ದೇಶ ಉಳಿಸಲು 100 ಬಾರಿ ಜೈಲಿಗೆ ಹೋಗಲು ಸಿದ್ಧ: ಅರವಿಂದ್ ಕೇಜ್ರಿವಾಲ್

Date:

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಅಬಕಾರಿ ನೀತಿ ಪ್ರಕರಣದಲ್ಲಿ ನೀಡಲಾದ ಮಧ್ಯಂತರ ಜಾಮೀನು ಅವಧಿಯು ಅಂತ್ಯವಾಗಲಿದ್ದು ಕೇಜ್ರಿವಾಲ್ ಜೂನ್ 2ರಂದು ಶರಣಾಗಬೇಕಾಗಿದೆ. ಈ ನಡುವೆ ತಮ್ಮ ದೇಶ ಉಳಿಸಲು 100 ಬಾರಿ ಜೈಲಿಗೆ ಹೋಗಲು ಸಿದ್ಧ, ಇದು ಹೆಮ್ಮೆಯ ಸಂಗತಿ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಪಿಟಿಐ ಜೊತೆ ಮಾತನಾಡಿದ ಕೇಜ್ರಿವಾಲ್ ತನ್ನನ್ನು ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್‌ಗೆ ಹೋಲಿಸಿಕೊಂಡಿದ್ದು, “ನಾನು ಭಗತ್ ಸಿಂಗ್ ಅವರ ಅನುಯಾಯಿ. ದೇಶವನ್ನು ಉಳಿಸಲು ನಾನು 100 ಬಾರಿ ಜೈಲಿಗೆ ಹೋಗಬೇಕಾದರೂ ನಾನು ಹೋಗುತ್ತೇನೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?  ಕಾಂಗ್ರೆಸ್‌ನೊಂದಿಗಿನ ವಿವಾಹ ಶಾಶ್ವತವಲ್ಲ: ಅರವಿಂದ್ ಕೇಜ್ರಿವಾಲ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜೂನ್ 4ರಂದು ಸಾರ್ವತ್ರಿಕ ಚುನಾವಣಾ ಫಲಿತಾಂಶಗಳು ಪ್ರಕಟವಾದ ನಂತರ ಬಿಜೆಪಿ 200ಕ್ಕಿಂತ ಕಡಿಮೆ ಸ್ಥಾನಗಳನ್ನು ಪಡೆಯುತ್ತದೆ. ಇಂಡಿಯಾ ಒಕ್ಕೂಟ 300 ಸ್ಥಾನಗಳ ಗಡಿ ದಾಟಲಿದೆ” ಎಂದು ಭರವಸೆ ವ್ಯಕ್ತಪಡಿಸಿದರು.

“ಅವರು (ಬಿಜೆಪಿ) ಕೇಜ್ರಿವಾಲ್ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಹೇಳುತ್ತಾರೆ. ಆದರೆ ಅವರ ಬಳಿ ಒಂದು ಪುರಾವೆಯೂ ಇಲ್ಲ. ಕೇಜ್ರಿವಾಲ್ ಭ್ರಷ್ಟರಾಗಿದ್ದರೆ, ಈ ಜಗತ್ತಿನಲ್ಲಿ ಯಾರೂ ಪ್ರಾಮಾಣಿಕರಲ್ಲ ಎಂದು ಜನರು ಹೇಳುತ್ತಾರೆ. 100 ಕೋಟಿ ರೂ ಭ್ರಷ್ಟಾಚಾರ ಎಂದು ಹೇಳುತ್ತಾರೆ. ಅವರು 500 ಸ್ಥಳಗಳಲ್ಲಿ ದಾಳಿ ನಡೆಸಿದರು, ಅವರಿಗೆ ಒಂದು ಪೈಸೆಯೂ ಸಿಗಲಿಲ್ಲ. 100 ಕೋಟಿ ರೂ ಗಾಳಿಯಲ್ಲಿ ಮಾಯವಾಯಿತಾ” ಎಂದು ಪ್ರಶ್ನಿಸಿದ್ದಾರೆ.

ಇದನ್ನು ಓದಿದ್ದೀರಾ? ಸ್ವಾತಿ ಮಲಿವಾಲ್ ಪ್ರಕರಣ: ಅಕ್ರಮ ಬಂಧನಕ್ಕೆ ಪರಿಹಾರ ಕೋರಿ ಕೇಜ್ರಿವಾಲ್ ಆಪ್ತ ಸಹಾಯಕ ಹೈಕೋರ್ಟ್ ಮೊರೆ

“ಕೇಜ್ರಿವಾಲ್ ಅನುಭವಿ ಕಳ್ಳನಾಗಿರುವುದರಿಂದ ನಮ್ಮ ಬಳಿ ಯಾವುದೇ ಪುರಾವೆಗಳಿಲ್ಲ ಎಂದು ಪ್ರಧಾನಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಪ್ರಧಾನಿಯವರು ಇಡೀ ರಾಷ್ಟ್ರದ ಮುಂದೆ ತಮ್ಮ ಬಳಿ ಯಾವುದೇ ಪುರಾವೆ ಇಲ್ಲ ಎಂದು ಒಪ್ಪಿಕೊಂಡರೆ, ಇಡೀ ಪ್ರಕರಣವು ನಕಲಿ ಎಂದು ಅರ್ಥ. ಪುರಾವೆಯಿಲ್ಲದಿದ್ದರೂ ಯಾಕೆ ಬಂಧಿಸಲಾಗಿದೆ” ಎಂದು ಪ್ರಶ್ನಿಸಿದರು. ಹಾಗೆಯೇ ನಾನು ಮಾಡುವ ಕೆಲಸವನ್ನು ಮೋದಿ ಅವರಿಗೆ ಮಾಡಲು ಸಾಧ್ಯವಾಗದ ಕಾರಣ ಈಗ ನನ್ನನ್ನು ಬಂಧಿಸಲಾಗುತ್ತಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...