ರೇಟ್ ಫಿಕ್ಸ್, ಬ್ಲ್ಯಾಕ್‌ಮೇಲ್ ಮಾಡುವುದು ಕುಮಾರಸ್ವಾಮಿ ಗುಣ: ಡಿಸಿಎಂ ಡಿ.ಕೆ.ಶಿವಕುಮಾರ್

Date:

“ಕುಮಾರಸ್ವಾಮಿ ಅವರು ಯಾವ ರೇಟು, ಎಂತಹ ರೇಟು ಎಂದು ಹೇಳಬೇಕು. ಕುಮಾರಣ್ಣ, ರೇಟ್ ಫಿಕ್ಸ್ ಮಾಡುವ ಚಾಳಿ ನಿನಗೆ ಇರಬೇಕು. ಅದನ್ನು ಬೇರೆಯವರ ಮೇಲೆ ಹಾಕುತ್ತಿದ್ದೀರಾ. ನಾವು ರಾಜ್ಯದ ಮಹಿಳೆಯರು ಬದುಕು ಕಟ್ಟಿಕೊಳ್ಳಲು ಗ್ಯಾರಂಟಿ ನೀಡಿದ್ದೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ.

“ಮಹಿಳೆಯರಿಗೆ ಡಿ.ಕೆ.ಶಿವಕುಮಾರ್ ರೇಟ್ ಫಿಕ್ಸ್ ಮಾಡುತ್ತಾರೆ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ಜನರ ಜೇಬು ಪಿಕ್ ಪಾಕೇಟ್ ಮಾಡುತ್ತಿದೆ” ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಆರೋಪಕ್ಕೆ ಡಿಸಿಎಂ ತಿರುಗೇಟು ನೀಡಿದ್ದಾರೆ.

ಏಕವಚನದಲ್ಲೇ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಡಿಸಿಎಂ, “ಅವನಿಗೆ ಪಿಕ್ ಪಾಕೆಟ್ ಮಾಡಿ ರೂಢಿ ಅಲ್ಲವೇ? ಹೆದರಿಸಿ, ಬೆದರಿಸಿ ಬ್ಲಾಕ್ ಮೇಲ್ ಮಾಡುವುದು, ಹಿಟ್ ಅಂಡ್ ರನ್ ಮಾಡುವುದು ಅವನ ಕೆಲಸ. ಮಹಿಳೆಯರು ತಿರುಗಿ ಬಿದ್ದಿರುವ ಕಾರಣ ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿ, ನನ್ನನ್ನು ಟೀಕಿಸುತ್ತಿದ್ದಾನೆ. ಹೆದರಿಕೊಂಡು ಪಕ್ಕದ ಜಿಲ್ಲೆಗೆ ಹೋಗಿರುವ ಮಿಸ್ಟರ್ ಕುಮಾರಸ್ವಾಮಿ, ನೀನು ಯಾವುದೇ ಕಾರಣಕ್ಕೂ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವುದಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇವೇಗೌಡರನ್ನು ಪ್ರಧಾನಿ ಸ್ಥಾನದಲ್ಲಿ ಕೂರಿಸಿದ್ದೇ ಕಾಂಗ್ರೆಸ್. ಅವರ ಎಲ್ಲ ಆರೋಪಗಳಿಗೆ ಉತ್ತರಿಸುತ್ತೇನೆ. ಅವರಿಗೆ ಸದನಕ್ಕೆ ಬರಲು ಹೇಳಿ” ಎಂದು ಡಿ.ಕೆ. ಶಿವಕುಮಾರ್ ಸವಾಲೆಸೆದಿದ್ದಾರೆ.

“ಯಾವುದೇ ಆರೋಪಕ್ಕೂ ದಾಖಲೆ ಇರಬೇಕಲ್ಲವೇ? ಹೀಗಾಗಿ ನನ್ನ ಆಸ್ತಿ, ಅವರ ಆಸ್ತಿ ಬಗ್ಗೆ ಸದನದಲ್ಲಿ ಚರ್ಚಿಸಲು ನಾನು ಆಹ್ವಾನ ನೀಡಿದ್ದೆ. ಆತ ಸದನಕ್ಕೇ ಬರಲಿಲ್ಲ. ಅವರ ಕುಟುಂಬದ ಎಲ್ಲ ಸದಸ್ಯರ ಆಸ್ತಿ ಬೆಂಗಳೂರು ಸುತ್ತಮುತ್ತ ಎಷ್ಟಿತ್ತು ಎಂದು ನಾನು ದಾಖಲೆಗಳನ್ನು ತರುತ್ತೇನೆ. ನಾನು ಕಲ್ಲು ಹೊಡೆದಿದ್ದೇನೆಯೇ, ಲೂಟಿ ಮಾಡಿದ್ದೇನೆಯೇ ಎಂಬುದು ಸದನದಲ್ಲಿ ತೀರ್ಮಾನವಾಗಲಿ. ಕುಮಾರಸ್ವಾಮಿ ಹಿಟ್ ಅಂಡ್ ರನ್ ಮಾಡುವುದರಲ್ಲಿ ಪ್ರಸಿದ್ಧಿ” ಎಂದರು.

ದುಡ್ಡುಕೊಟ್ಟು ಹೆಣ್ಣುಮಕ್ಕಳನ್ನು ಪ್ರತಿಭಟನೆಗೆ ಕರೆದುಕೊಂಡು ಬರಲಾಗಿದೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ, “ಮಹಿಳೆಯರಿಗೆ ಒಳ್ಳೆಯದಾಗಲಿ ಎಂದು ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದೇವೆ. ನಮ್ಮ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದರೆ ಏನರ್ಥ? ಇದು ರಾಜ್ಯದ ಮಹಿಳೆಯರ ಸ್ವಾಭಿಮಾನದ ಪ್ರಶ್ನೆ. ಕುಮಾರಸ್ವಾಮಿ ಅವರ ಹೇಳಿಕೆ ರಾಜ್ಯಕ್ಕೆ ಕಪ್ಪುಚುಕ್ಕೆ. ಈ ಹೇಳಿಕೆಯ ವಿರುದ್ಧ ಪಕ್ಷ ಬೇಧ ಮರೆತು ಎಲ್ಲ ಮಹಿಳಾ ಸಂಘಟನೆಗಳು ಹೋರಾಟ ಮಾಡಬೇಕು. ಹಗುರವಾಗಿ ಮಾತನಾಡುವುದರ ಬಗ್ಗೆ ಪ್ರತಿರೋಧ ಒಡ್ಡಬೇಕು. ಎನ್ ಡಿಎ ಮೈತ್ರಿಗೆ ಬುದ್ಧಿ ಕಲಿಸಬೇಕು” ಎಂದರು.

“ಕುಮಾರಸ್ವಾಮಿ ಅವರ ಕ್ಷಮಾಪಣೆ, ವಿಷಾದ ಯಾವುದೂ ಬೇಕಾಗಿಲ್ಲ. ಕೊಲೆ ಮಾಡಿ, ಹಲ್ಲೆ ನಡೆಸಿ ಕ್ಷಮಾಪಣೆ ಕೇಳಿದರೆ ಆಗುತ್ತದೆಯೇ? ಬಿಜೆಪಿ ಮತ್ತು ಜೆಡಿಎಸ್ ಮಹಿಳಾ ಕಾರ್ಯಕರ್ತರಿಗೆ ಗ್ಯಾರಂಟಿ ಯೋಜನೆ ಲಾಭ ತಿರಸ್ಕರಿಸಲು ಕರೆ ನೀಡಲಿ. ಅವರಿಂದ ಕೇವಲ ಐದು ಜನರ ಕೈಯಲ್ಲಿ ಗ್ಯಾರಂಟಿಗಳನ್ನು ಹಿಂಪಡೆಯುವಂತೆ ಮಾಡಿಸಲು ಆಗಲ್ಲ” ಎಂದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...