ಬೆಳೆ ಪರಿಹಾರಕ್ಕೆ ಸರ್ಕಾರ ₹500 ಕೊಟ್ಟರೆ ದೊಡ್ಡದು, ಅದು ಏನಕ್ಕೂ ಸಾಲಲ್ಲ: ಸಚಿವರ ಮುಂದೆ ರೈತನ ಅಳಲು

Date:

ರಾಮನಗರ ಜಿಲ್ಲೆಯ ಹಾರೋಹಳ್ಳಿ ಪಟ್ಟಣದಲ್ಲಿ ಬುಧವಾರ ತಾಲೂಕಿನ ಬರಪೀಡಿತ ಪ್ರದೇಶಗಳ ವೀಕ್ಷಣೆ ಮತ್ತು ರೈತರ ಜೊತೆ ಸಮಾಲೋಚನೆ ಕಾರ್ಯಕ್ರಮವು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ನಡೆಯಿತು.

ಈ ವೇಳೆ ರಾಮೋಹಳ್ಳಿಯ ರೈತ ರಾಮಚಂದ್ರ ಎಂಬುವವರು, ”ನಾವು ಬಿತ್ತನೆ ಮಾಡಿದ್ದರೂ ಮಳೆ‌‌ ಇಲ್ಲದೆ ಬೆಳೆ ಬರುವ ಗ್ಯಾರಂಟಿ‌ ಇಲ್ಲ. ನೀವು ಕೊಡುವ ಬರ ಪರಿಹಾರದ ಚೆಕ್ ಕೇವಲ ₹100, ₹150. ಹೆಚ್ಚಿಗೆ ಎಂದರೆ ₹500 ಕೊಟ್ಟರೆ ದೊಡ್ಡದು. ಇದು ಯಾವುದಕ್ಕೂ ಸಾಲುವುದಿಲ್ಲ. ಬೆಳೆಹಾನಿ ಮತ್ತು ಬರ ಪರಿಹಾರವು ರೈತರ ನಷ್ಟ ತುಂಬಿ ಕೊಡುವಂತಿರಬೇಕು” ಎಂದು ತನ್ನ ಅಳಲನ್ನು ತೋಡಿಕೊಂಡ ಬೆಳವಣಿಗೆ ನಡೆಯಿತು.

ಇದೇ ವೇಳೆ ಸಮಾಲೋಚನೆ ಕಾರ್ಯಕ್ರಮದಲ್ಲಿ ಹಲವು ಮಂದಿ ರೈತರು, ‘ಹಾರೋಹಳ್ಳಿ ಹಲವು ವಿಷಯದಲ್ಲಿ ಹಿಂದುಳಿದಿದೆ. ತಾಲೂಕು ಕಚೇರಿಗಳು, ಆಸ್ಪತ್ರೆ, ಶಾಲಾ- ಕಾಲೇಜು ಸೇರಿದಂತೆ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ. ಕೈಗಾರಿಕಾ ಪ್ರದೇಶವಿದ್ದರೂ ಜನ ಇಂದಿಗೂ ತಮ್ಮ ಕಸುಬನ್ನೇ ಅವಲಂಬಿಸಿದ್ದಾರೆ. ಬರದಿಂದ ತತ್ತರಿಸಿರುವ ಅವರ ನೆರವಿಗೆ ಸರ್ಕಾರ ಬರಬೇಕು’ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

Harohalli

ಇದಕ್ಕೆ ಸ್ಪಂದಿಸಿದ ಸಚಿವ ರಾಮಲಿಂಗಾರೆಡ್ಡಿ, ‘ಕೇಂದ್ರ ಸರ್ಕಾರ ಸ್ಪಂದಿಸದಿದ್ದರೂ, ರಾಜ್ಯ ಸರ್ಕಾರ ಸದಾ ರೈತರ ಪರವಾಗಿರಲಿದೆ. ಅನ್ನದಾತರ ಸಮಸ್ಯೆಗಳಿಗೆ ಸ್ಪಂದಿಸುವ ಜೊತೆಗೆ, ಹೊಸ ತಾಲೂಕು ಆಗಿರುವ ಹಾರೋಹಳ್ಳಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ’ ಎಂದು ಭರವಸೆ ನೀಡಿದರು.

ಇದೇ ವೇಳೆ ಕಾರ್ಯಕ್ರಮದಲ್ಲಿದ್ದ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಮಾತನಾಡಿ, ‘ನಾವೆಲ್ಲರೂ ರೈತಾಪಿ ವರ್ಗದವರು. ರೇಷ್ಮೆ ಮತ್ತು ಹಾಲು ಉತ್ಪಾದನೆಯೇ ನಮ್ಮ ಬದುಕಿಗೆ ಆಧಾರ. ಈ ಸಲ ಬರದಿಂದಾಗಿ ಇವುಗಳ ಮೇಲೆ ಕರಿಮೋಡ ಆವರಿಸಿದೆ. ಮಳೆ ಕೊರತೆಯಿಂದಾಗಿ ಬಿತ್ತನೆ ಕುಂಠಿತವಾಗಿದೆ. ಹಾಲು ಖರೀದಿ ದರ ಕಡಿತ ಮಾಡಿರುವುದು ಹೈನುಗಾರಿಕೆ ನೆಚ್ಚಿಕೊಂಡಿರುವವರಿಗೆ ಹೊಡೆತ ಕೊಟ್ಟಿದೆ. ರೇಷ್ಮೆಗೆ ಪ್ರೋತ್ಸಾಹ ಸಿಗುವ ನಿರೀಕ್ಷೆಯಲ್ಲಿ ರೈತರು ಇದ್ದಾರೆ’ ಎಂದು ಸಚಿವರಲ್ಲಿ ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...