ಮೋದಿಯ ಕೈಬಿಟ್ಟ ಶ್ರೀರಾಮ-ಹನುಮ; ಕೈ ಹಿಡಿದದ್ದು ಸಂವಿಧಾನ

Date:

ಇಂದು ಸಂಸತ್ತು ಅಚ್ಚರಿಯ ಘಟನೆಗೆ ಸಾಕ್ಷಿಯಾಗಿದೆ. ಎನ್‌ಡಿಎ ಸಂಸದರ ಸಭೆ ನಡೆಸಿದ ಪ್ರಧಾನಿ ಮೋದಿ, ಸಂವಿಧಾನಕ್ಕೆ ನಮಸ್ಕರಿಸಿದ್ದಾರೆ. ಅಂತೂ, ತಾವು ಡಾ. ಬಿ.ಆರ್. ಅಂಬೇಡ್ಕರ್ ಅವರು ಬರೆದ ಸಂವಿಧಾನವನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂಬುದನ್ನು ಮೋದಿ ಒಪ್ಪಿಕೊಂಡಂತಾಗಿದೆ.

ಮೋದಿ ಅವರ ಇಂದಿನ ನಡೆ ತಮ್ಮನ್ನು ಶ್ರೀರಾಮ, ಹನುಮಂತ ಕೊನೆವರೆಗೂ ಕೈಹಿಡಿಯುವುದಿಲ್ಲ. ಈ ಪ್ರಜಾಪ್ರಭುತ್ವದಲ್ಲಿ ಸಂವಿಧಾನವೇ ಅಂತಿಮ ಎಂಬುದನ್ನು ಅವರು ಅರಿತಂತೆ ಕಾಣುತ್ತಿದೆ.

2014ರಲ್ಲಿ ರಾಮಮಂದಿರ, ಶ್ರೀರಾಮನ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದ ಮೋದಿ, 10 ವರ್ಷಗಳ ಕಾಲ ಸರ್ವಾಧಿಕಾರಿಯ ಶೈಲಿಯಲ್ಲಿ ಆಡಳಿತ ನಡೆಸಿದರು. ಅವರ ಆಡಳಿತದಲ್ಲಿ ದೇಶಾದ್ಯಂತ ಹನುಮಂತನ ಹೆಸರಿನಲ್ಲಿ ನಾನಾ ಗಲಾಟೆ, ಗಲಭೆ, ಹಿಂಸಾಚಾರಗಳು ನಡೆದವು. ರಾಮ ರಾಜ್ಯ ಕಟ್ಟುತ್ತೇವೆಂದು ಮುಸ್ಲಿಂ ವಿರೋಧಿ ದ್ವೇಷ ಹರಡಿ, ಭಾರತವನ್ನು ಧರ್ಮದ ಆಧಾರದ ವಿಭಜಿಸಲು ಯತ್ನಿಸಿದರು. ಅಸಹಿಷ್ಣುತೆಯನ್ನು ಬಿತ್ತಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ರಾಮ, ಧರ್ಮ, ಭಜರಂಗಿ ಮಾತಿಗೆ ದೇಶದ ಕೆಲ ಯುವಜನರು ಬಲಿಯಾದರು. ಕೇಸರಿ ಧ್ವಜ ಹಿಡಿದು ದಾಂಧಲೆ ನಡೆಸಿದರು. ಮೋದಿಯೇ ವಿಶ್ವಗುರು – ಮೋದಿಯಿಂದ ಎಲ್ಲವೂ ಸಾಧ್ಯ ಎಂಬ ಭ್ರಮೆಯನ್ನು ಸಂಘಪರಿವಾರ ಯುವಜನರ ತಲೆಯಲ್ಲಿ ತುಂಬಿತು. ಈಗಲೂ, ಕೆಲ ಯುವಜನರು ಅದೇ ಗುಂಗಿನಲ್ಲಿದ್ದಾರೆ.

ಆದರೆ, ಆ ಭ್ರಮೆ ಮೋದಿಗೆ ಮತ್ತೆ ಪೂರ್ಣ ಪ್ರಮಾಣದ ಅಧಿಕಾರ ತಂದುಕೊಡಲಿಲ್ಲ. ಶ್ರೀರಾಮ, ಹನುಮಂತ, ಮಂದಿರ ಇದ್ಯಾವುದೂ ಮೋದಿ ಹಾಗೂ ಬಿಜೆಪಿಯ ಕೈಹಿಡಿಯಲಿಲ್ಲ. ಶ್ರೀರಾಮನ ರಾಮಮಂದಿರ ಇರುವ ಉತ್ತರ ಪ್ರದೇಶದ ಅಯೋಧ್ಯೆ(ಫೈಝಾಬಾದ್ ಲೋಕಸಭಾ ಕ್ಷೇತ್ರ) ಹಾಗೂ ಹನುಮಂತನ ಜನ್ಮಸ್ಥಳ, ಹಿಂದಿನ ಕಿಷ್ಕಿಂಧೆ ಎನ್ನಲಾದ ಕರ್ನಾಟಕದ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡಿದೆ. ಉತ್ತರದಲ್ಲಿ ರಾಮ, ದಕ್ಷಿಣದಲ್ಲಿ ಹನುಮ ಬಿಜೆಪಿಯ ಕೈಬಿಟ್ಟಿದ್ದಾರೆ.

ರಾಮ-ಹನುಮಂತನದ್ದೂ ಎನ್ನಲಾದ ಕ್ಷೇತ್ರಗಳಲ್ಲಿ ಪ್ರೀತಿ-ಸೌಹಾರ್ದತೆಗೆ ಜನರು ಮತ ಹಾಕಿದ್ದಾರೆ. ಸಂವಿಧಾನ, ಪ್ರಜಾಪ್ರಭುತ್ವವು ದೇಶದಲ್ಲಿ ಉಳಿಯಬೇಕು. ಸಮಾನತೆ, ಸಮಾಜವಾದದ ತತ್ವದೊಂದಿಗೆ ಭಾರತವು ಮುನ್ನಡೆಯಬೇಕು ಎಂಬುದನ್ನು ಸಾರಿದ್ದಾರೆ.

ಮತದಾರರು ದ್ವೇಷ, ವಿಭಜನೆಯ ವಿರುದ್ಧ ಮತ ಚಲಾಯಿಸಿದರೆ, ಮತ್ತೊಂದೆಡೆ, ಮೋದಿಯ ಸರ್ವಾಧಿಕಾರ ಅಡಗಿಹೋಗಿದೆ. ಮೋದಿ ಮತ್ತೆ ತನ್ನ ಸರ್ವಾಧಿಕಾರಿ ಧೋರಣೆಯನ್ನು ತೊಡೆದು, ಪ್ರಜಾಪ್ರಭುತ್ವದ ರಾಜಕಾರಣಕ್ಕೆ ಮರಳುತ್ತಿದ್ದಾರೆ. ಹೀಗಾಗಿಯೇ, ಸಂಸತ್‌ನಲ್ಲಿ ಸಂವಿಧಾನಕ್ಕೆ ನಮಿಸಿದ್ದಾರೆ. ಸಂವಿಧಾನವನ್ನು ತನ್ನ ಹಣೆಗೆ ಒತ್ತಿಕೊಂಡಿದ್ದಾರೆ.

ಚುನಾವಣೆಗೂ ಮುನ್ನ, ಬಿಜೆಪಿಯ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ, ಬಿಜೆಪಿ ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಿಸಲು. ಈ ಬಾರಿ ಬಿಜೆಪಿಗೆ 400 ಸ್ಥಾನಗಳನ್ನು ಕೊಟ್ಟರೆ, ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು.

ಅಲ್ಲದೆ, ಅಯೋಧ್ಯೆಯ ಬಿಜೆಪಿ ಅಭ್ಯರ್ಥಿ ಲಲ್ಲುಸಿಂಗ್, ರಾಜಸ್ಥಾನದ ನಾಗೌರ್‌ನ ಬಿಜೆಪಿ ಅಭ್ಯರ್ಥಿ ಜ್ಯೋತಿ ಮಿರ್ಧಾ ಸೇರಿದಂತೆ ಹಲವು ಬಿಜೆಪಿಗರು ಕೂಡ ಸಂವಿಧಾನ ಬದಲಿಸುವ ಹೇಳಿಕೆ ನೀಡಿದ್ದರು. ಆದರೆ, ಅವರೆಲ್ಲರನ್ನೂ ಸಂವಿಧಾನವೇ ಬದಲಿಸಿದೆ. ಎಲ್ಲರೂ ಸೋತು ಸುಣ್ಣವಾಗಿದ್ದಾರೆ. ಈ ದೇಶದ ಪರಮಶ್ರೇಷ್ಠ ಗ್ರಂಥವಾದ ಸಂವಿಧಾನವು ಬಿಜೆಪಿ ಅಹಂಕಾರದ ಬುಡಕ್ಕೆ ಕೊಡಲಿ ಏಟು ಕೊಟ್ಟಿದೆ.

ಅದಾಗ್ಯೂ, ಶ್ರೀರಾಮ-ಹನುಮಂತ ಕೈಬಿಟ್ಟ ಮೋದಿಯನ್ನು ಸಂವಿಧಾನವೇ ಮತ್ತೊಮ್ಮೆ ಪ್ರಧಾನಿಯಾಗಿ ಮಾಡುತ್ತಿದೆ. ಸಂವಿಧಾನ ಮೋದಿಯ ಕೈಹಿಡಿದಿದೆ. ಇನ್ನಾದರೂ, ಮೋದಿ-ಶಾ ತಮ್ಮ ಅಹಂಕಾರ, ಸರ್ವಾಧಿಕಾರ, ಏಕ ವ್ಯಕ್ತಿ ಆಡಳಿತವೆಂಬ ಹುಂಬತನವನ್ನು ಬಿಟ್ಟು, ಪ್ರಜಾಪ್ರಭುತ್ವದ ಆಶಯಕ್ಕೆ ತಲೆ ಬಾಗಿ ಆಡಳಿತ ನಡೆಸಲಿ. ಸಂವಿಧಾನದ ಆಶಯಗಳನ್ನು ಹೊತ್ತುಕೊಂಡು ನಡೆಯಲಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...