ಕರ್ನಾಟಕದ ಗೆಲುವಿನ ಪಯಣ ಪಂಚ ರಾಜ್ಯಗಳಿಗೂ ವಿಸ್ತರಿಸಲಿದೆ: ರಾಹುಲ್‌ ಗಾಂಧಿ  

Date:

ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ ಮತ್ತು ಮಿಜೋರಾಂನಲ್ಲಿ ನಡೆಯುವ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಲಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೂ ಅಚ್ಚರಿ ಕಾದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಹೇಳಿದರು.

ನವದೆಹಲಿಯಲ್ಲಿ ಅಸ್ಸಾಂನ ಪ್ರತಿದಿನ್ ಮೀಡಿಯಾ ನೆಟ್‌ವರ್ಕ್ ಆಯೋಜಿಸಿದ್ದ ‘ದಿ ಕಾನ್‌ಕ್ಲೇವ್ 2023’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಕರ್ನಾಟಕದಲ್ಲಿ ನಾವು ಏನು ಮಾಡಿದ್ದೇವೆ, ಬಿಜೆಪಿಯು ನಿರೂಪಣೆಯನ್ನು ವ್ಯಾಖ್ಯಾನಿಸಲು ಸಾಧ್ಯವಾಗದ ರೀತಿಯಲ್ಲಿ ನಾವು ಚುನಾವಣೆಯನ್ನು ಎದುರಿಸಿದ್ದೇವೆ. ಇಂದು ನೀವು ನೋಡುತ್ತಿರುವ ಸಂಸದ ಬಿಧುರಿ, ತದನಂತರ ಇದ್ದಕ್ಕಿದ್ದಂತೆ ಪ್ರತ್ಯಕ್ಷಗೊಳ್ಳುವ ನಿಶಿಕಾಂತ್ ದುಬೆ. ಬಿಜೆಪಿಯ ಇವರೆಲ್ಲರೂ ಜಾತಿ ಗಣತಿಯ ಕಲ್ಪನೆಯನ್ನು ವಿಚಲಿತಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಜಾತಿ ಗಣತಿ ಕಲ್ಪನೆಯು ಜನರು ಬಯಸುತ್ತಿರುವ ಮೂಲಭೂತ ವಿಷಯ ಎಂದು ಅವರಿಗೆ ತಿಳಿದಿದೆ. ಈ ಗಮನವನ್ನು ಬೇರೆ ಸೆಳೆಯುವುದಕ್ಕೆ ಜನರಲ್ಲಿ ಕೋಮು ಭಾವನೆಗಳನ್ನು ಹುಟ್ಟುಹಾಕಲು ಪ್ರಯತ್ನಿಸುತ್ತಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಷಸರ್ಪದ ಸಂತತಿಯ ಸಖ್ಯವೇ ಸುಖವಾಯಿತಾ ಕುಮಾರಣ್ಣ!?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿಯು ನಮ್ಮ ಉದ್ದೇಶಗಳನ್ನು ವಿಸ್ತರಿಸಲು ಅವಕಾಶ ನೀಡದೆ ವಿಚಲಿತಗೊಳಿಸುವ ಮೂಲಕ ಚುನಾವಣೆಗಳನ್ನು ಗೆಲ್ಲುತ್ತದೆ. ಅದನ್ನು ಹೇಗೆ ಎದುರಿಸಬೇಕೆಂದು ನಾವು ಕಲಿತಿದ್ದೇವೆ. ಈಗ, ಬಿಜೆಪಿ ಏನು ಮಾಡಲು ಪ್ರಯತ್ನಿಸಿದರೂ, ನಾವು ಅವರ ಕುತಂತ್ರವನ್ನು ನಿಯಂತ್ರಿಸುತ್ತೇವೆ. ಕರ್ನಾಟಕ ವಿಧಾನಸಭಾ ಚುನಾವಣೆ ಗೆಲುವಿನ ಮೂಲಕ ಕಾಂಗ್ರೆಸ್ ಮಹತ್ವದ ಪಾಠವೊಂದನ್ನು ಕಲಿತಿದೆ. ಮುಂದಿನ ಪಂಚ ರಾಜ್ಯಗಳಿಗೂ ನಮ್ಮ ಜಯ ಸಾಗಲಿದೆ” ಎಂದು ರಾಹುಲ್‌ ಗಾಂಧಿ ಹೇಳಿದರು.

“ಅದಾನಿ ಅವರು ನಮ್ಮ ದೇಶದ ಪ್ರಮುಖ ಕೈಗಾರಿಕೆಗಳ ನಿಯಂತ್ರಣವನ್ನು ಹೊಂದಿದ್ದಾರೆ. ಅವರು ಮಾಧ್ಯಮದ ಗಮನಾರ್ಹ ಭಾಗವನ್ನು ಸಹ ನಿಯಂತ್ರಿಸುತ್ತಾರೆ. ಬಿಜೆಪಿಯು ಇದರಿಂದ ಗಣನೀಯ ಪ್ರಮಾಣದ ಲಾಭವನ್ನು ಪಡೆಯುತ್ತಿದೆ. ಯಾವುದೇ ಉದ್ಯಮಿ ವಿರೋಧ ಪಕ್ಷವನ್ನು ಬೆಂಬಲಿಸಿದಾಗ ಅವರಿಗೆ ಏನಾಗುತ್ತದೆ ಎಂದು ದಯವಿಟ್ಟು ಅದೇ ಉದ್ಯಮಿಯನ್ನು ಒಮ್ಮೆ ಕೇಳಿ. ಈ ಸವಾಲುಗಳ ನಡುವೆಯೂ ನಾವು ಉತ್ತಮ ಪ್ರದರ್ಶನ ನೀಡುತ್ತಿದ್ದೇವೆ. ನಾವು ಒಂದಾಗಿದ್ದೇವೆ. ವಿರೋಧ ಪಕ್ಷಗಳು ಈ ರೀತಿ ಕೆಲಸ ಮಾಡುವುದನ್ನು ನಾನು ಹಿಂದೆಂದೂ ನೋಡಿಲ್ಲ” ಎಂದು ರಾಹುಲ್‌ ತಿಳಿಸಿದರು.

“ಭಾರತದಲ್ಲಿನ ಪ್ರಮುಖ ಸಮಸ್ಯೆಗಳೆಂದರೆ ಸಂಪತ್ತಿನ ಕೇಂದ್ರೀಕರಣ, ಸಂಪತ್ತಿನಲ್ಲಿ ಭಾರಿ ಅಸಮಾನತೆ, ಬೃಹತ್ ನಿರುದ್ಯೋಗ, ದಲಿತರು, ಒಬಿಸಿ ಮತ್ತು ಬುಡಕಟ್ಟು ಸಮುದಾಯಗಳಿಗೆ ಭಾರಿ ಅನ್ಯಾಯ ಮತ್ತು ಬೆಲೆ ಏರಿಕೆಗಳಾಗಿವೆ. ನಾವು ಭಾರತದ ಕಲ್ಪನೆಯನ್ನು ರಕ್ಷಿಸಲು ಹೋರಾಡುತ್ತಿದ್ದೇವೆ. ಅದಕ್ಕಾಗಿಯೇ ನಾವು ನಮ್ಮ ಹೆಸರನ್ನು ಇಂಡಿಯಾ ಎಂದು ಇಟ್ಟುಕೊಂಡಿದ್ದೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...