ರಾಜ್ಯಸಭಾ ಚುನಾವಣೆ | ಗಣಿ ಉದ್ಯಮಿ ರೆಡ್ಡಿ ಸಹಾಯ ಕೇಳಿದ ಕರ್ನಾಟಕ ಸಿಎಂ, ಡಿಸಿಎಂ

Date:

ಕರ್ನಾಟಕದಿಂದ ನಾಲ್ಕು ಸ್ಥಾನಗಳಿಗೆ ರಾಜ್ಯಸಭೆಗೆ ಮಂಗಳವಾರ (ಇಂದು) ಚುನಾವಣೆ ನಡೆಯಲಿದೆ. ಆದರೆ, ನಾಲ್ಕು ಸ್ಥಾನಗಳಿಗೆ ಐದನೇ ಅಭ್ಯರ್ಥಿ ಕೂಡ ಕಣಕ್ಕಿಳಿದಿದ್ದು, ಪೈಪೋಟಿ ನಡೆಯುವ ಆ ಒಂದು ಸ್ಥಾನವನ್ನು ಗೆಲ್ಲುವುದು ಕಾಂಗ್ರೆಸ್‌ ಮತ್ತು ಬಿಜೆಪಿ-ಜೆಡಿಎಸ್‌ಗೆ ಪ್ರತಿಷ್ಠೆಯ ವಿಚಾರವಾಗಿದೆ.

ನಾಲ್ಕು ಸ್ಥಾನಗಳ ಪೈಕಿ ಕಾಂಗ್ರೆಸ್‌ ಮೂರು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಒಂದು ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಕಣದಲ್ಲಿದ್ದಾರೆ. ಈ ನಾಲ್ವರೂ ಗೆಲುವು ಖಚಿತವಾಗಿತ್ತು. ಆದರೆ, ಈ ಮಧ್ಯೆ, ಬಿಜೆಪಿ-ಜೆಡಿಎಸ್‌ ಮೈತ್ರಿಕೂಟವು ರಾಜ್ಯಸಭೆಯ ಮಾಜಿ ಸದಸ್ಯ, ಜೆಡಿಎಸ್‌ ಮುಖಂಡ ಕುಪೇಂದ್ರ ರೆಡ್ಡಿ ಅವರನ್ನು 5ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಬಿಜೆಪಿ ನಾಯಕತ್ವ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಒಪ್ಪಿಗೆ ನೀಡಿದ ನಂತರ ನಾವು ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಿಸಿದ್ದೇವೆ ಎಂದು ಜೆಡಿಎಸ್ ಮುಖಂಡರೊಬ್ಬರು ತಿಳಿಸಿದ್ದಾರೆ.

ಹೀಗಾಗಿ, ಅವರು ಬೇರೊಬ್ಬರ ಮತಗಳನ್ನು ಕಸಿದುಕೊಳ್ಳುವ ಭೀತಿ 134 ಶಾಸಕರನ್ನು ಹೊಂದಿರುವ ಕಾಂಗ್ರೆಸ್‌ನಲ್ಲಿದೆ. ಇಬ್ಬರು ಸ್ವತಂತ್ರರ ಬೆಂಬಲವೂ ಇದ್ದರೂ, ಮೂರೂ ಸ್ಥಾನಗಳನ್ನು ಗೆಲ್ಲಲು ಕಾಂಗ್ರೆಸ್ ಒತ್ತಡದಲ್ಲಿದೆ. ಅಂದಹಾಗೆ, ಅವರು ಬಿಜೆಪಿ ಅಭ್ಯರ್ಥಿಯ ಮತಗಳನ್ನು ಕಿತ್ತುಕೊಂಡರೂ ಆಶ್ಚರ್ಯವಿಲ್ಲ. ಆದರೆ, ತಮ್ಮ ಗೆಲುವನ್ನು ಖಚಿತಪಡಿಸಿಕೊಳ್ಳಲು ಕಾಂಗ್ರೆಸ್‌ ಕಸರತ್ತು ನಡೆಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮ್ಮ ಗೆಲುವಿನ ಖಾತ್ರಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಭೇಟಿ ಮಾಡಿದ್ದಾರೆ. ಬರೋಬ್ಬರಿಗೆ 1 ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ. ತಮ್ಮ ಅಭ್ಯರ್ಥಿ ಆಯ್ಕೆಗೆ ಬೆಂಬಲ ನೀಡುವಂತೆ ಕೋರಿದ್ದಾರೆ.

ಈ ನಡುವೆ, ಭಾನುವಾರ ಪಕ್ಷದ ಶಾಸಕ ರಾಜಾ ವೆಂಕಟಪ್ಪ ನಾಯಕ್ ಸಾವನ್ನಪ್ಪಿದ್ದು, ಪಕ್ಷಕ್ಕೆ ಆಘಾತ ತಂದಿದೆ. ಸೋಮವಾರ ಸಿಎಲ್‌ಪಿ ಸಭೆ ನಡೆಸಿರುವ ಸಿದ್ದರಾಮಯ್ಯ, ತಮ್ಮ ಶಾಸಕರಿಗೆ ಹೇಗೆ ಮತ ಚಲಾಯಿಸಬೇಕು ಮತ್ತು ಅವರ ಮತಗಳನ್ನು ಅಸಿಂಧುಗೊಳಿಸದಂತೆ ಯಾವ ರೀತಿಯಲ್ಲಿ ಮತದಾನ ಮಾಡಬೇಕು ಎಂದು ಅಣಕು ಮತದಾನದ ಮೂಲಕ ತಿಳಿಸಿಕೊಟ್ಟಿದ್ದಾರೆ.

ಪಕ್ಷಗಳು ಶಾಸಕರಿಗೆ ವಿಪ್ ಜಾರಿ

ಮೂರು ಪಕ್ಷಗಳು ತಮ್ಮ ಶಾಸಕರಿಗೆ ವಿಪ್ ಜಾರಿ ಮಾಡಿವೆ. ಅಡ್ಡ ಮತದಾನ ಮಾಡದಂತೆ ಎಚ್ಚರಿಕೆ ನೀಡಿವೆ. ವಿಪ್ ಉಲ್ಲಂಘಿಸಿದರೆ, ಅನರ್ಹತೆಗೆ ಒಳಗಾಗಬಹುದು ಎಂದು ತನ್ನ ಶಾಸಕರಿಗೆ ಕಾಂಗ್ರೆಸ್‌ ಸೂಚನೆ ನೀಡಿದೆ. ತನ್ನ ಅಭ್ಯರ್ಥಿಗಳಾದ ಅಜಯ್ ಮಾಕನ್, ಸೈಯದ್ ನಸೀರ್ ಹುಸೇನ್, ಜಿ.ಸಿ.ಚಂದ್ರಶೇಖರ್ ಅವರಿಗೆ ಮತ ಹಾಕುವಂತೆ ಸೂಚಿಸಿದೆ. ಕಾಂಗ್ರೆಸ್‌ನ ಎಲ್ಲ ಶಾಸಕರು ವಿಧಾನಸೌಧಕ್ಕೆ ತೆರಳಿ, ಮತದಾನದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬಿಜೆಪಿ ಕೂಡ ತನ್ನ 66 ಶಾಸಕರಿಗೆ ವಿಪ್ ಜಾರಿ ಮಾಡಿದೆ. ಪಕ್ಷವು ತನ್ನ ಅಭ್ಯರ್ಥಿ ನಾರಾಯಣಸಾ ಭಾಂಡಗೆಗೆ 46-47 ಮತಗಳನ್ನು ಚಲಾಯಿಸುವಂತೆ ಹಾಗೂ ಉಳಿದ 18-19 ಹೆಚ್ಚುವರಿ ಮತಗಳನ್ನು ಕುಪೇಂದ್ರ ರೆಡ್ಡಿಗೆ ಹಂಚುವ ಸಾಧ್ಯತೆಯಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಸೋಮವಾರ ಭೇಟಿಯಾಗಿ ಕುಪೇಂದ್ರ ರೆಡ್ಡಿ ಕಾಂಗ್ರೆಸ್‌ಗೆ ಪ್ರಬಲ ಪೈಪೋಟಿ ನೀಡುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಿದ್ದಾರೆ.

ಆದರೆ ಗುರ್ಮಿಟ್ಕಲ್ ಶಾಸಕ ಶರಣಗೌಡ ಕಂದಕೂರ್ ಸೇರಿದಂತೆ ಜೆಡಿಎಸ್‌ನ ಒಬ್ಬ ಅಥವಾ ಇಬ್ಬರು ಶಾಸಕರು ಮತದಾನಕ್ಕೆ ಗೈರಾಗುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಮೂಲಗಳು ತಿಳಿಸಿವೆ. ಈ ಅತೃಪ್ತ ಶಾಸಕರು ಗೈರುಹಾಜರಾಗಲು ಸಾಧ್ಯವಿಲ್ಲ. ಇಲ್ಲದಿದ್ದರೆ, ಪಕ್ಷವು ಅವರ ವಿರುದ್ಧ ದೂರು ದಾಖಲಿಸಲಿದೆ. ಅವರು ಕ್ರಮ ಎದುರಿಸಬೇಕಾಗುತ್ತದೆ ಎಂದು ಜೆಡಿಎಸ್ ಮುಖಂಡರೊಬ್ಬರು ತಿಳಿಸಿದ್ದಾರೆ.

ಬಿಜೆಪಿ ಕೂಡ ತನ್ನ ಇಬ್ಬರು ಭಿನ್ನಮತೀಯರನ್ನು – ಮಾಜಿ ಸಚಿವ ಎಸ್‌ಟಿ ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ – ಓಲೈಕೆ ಮಾಡುತ್ತಿದೆ. ಆದರೆ, ಅವರು ಕಾಂಗ್ರೆಸ್‌ ಅಭ್ಯರ್ಥಿಗೆ ಮತ ಚಲಾಯಿಸುವ ಸಾಧ್ಯತೆ ಕಡಿಮೆ. ಯಾಕೆಂದರೆ, ಅವರು ಕಾಂಗ್ರೆಸ್‌ಗೆ ಮತ ಹಾಕಿದರೆ, ಶಾಸಕ ಸ್ಥಾನದಿಂದ ಅನರ್ಹರಾಗಬಹುದು. ಶಾಸಕರು ತಮ್ಮ ಆಯ್ಕೆಯನ್ನು ಮಾಡಿದ ನಂತರ ತಮ್ಮ ಮತಪತ್ರವನ್ನು ಬಾಕ್ಸ್‌ಗೆ ಹಾಕುವ ಮೊದಲು ಆಯಾ ಪಕ್ಷಗಳ ಅಧಿಕೃತ ಏಜೆಂಟರಿಗೆ ತೋರಿಸಬೇಕು.

ಕಾಂಗ್ರೆಸ್‌ನಲ್ಲಿ 134 ಶಾಸಕರಿದ್ದು, ಮೂವರು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಪ್ರತಿ ಸ್ಥಾನಕ್ಕೆ 45 ಶಾಸಕರ ಮತಗಳ ಅಗತ್ಯವಿರುವುದರಿಂದ ಅದು ಸುಲಭವಾಗಿ ಎರಡು ಸ್ಥಾನಗಳನ್ನು ಗೆಲ್ಲಬಹುದು. ಮೂರನೇ ಸ್ಥಾನವನ್ನು ಗೆಲ್ಲಲು ಸರ್ವೋದಯ ಕರ್ನಾಟಕ ಪಕ್ಷದ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಸ್ವತಂತ್ರ ಶಾಸಕರಾದ ಲತಾ ಮಲ್ಲಿಕಾರ್ಜುನ್ ಮತ್ತು ಪುಟ್ಟಸ್ವಾಮಿಗೌಡ ಅವರ ಮೇಲೆ ಅವಲಂಬಿತವಾಗಿದೆ. ಅಲ್ಲದೆ, ಕೆಆರ್‌ಪಿಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರ ಬೆಂಬಲವನ್ನೂ ಕೋರಿದೆ. ಅಲ್ಲದೆ, ಕಾಂಗ್ರೆಸ್‌ಗೆ ಒಂದಿಬ್ಬರು ಜೆಡಿಎಸ್ ಮತ್ತು ಬಿಜೆಪಿ ಶಾಸಕರ ಅನುಪಸ್ಥಿತಿಯೂ ವರದಾನವಾಗಬಹುದು.

66 ಶಾಸಕರನ್ನು ಹೊಂದಿರುವ ಬಿಜೆಪಿ ಒಂದು ಸ್ಥಾನವನ್ನು ಸುಲಭವಾಗಿ ಗೆಲ್ಲಬಹುದು. ಇದು ತನ್ನ ಹೆಚ್ಚುವರಿ ಮತಗಳನ್ನು ಜೆಡಿಎಸ್ ಅಭ್ಯರ್ಥಿಗೆ ಹಂಚಿಕೆ ಮಾಡಿ ಸ್ಥಾನವನ್ನು ಗೆಲ್ಲಲು ಪ್ರಯತ್ನಿಸುತ್ತದೆ. ಕುಪೇಂದ್ರ ರೆಡ್ಡಿ ಅವರ ಗೆಲುವು ಸ್ವತಂತ್ರರ ಬೆಂಬಲ ಮತ್ತು ಕಾಂಗ್ರೆಸ್ ಶಾಸಕರ ಅಡ್ಡ ಮತದಾನದ ಮೇಲೆ ಅವಲಂಬಿತವಾಗಿದೆ. ಬಿಜೆಪಿ ಶಾಸಕರ ಎರಡನೇ ಪ್ರಾಶಸ್ತ್ಯದ ಮತಗಳನ್ನು ಕುಪೇಂದ್ರ ರೆಡ್ಡಿಗೆ ಹಂಚುವುದು ಮತ್ತೊಂದು ಯೋಜನೆಯಾಗಿದೆ. ಕಾಂಗ್ರೆಸ್‌ನ ಮೂರನೇ ಅಭ್ಯರ್ಥಿಗೆ ಮತಗಳ ಕೊರತೆಯಾದರೆ ಮಾತ್ರ ಅದು ಎಣಿಕೆಗೆ ಬರಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...