ಅತ್ಯಾಚಾರ ಪ್ರಕರಣ | ಮತದಾನ ಮುಗಿಯುವವರೆಗೂ ಪ್ರಜ್ವಲ್‌ ರಾಜ್ಯಕ್ಕೆ ಬರುವುದು ಅನುಮಾನ!

Date:

ನೂರಾರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್‌ ರೇವಣ್ಣ ರಾಜ್ಯದಲ್ಲಿ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ರಾಜ್ಯಕ್ಕೆ ಬರುವುದು ಅನುಮಾನ ಎನ್ನಲಾಗಿದೆ.

ಮಹಿಳೆಯ ಅಪಹರಣ ಪ್ರಕರಣದಲ್ಲಿ ತಂದೆ ಹೆಚ್‌ ಡಿ ರೇವಣ್ಣ ಬಂಧನವಾಗುತ್ತಿದ್ದಂತೆ ಪುತ್ರ ಪ್ರಜ್ವಲ್‌ ರೇವಣ್ಣ ಕೂಡ ಎಸ್‌ಐಟಿಗೆ ಶರಣಾಗಲಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಭಾನುವಾರ ಪ್ರಜ್ವಲ್‌ನ ಬಂಧನ ಆಗಿಯೇ ಬಿಡುತ್ತದೆ ಎನ್ನುವ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರವಾಯಿತು. ಸಂಜೆಯಿಂದಲೇ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರಜ್ವಲ್‌ ಆಗಮನಕ್ಕಾಗಿ ನೂರಾರು ಮಾಧ್ಯಮ ಪ್ರತಿನಿಧಿಗಳು ಕಾಯುತ್ತಿರುವುದು ಕಂಡುಬಂತು.

ದುಬೈಯಿಂದ 7ಗಂಟೆಗೆ ಬಂದಿಳಿದ ವಿಮಾನದಲ್ಲಿ ಪ್ರಜ್ವಲ್‌ ಬರಲಿಲ್ಲ. ನಿರಾಸೆಯಿಂದ ಎಲ್ಲರೂ ಮರಳಿದರು. ರಾತ್ರಿ ಆಗಮಿಸುವ ನಿರೀಕ್ಷೆ ಇತ್ತು. ಆಗಲೂ ಪ್ರಜ್ವಲ್‌ ಬರಲಿಲ್ಲ. ಈ ವಿಳಂಬಕ್ಕೆ ನಾಳೆಯ ಮತದಾನ ಕಾರಣ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣೆ ಹೊತ್ತಲ್ಲಿ ದೇಶಾದ್ಯಂತ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಕೇಸ್ ಭಾರಿ ಸದ್ದು ಮಾಡುತ್ತಿದೆ. ಕಾಂಗ್ರೆಸ್ ಇದನ್ನೇ ಅಸ್ತ್ರ ಮಾಡಿಕೊಂಡು ಬಿಜೆಪಿ, ಜೆಡಿಎಸ್ ಮೈತ್ರಿಯನ್ನು ಟೀಕಿಸುತ್ತಿದೆ. ರಾಷ್ಟ್ರ ನಾಯಕರೂ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಲು ಪ್ರಜ್ವಲ್ ಕೇಸ್ ಅ​ನ್ನೇ ದಾಳ ಮಾಡಿಕೊಂಡಿದ್ದಾರೆ. ಹೀಗಾಗಿ ಮತದಾನದ ಹಿಂದಿನ ದಿನ ಅಥವಾ ಮತದಾನದ ದಿನ ಪ್ರಜ್ವಲ್ ಬಂಧನವಾದರೆ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಮುಜುಗರ ಉಂಟಾಗಿ ಮತದಾರರ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿಂದ ಪ್ರಜ್ವಲ್‌ಗೆ ಮತದಾನ ಮುಗಿಯುವವರೆಗೂ ರಾಜ್ಯಕ್ಕೆ ಬರದಂತೆ ಸೂಚನೆ ನೀಡಲಾಗಿದೆಯಾ ಎನ್ನುವ ಅನುಮಾನ ಮೂಡುತ್ತಿದೆ.

ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿದ ದಿನವೇ, ಅಂದರೆ ಏಪ್ರಿಲ್ 26ರ ಮಧ್ಯರಾತ್ರಿಯೇ ಪ್ರಜ್ವಲ್ ದೇಶ ಬಿಟ್ಟು ಹೊರದೇಶಕ್ಕೆ ಹೋಗಿ ತಲೆಮರೆಸಿಕೊಂಡಿದ್ದರು. ಮೇ 5ರಂದೇ ಪ್ರಜ್ವಲ್ ಬೆಂಗಳೂರಿಗೆ ಆಗಮಿಸುವ ಪುಕಾರು ಹಬ್ಬಿತ್ತು. ಬೆಂಗಳೂರು, ಮಂಗಳೂರು, ಗೋವಾ ಅಥವಾ ಕೊಚ್ಚಿ ಏರ್​ಪೋರ್ಟ್​ಗಳಲ್ಲಿ ಎಸ್​ಐಟಿ ಅಧಿಕಾರಿಗಳು ಕಾದು ಕುಳಿತಿದ್ದರು. ಆದರೆ ಪ್ರಜ್ವಲ್ ಬರಲೇ ಇಲ್ಲ.

ಮೂಲಗಳ ಪ್ರಕಾರ ರಾಜ್ಯದ 2ನೇ ಹಂತದ ಮತದಾನ ಬಳಿಕ ಪ್ರಜ್ವಲ್ ಶರಣಾಗತಿಯಾಗುವ ಸಾಧ್ಯತೆ ಇದೆ. ಈ ಮಧ್ಯೆ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಲು ಸಿಬಿಐಗೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಮನವಿ ಮಾಡಿದ್ದಾರೆ. ಪ್ರಜ್ವಲ್​ಗೆ ನೋಟಿಸ್ ನೀಡಲು ಮಹಿಳಾ ಆಯೋಗವೂ ಸಿದ್ಧತೆ ನಡೆಸಿದೆ.

ಪ್ರಜ್ವಲ್​ಗಾಗಿ ಎಸ್​ಐಟಿ ಅಧಿಕಾರಿಗಳು ಎರಡು ದಿನದಿಂದ ಕಾಯುತ್ತಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲೇ ಎಸ್​ಐಟಿ ಅಧಿಕಾರಿಗಳು ಠಿಕಾಣಿ ಹೂಡಿದ್ದು, ಇಮಿಗ್ರೇಷನ್​ನಲ್ಲಿ ಬೆಂಗಳೂರಿಗೆ ಬರುವ ವಿಮಾನಗಳ ಪ್ರಯಾಣಿಕರ ಲಿಸ್ಟ್ ಪರಿಶೀಲನೆ ನಡೆಸಿದ್ದಾರೆ. ಪ್ರಜ್ವಲ್ ಪಾಸ್​ಪೋರ್ಟ್ ನಂಬರ್ ಸಮೇತ ಟಿಕೆಟ್ ಪರಿಶೀಲನೆ ಮಾಡಿದ್ದಾರೆ. ಆದರೆ, ಈವರೆಗೂ ಯಾವುದೇ ಫ್ಲೈಟ್​ನಲ್ಲಿ ಪ್ರಜ್ವಲ್ ಟಿಕೆಟ್ ಬುಕ್ ಆಗಿಲ್ಲ. ದುಬೈ, ಮಸ್ಕತ್, ಫ್ರಾಂಕ್​ಫರ್ಟ್ ಸೇರಿ ಹಲವು ದೇಶಗಳ ವಿಮಾನಗಳ ಮೇಲೂ ಹದ್ದಿನ ಕಣ್ಣು ಇಡಲಾಗಿದೆ. ಎರಡು ಪಾಳಿಯಲ್ಲಿ ಎರಡು ತಂಡಗಳಿಂದ ಏರ್ಪೋಟ್​ನಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಪ್ರಜ್ವಲ್​ಗೆ ಬಂದರೆ ಏರ್ಪೋಟ್​ನಿಂದಲೇ ವಶಕ್ಕೆ ಪಡೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...