ್ ಹಾಗೂ ಶಾಲಿನಿ ರಜನೀಶ್ ದಂಪತಿ

ಇತರ ಹಿರಿಯ ಐಎಎಸ್ ಅಧಿಕಾರಿಗಳಾದ ಅಜಯ್ ಸೇಠ್, ವಿ ಮಂಜುಳಾ ಮತ್ತು ರಾಕೇಶ್ ಸಿಂಗ್ ಅವರ ಹೆಸರುಗಳೂ ಕೂಡ ಮುಖ್ಯ ಕಾರ್ಯದರ್ಶಿ ಹುದ್ದೆಗಾಗಿ ಮುನ್ನೆಲೆಗೆ ಬಂದಿದ್ದವು. ಆದರೆ ಸರ್ಕಾರ ಗೋಯೆಲ್ ಅವರನ್ನೇ ನೇಮಕಗೊಳಿಸಿ, ಆದೇಶ ಹೊರಡಿಸಿದೆ. ಮುಂದಿನ ವರ್ಷ(2024) ಜುಲೈನಲ್ಲಿ ಗೋಯೆಲ್ ನಿವೃತ್ತಿ ಹೊಂದಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...