ರಾಮನಗರ ರೈತರ ಜಿಲ್ಲೆಯಾಗಬೇಕೇ ಹೊರತು ರಿಯಲ್ ಎಸ್ಟೇಟ್‌ ತಾಣವಲ್ಲ: ಸಿಎಂಗೆ ಸಂಸದ ಸಿ ಎನ್ ಮಂಜುನಾಥ್ ಪತ್ರ

Date:

ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವುದು ಯಾವುದೇ ಕಾರಣಕ್ಕೂ ಸಮಂಜಸವಲ್ಲ. ಬೆಂಗಳೂರು ಬ್ರಾಂಡ್ ಹೆಸರಿನಲ್ಲಿ ಅಭಿವೃದ್ಧಿಗಾಗಿ ರಾಮನಗರ ಜಿಲ್ಲೆಯ ಹೆಸರು ಬದಲಿಸುವ ಬದಲು, ರಾಮನಗರವನ್ನೇ ಬ್ರಾಂಡ್ ಮಾಡಿಕೊಂಡು ಅಭಿವೃದ್ಧಿ ಮಾಡಬೇಕು ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ. ಸಿ ಎನ್ ಮಂಜುನಾಥ್ ಆಗ್ರಹಿಸಿದ್ದಾರೆ.

ಮರುನಾಮಕರಣ ಪ್ರಸ್ತಾವವನ್ನು ತಿರಸ್ಕರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, “ಅಭಿವೃದ್ಧಿ ಮತ್ತು ಆಡಳಿತಾತ್ಮಕ ದೃಷ್ಟಿಯಿಂದ 17 ವರ್ಷಗಳ ಹಿಂದೆ ಜಿಲ್ಲೆಯನ್ನು ರಚಿಸಲಾಗಿದೆ. ಈಗಾಗಲೇ ವಿಸ್ತಾರವಾಗಿರುವ ಬೆಂಗಳೂರು ಮಹಾನಗರದ ಜನರಿಗೆ ಮೂಲಸೌಕರ್ಯ ಒದಗಿಸುವುದೇ ಸವಾಲಾಗಿದೆ. ಹೀಗಿರುವಾಗ, ಸುಂದರವಾಗಿರುವ ರಾಮನಗರವನ್ನು ಅಲ್ಲಿಗೆ ಜೋಡಿಸುವುದು ಅವೈಜ್ಞಾನಿಕ” ಎಂದಿದ್ದಾರೆ.

“ಕೇವಲ ಬೆಂಗಳೂರು ಎಂಬ ಹೆಸರಿನಿಂದಲೇ ಜಿಲ್ಲೆಯು ಅಭಿವೃದ್ಧಿಯಾಗುತ್ತದೆ ಸರಿಯಲ್ಲ. ಹಾಗಿದ್ದರೆ ಕರ್ನಾಟಕ ಏಕೀಕರಣವಾದಾಗಿನಿಂದಲೂ ರಾಮನಗರ 1986ರವರೆಗೆ ಬೆಂಗಳೂರು ಜಿಲ್ಲೆಯಲ್ಲಿ ಮತ್ತು 2007ರವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಭಾಗವಾಗಿತ್ತು. ಹೀಗಿದ್ದರೂ ಯಾಕೆ ಅಭಿವೃದ್ಧಿ ಆಗಲಿಲ್ಲ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಮನಗರ ಜಿಲ್ಲೆಯು ರೈತರ ಜಿಲ್ಲೆಯಾಗಿರಬೇಕೇ ಹೊರತು ರಿಯಲ್ ಎಸ್ಟೇಟ್‌ ತಾಣವಾಗವಾರದು. ಇಲ್ಲಿನ ಭೂಮಿಗೆ ಹೆಚ್ಚಿನ ಬೆಲೆ ಸಿಗುವ ಬದಲು, ಈ ಭೂಮಿಯಲ್ಲಿ ಬೆಳೆಯುವ ಬೆಳೆಗಳಿಗೆ ಉತ್ತಮ ಬೆಲೆ ಸಿಗುವಂತಾಗಬೇಕು” ಎಂದು ಹೇಳಿದ್ದಾರೆ.

“ಈಗಾಗಲೇ ರಾಜಧಾನಿಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರವಿದೆ. ಈ ನಗರದ ಜಿಲ್ಲೆಯೊಳಗೆ ಬೆಂಗಳೂರು ದಕ್ಷಿಣ ತಾಲ್ಲೂಕು ಇದೆ. ಹೀಗಿರುವಾಗ ರಾಮನಗರದ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಿಸಿದರೆ ಹಲವು ಗೊಂದಲಗಳು ಸೃಷ್ಟಿಯಾಗುತ್ತವೆ. ಅಲ್ಲದೆ ಮುಂದಿನ ದಿನಗಳಲ್ಲಿ ಕೋಲಾರ ಜಿಲ್ಲೆಗೆ ಬೆಂಗಳೂರು ಪೂರ್ವ ಚಿಕ್ಕಬಳ್ಳಾಪುರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ಮರುನಾಮಕರಣ ಮಾಡಿ ಎಂಬ ಪ್ರಸ್ತಾವಗಳು ಬರಬಹುದು. ಹಾಗಾಗಿ ಜಿಲ್ಲೆ ಹೆಸರು ಮರುನಾಮಕರಣದ ಪ್ರಸ್ತಾವ ತಿರಸ್ಕರಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ರಾಮನಗರಕ್ಕೆ ಪೌರಾಣಿಕ, ಐತಿಹಾಸಿಕ, ಧಾರ್ಮಿಕ ಹಾಗೂ ಭಾವನಾತ್ಮಕ ಹಿನ್ನೆಲೆ ಇದೆ. ಕ್ಲೋಸ್‌ಪೇಟೆಯಾಗಿದ್ದ ಈ ಊರಿಗೆ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರು ರಾಮನಗರ ಎಂದು ನಾಮಕರಣ ಮಾಡಿದರು. ಧಾರ್ಮಿಕ ಗುರುಗಳಾದ ಆದಿಚುಂಚನಗಿರಿಯ ಬಾಲಗಂಗಾಧರನಾಥ ಸ್ವಾಮೀಜಿ, ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ, ಬೆಂಗಳೂರು ನಿರ್ಮಾತೃ ಕೆಂಪೇಗೌಡರು ಇಲ್ಲಿಯವರು. ಜಿಲ್ಲೆಯು ರಾಜ್ಯಕ್ಕೆ ಐದು ಬಾರಿ ಮುಖ್ಯಮಂತ್ರಿ ಪದವಿ ನೀಡಿದೆ. ಇಲ್ಲಿ ಗೆದ್ದು ಮುಖ್ಯಮಂತ್ರಿಯಾಗಿದ್ದ ಎಚ್‌.ಡಿ. ದೇವೇಗೌಡರು ಪ್ರಧಾನಿ ಹುದ್ದೆ ಅಲಂಕರಿಸಿದ್ದರು. ರೇಷ್ಮೆ ನಾಡು ಖ್ಯಾತಿಯ ನಗರವು ವಿಶೇಷ ಬೆಟ್ಟಗುಡ್ಡ, ದೇವಸ್ಥಾನ, ನದಿಗಳು ಸೇರಿದಂತೆ ಹಲವು ಹಿರಿಮೆಗಳನ್ನು ಹೊಂದಿದೆ. ಅದನ್ನು ರಾಮನಗರ ಜಿಲ್ಲೆ ಹೆಸರಿನಲ್ಲೇ ಉಳಿಸಿಕೊಳ್ಳಬೇಕು” ಎಂದು ಪ್ರತಿಪಾದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...