ರನ್ಯಾ ರಾವ್ ಕೇಸ್‌ | ಬೆಂಕಿ ಇಲ್ಲದೆ ಹೊಗೆ ಆಡಲ್ಲ, ಸತ್ಯಾಂಶ ಹೊರ ಬರಲಿ: ಬಿ ವೈ ವಿಜಯೇಂದ್ರ

Date:

ರಾಜ್ಯವು ಅಭಿವೃದ್ಧಿಯೇ ಕಾಣದ ಕೆಟ್ಟ ಪರಿಸ್ಥಿತಿಗೆ ಬಂದು ನಿಂತಿದೆ. ಈ ಸರಕಾರದ ಆಡಳಿತ ವೈಖರಿಯನ್ನು ರಾಜ್ಯದ ಜನರು ಗಮನಿಸುತ್ತಿದ್ದಾರೆ. ನಟಿ ರನ್ಯಾ ರಾವ್ ಚಿನ್ನ ಸ್ಮಗ್ಲಿಂಗ್ ಪ್ರಕರಣ ನೋಡಿದರೆ ಬೆಂಕಿ ಇಲ್ಲದೆ ಹೊಗೆ ಆಡಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಬಾಳೆಹೊನ್ನೂರಿನಲ್ಲಿ ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿ, “ರನ್ಯಾ ರಾವ್ ಚಿನ್ನ ಸ್ಮಗ್ಲಿಂಗ್ ಹಿಂದೆ ಕೆಲವು ಸಚಿವರು ಇರುವ ಮಾಹಿತಿ ಇದೆ. ಪ್ರಮುಖ ಪತ್ರಿಕೆಗಳಲ್ಲೂ ಈ ವಿಷಯ ಪ್ರಕಟಗೊಂಡಿದೆ. ಬೆಂಕಿ ಇಲ್ಲದೆ ಹೊಗೆ ಆಡುವುದಿಲ್ಲ. ಇಂಥ ಗಂಭೀರ ಪ್ರಕರಣವು ಯಾರದೋ ಬೆಂಬಲ ಇಲ್ಲದೆ ಆಗಲು ಸಾಧ್ಯ ಇಲ್ಲ” ಎಂದು ತಿಳಿಸಿದರು.

“ಒಬ್ಬ ಹಿರಿಯ ಐಪಿಎಸ್ ಅಧಿಕಾರಿಯ ಮಗಳು ಎಂಬುದು ಒಂದು ಕಡೆಯಾದರೆ, ಸಚಿವರ ಬೆಂಬಲದ ವಿಷಯವೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸತ್ಯಾಂಶ ತನಿಖೆ ನಂತರ ಹೊರಕ್ಕೆ ಬರಲಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್ ಸರಕಾರವು ಅಧಿಕಾರ ವಹಿಸಿಕೊಂಡು 20 ತಿಂಗಳಾಗಿದೆ. ರಸ್ತೆಗಳು, ಆಸ್ಪತ್ರೆಗಳು, ಶಾಲಾ ಕೊಠಡಿಗಳನ್ನೂ ಕೊಡದ ಕೆಟ್ಟ ಪರಿಸ್ಥಿತಿಗೆ ಬಂದು ನಿಂತಿದೆ. ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಕ್ಷೇತ್ರಗಳಿಗೆ ಮುಖ್ಯಮಂತ್ರಿಗಳು ಅನುದಾನ ನೀಡದ ಕಾರಣ ಶಾಸಕರು ಒಂದುರೀತಿ ಅಸಹಾಯಕರಾಗಿದ್ದಾರೆ. ಕ್ಷೇತ್ರಗಳಲ್ಲಿ ಓಡಾಡಲಾಗದ ಸ್ಥಿತಿ ಇದೆ ಎಂಬ ಭಾವನೆಯನ್ನು ಆಡಳಿತ ಪಕ್ಷದ ಶಾಸಕರೂ ತೋಡಿಕೊಂಡಿದ್ದಾರೆ” ಎಂದರು.

“ಬಾಳೆಹೊನ್ನೂರಿನ ರಂಭಾಪುರಿ ಶ್ರೀಗಳು ಎಲ್ಲ ಸಂದರ್ಭದಲ್ಲೂ ಯಡಿಯೂರಪ್ಪ ಅವರ ಪರವಾಗಿ ಧ್ವನಿ ಎತ್ತಿದವರು. ಈ ಪುಣ್ಯಕ್ಷೇತ್ರದ ಕಾರ್ಯಕ್ರಮ ನಿಮಿತ್ತ ಬಂದಿದ್ದೇನೆ ಎಂದ ಅವರು, ಜಗದ್ಗುರುಗಳಿಗೆ ವಿಜಯೇಂದ್ರ ಬಗ್ಗೆ ಸಾಕಷ್ಟು ನಿರೀಕ್ಷೆ, ಅಪೇಕ್ಷೆ ಇದೆ. ವಿಜಯೇಂದ್ರ ಅವರು ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗಬೇಕೆಂಬ ಸಂದೇಶವನ್ನು ಜಗದ್ಗುರುಗಳು ನೀಡಿದ್ದಾರೆ” ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

“ಕೇಂದ್ರದ ವರಿಷ್ಠರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಎಲ್ಲವೂ ತಾರ್ಕಿಕ ಅಂತ್ಯಕ್ಕೆ ಬರುವ ಸಂದರ್ಭದಲ್ಲಿ ಸಮಾಜದ ಸಭೆಗಳನ್ನು ಮಾಡುವುದು ಸರಿಯಲ್ಲ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು. ಇದು ಬೂಟಾಟಿಕೆಯ ಮಾತಲ್ಲ; ನಾನು ರಾಜ್ಯಾಧ್ಯಕ್ಷನಾಗಿರುವ ಈ ಸಂದರ್ಭದಲ್ಲಿ ಈ ರೀತಿಯ ಜಾತಿ ಸಮಾವೇಶ ಮಾಡುವುದು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಲಾಭ ತರುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...