ಸಂಸತ್ ಭದ್ರತಾ ಲೋಪ | ಚರ್ಚೆಗೆ ಪಟ್ಟು ಹಿಡಿದ ಸಂಸದ ಡೆರೆಕ್‌ ಓಬ್ರಿಯಾನ್ ರಾಜ್ಯಸಭೆಯಿಂದ ಅಮಾನತು

Date:

ಲೋಕಸಭೆ ಭದ್ರತಾ ಲೋಪ ಪ್ರಕರಣದ ಕುರಿತು ರಾಜ್ಯಸಭೆಯಲ್ಲಿ ಚರ್ಚೆಗೆ ಪಟ್ಟು ಹಿಡಿದಿದ್ದ ಟಿಎಂಸಿ ಸಂಸದ ಡೆರೆಕ್‌ ಓಬ್ರಿಯಾನ್ ಅವರನ್ನು ರಾಜ್ಯಸಭೆಯಿಂದ ಅಮಾನತು ಮಾಡಲಾಗಿದೆ.

ಲೋಕಸಭೆಯಲ್ಲಿ ಇಬ್ಬರು ವ್ಯಕ್ತಿಗಳು ಸಂದರ್ಶಕರ ಗ್ಯಾಲರಿಯಿಂದ ಜಿಗಿದು, ಸ್ಮೋಕ್ ಡಬ್ಬಿಗಳನ್ನು ಸಿಡಿಸಿದ ಘಟನೆಯ ಕುರಿತು ವಿಪಕ್ಷಗಳು ಚರ್ಚೆಗೆ ಆಗ್ರಹಿಸಿವೆ. ಈ ನಡುವೆ ಟಿಎಂಸಿ ಸಂಸದ ಡೆರೆಕ್‌ ಓಬ್ರಿಯಾನ್ ಸದನದ ಬಾವಿಗಳಿದು ಪ್ರತಿಭಟನೆ ಮಾಡಿದ್ದರು. ಇದರಿಂದಾಗಿ ಒಬ್ರಿಯಾನ್ ಅವರನ್ನು ಅಮಾನತು ಮಾಡಿರುವುದಾಗಿ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್‌ಕರ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್‌ ಓಬ್ರಿಯಾನ್ ಅವರನ್ನು ‘ಅಶಿಸ್ತಿನ ವರ್ತನೆಗಾಗಿ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಳಿಸುವ ನಿರ್ಣಯವನ್ನು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್‌ಕರ್ ನಿರ್ಣಯ ಮಂಡಿಸಿದರು. ಇದಕ್ಕೆ ವಿಪಕ್ಷಗಳು ಗದ್ದಲ ಸೃಷ್ಟಿಸಿದರೆ, ಆಡಳಿತ ಪಕ್ಷದ ಸದಸ್ಯರು ಬೆಂಬಲ ಸೂಚಿಸಿದರು.

“ಟಿಎಂಸಿ ಸದಸ್ಯ ಡೆರೆಕ್ ಒಬ್ರಿಯಾನ್ ಅವರು ನಿಯಮಗಳನ್ನು ಗೌರವಿಸುವುದಿಲ್ಲ. ಇದು ಗಂಭೀರ ದುರ್ನಡತೆಯಾಗಿದೆ. ಇದು ನಾಚಿಕೆಗೇಡಿನ ಸಂಗತಿಯಾಗಿದೆ. ಹಾಗಾಗಿ, ರಾಜ್ಯಸಭೆಯ ನಿಯಮ 256ರ ಅನ್ವಯ ಡೆರೆಕ್ ಒಬ್ರಿಯಾನ್ ಅವರನ್ನು ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ” ಎಂದು ತಿಳಿಸಿದರು.

ಈ ನಡುವೆ ಡೆರೆಕ್‌ ಓಬ್ರಿಯಾನ್ ಸಹಿತ ವಿಪಕ್ಷಗಳ ಸದಸ್ಯರು, ‘ಸರ್ವಾಧಿಕಾರಿ ನಡೆ ಸರಿಯಲ್ಲ’ ಎಂದು ಘೋಷಣೆ ಕೂಗ ತೊಡಗಿದರು. ಈ ಹಿನ್ನೆಲೆಯಲ್ಲಿ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್‌ಕರ್ ಕಲಾಪವನ್ನು ಮತ್ತೆ 2 ಗಂಟೆಗೆ ಮುಂದೂಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...