ಹರಿಯಾಣದ ಗುರುಗ್ರಾಮದಲ್ಲಿ ಮನೆ ಖರೀದಿದಾರರಿಗೆ ವಂಚನೆ ಮಾಡಿದ ಆರೋಪದ ಮೇಲೆ ಹಣ ವರ್ಗಾವಣೆ ಪ್ರಕರಣದಲ್ಲಿ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಕುಟುಂಬದ ಆಪ್ತ ಸಹಾಯಕ ರಿಯಲ್ ಎಸ್ಟೇಟ್ ಉದ್ಯಮಿ ಅಮಿತ್ ಕಟ್ಯಾಲ್ ಎಂಬಾತನನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ.
ಗುರುಗ್ರಾಮ ವಲಯ ಕಚೇರಿಯು ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ವಶಕ್ಕೆ ತೆಗೆದುಕೊಂಡಿದೆ. ಸದ್ಯ ಗುರುಗ್ರಾಮದಲ್ಲಿರುವ ವಿಶೇಷ ನ್ಯಾಯಾಲಯವು ಅವರನ್ನು ಆರು ದಿನಗಳ ಇಡಿ ಕಸ್ಟಡಿಗೆ ಕಳುಹಿಸಿದೆ.
ಇದನ್ನು ಓದಿದ್ದೀರಾ? ಎರಡು ಬಾರಿ ತಪ್ಪು ಮಾಡಿದೆ, ಇನ್ನೆಂದೂ ಎನ್ಡಿಎ ತೊರೆಯಲ್ಲ: ನಿತೀಶ್ ಕುಮಾರ್
ಗುರುಗ್ರಾಮದ ಸೆಕ್ಟರ್ 70ರಲ್ಲಿ 14 ಎಕರೆಗಳಿಗಿಂತ ಹೆಚ್ಚು ವಿಸ್ತೀರ್ಣದಲ್ಲಿ ನಿರ್ಮಿಸಲಾದ ಕ್ರಿಶ್ ಫ್ಲಾರೆನ್ಸ್ ಎಸ್ಟೇಟ್ನಲ್ಲಿ ಫ್ಲಾಟ್ಗಳನ್ನು ವಿತರಿಸದ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಈ ಯೋಜನೆಯನ್ನು ಕಟ್ಯಾಲ್ಗೆ ಸೇರಿದ ಕಂಪನಿಯಾದ ಆಂಗಲ್ ಇನ್ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್ ಅಭಿವೃದ್ಧಿಪಡಿಸುತ್ತಿತ್ತು.
ಲಾಲು ಪ್ರಸಾದ್, ಅವರ ಪತ್ನಿ ರಾಬ್ರಿ ದೇವಿ ಮತ್ತು ಇತರ ಕುಟುಂಬ ಸದಸ್ಯರನ್ನು ಒಳಗೊಂಡ ರೈಲ್ವೆಯ ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದ ಪ್ರತ್ಯೇಕ ಹಣ ವರ್ಗಾವಣೆ ಪ್ರಕರಣದಲ್ಲಿ ಕಟ್ಯಾಲ್ ಅನ್ನು 2023ರಲ್ಲಿ ಇಡಿ ಬಂಧಿಸಿತ್ತು.





