ರಾಜ್ಯಸಭಾ ಚುನಾವಣೆ | ನಮ್ಮ ಶಾಸಕರ ಒಗ್ಗಟ್ಟು ಸಾರಲಷ್ಟೇ ಕುಪೇಂದ್ರ ರೆಡ್ಡಿ ಕಣಕ್ಕೆ: ಕುಮಾರಸ್ವಾಮಿ

Date:

ನಾವು ರಾಜ್ಯಸಭಾ ಚುನಾವಣೆಯಲ್ಲಿ ಗೆಲ್ಲಬೇಕು ಎಂಬುದಕ್ಕಿಂತ ಹೆಚ್ಚಾಗಿ ನಮ್ಮ ಶಾಸಕರನ್ನು ಒಡೆಯಲು ನಡೆಸಿದ ಯತ್ನವನ್ನು ವಿಫಲಗೊಳಿಸಲು ಸ್ಪರ್ಧೆ ಮಾಡಿದ್ದೇವೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರು ಫಲಿತಾಂಶಕ್ಕೂ ಮುನ್ನವೇ ಪರೋಕ್ಷವಾಗಿ ಸೋಲು ಒಪ್ಪಿಕೊಂಡ ರೀತಿಯಲ್ಲಿ ಹೇಳಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ರಾಜ್ಯಸಭೆ ಅಭ್ಯರ್ಥಿಗಳ ಪರವಾಗಿ ಮತದಾನ ಮಾಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ನಾವು 19 ಜನರು ಒಟ್ಟಾಗಿದ್ದೇವೆ ಎಂಬ ಸಂದೇಶವನ್ನು ಕೊಡಲು ಈ ಚುನಾವಣೆಯಲ್ಲಿ ಕುಪೇಂದ್ರ ರೆಡ್ಡಿಯನ್ನು ಕಣಕ್ಕಿಳಿಸಿದ್ದೇವೆ” ಎಂದರು.

“ಶರಣ್‌ಗೌಡ ಕಂದಕೂರ್‌ ನಮ್ಮ ಕುಟುಂಬದ ಸದಸ್ಯ. ಕುಟುಂಬದವರು ಎಲ್ಲರೂ ಒಟ್ಟಾಗಿದ್ದೇವೆ ಎಂದು ತಿಳಿಸುವ ಉದ್ದೇಶದಿಂದ ನಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿ ಕೆ ಶಿವಕುಮಾರ್‌ ಆರೋಪಕ್ಕೆ ಪ್ರತಿಕ್ರಿಯಿಸಿ, “ಆಮಿಷ ಹಾಗೂ ಧಮ್ಕಿ ಎಂಬುದು ಕಾಂಗ್ರೆಸ್ ಸಂಸ್ಕೃತಿ. ಸರ್ಕಾರ ರಚನೆಯಾದ ದಿನದಿಂದ 12, 13 ಶಾಸಕರು ಕಾಂಗ್ರೆಸ್ ಬರಲು ಸಿದ್ದ ಎಂದಿದ್ದರು. ನಮ್ಮ ಶಾಸಕರಿಗೆ ಆಮಿಷ ಒಡ್ಡುವ ಕೆಲಸ ನಡೆಯುತ್ತಿತ್ತು. ನಮ್ಮ ಶಾಸಕರ ಬದ್ಧತೆ, ನಿಷ್ಠೆ ಸಾಬೀತು ಪಡಿಸಲು ಕುಪೇಂದ್ರ ರೆಡ್ಡಿಯನ್ನು ಕಣಕ್ಕಿಳಿಸಿದ್ದೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಶ್ನಿಸದ ಸಂಸದರು, ಉತ್ತರಿಸದ ಪ್ರಧಾನಿ ಮತ್ತು ದಿಕ್ಕೆಟ್ಟ ದೇಶ

“ಎಸ್‌ ಟಿ ಸೋಮಶೇಖರ್‌ ಮೂರು ವರ್ಷ ಬಿಜೆಪಿಯಲ್ಲಿ ಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಅಭಿವೃದ್ಧಿ ಕಾರಣಕ್ಕಾಗಿ ಬಿಜೆಪಿ ಸೇರಿದ್ದರು. ಮಂತ್ರಿಯಾಗಿ ಅಭಿವೃದ್ಧಿ ಕಾರ್ಯಕ್ರಮ ಯಚೇತ್ತವಾಗಿ ಪಡೆದುಕೊಂಡಿದ್ದು, ಅದು ಅಭಿವೃದ್ಧಿ ಮಾಡಿದ್ದಾರೆ ಎಂದು ಅರ್ಥ ಅಲ್ಲವೇ” ಎಂದು ಪ್ರಶ್ನಿಸಿದರು.

ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಮಂಗಳವಾರ ವಿಧಾನಸೌಧದಲ್ಲಿ ಮತದಾನ ನಡೆಯುತ್ತಿದೆ. ನಾಲ್ಕು ಸ್ಥಾನಗಳಿಗೆ ಐವರು ಸ್ಪರ್ಧೆಯಲ್ಲಿದ್ದು, ಚುನಾವಣೆ ಕಾವು ರಂಗೇರಿದೆ.

ಕಾಂಗ್ರೆಸ್‌ನಿಂದ ಜಿ ಸಿ ಚಂದ್ರಶೇಖರ್‌, ನಾಸೀರ್‌ ಹುಸೇನ್‌, ಅಜಯ್‌ ಮಾಕೇನ್‌ ಸ್ಪರ್ಧಿಸಿದ್ದರೆ, ಬಿಜೆಪಿಯಿಂದ ನಾರಾಯಣಸಾ ಭಾಂಡಗೆ ಸ್ಪರ್ಧಿಸಿದ್ದಾರೆ. ಇನ್ನು, ಬಿಜೆಪಿ – ಜೆಡಿಎಸ್‌ ಮೈತ್ರಿಯಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಸ್ಪರ್ಧಿಸಿದ್ದಾರೆ. ಸಂಖ್ಯಾಬಲದ ಆಧಾರದ ಮೇಲೆ ಕಾಂಗ್ರೆಸ್‌ನ ಮೂರು ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...