ಬಿಎಸ್‌ವೈ ತವರಲ್ಲಿ ಬಿಜೆಪಿಗೆ ಬಂಡಾಯದ ಬಿಸಿ : ಈಶ್ವರಪ್ಪ ಎದುರು ಸ್ಪರ್ಧೆಗೆ ನಿಂತ ಆಯನೂರು

Date:

  • ಕೆ ಎಸ್ ಈಶ್ವರಪ್ಪ ಎದುರು ಬಂಡಾಯ ಸಾರಿದ ಆಯನೂರು ಮಂಜುನಾಥ್
  • ಹಿರಿಯ ನಾಯಕರ ಕಾದಾಟಕ್ಕೆ ಸಾಕ್ಷಿಯಾಗತ್ತಾ ಶಿವಮೊಗ್ಗ ನಗರ ಕ್ಷೇತ್ರ?

ಶಿವಮೊಗ್ಗ ಬಿಜೆಪಿಗೆ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಬಂಡಾಯ ದ ಬಹು ದೊಡ್ಡ ಶಾಕ್ ನೀಡಿದ್ದಾರೆ.

ವಿಧಾನಪರಿಷತ್ ಸದಸ್ಯರಾಗಿರುವ ಅವರು ತಮ್ಮದೇ ಪಕ್ಷ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಎದುರು ಬಂಡಾಯ ಸಾರಿದ್ದು ಅವರಿಗೆ ಪ್ರತಿಸ್ಪರ್ಧಿಯಾಗುವ ಘೋಷಣೆ ಮಾಡಿದ್ದಾರೆ.

ಈ ಸಲುವಾಗಿ ಆಯನೂರು ಮಂಜುನಾಥ್ ತಮ್ಮ ವಿಧಾನಪರಿಷತ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಂಜುನಾಥ್, ನಾನು ರಾಜೀನಾಮೆ ಕೊಟ್ಟು ಕೆ.ಎಸ್ ಈಶ್ವರಪ್ಪ ವಿರುದ್ಧ ಬಂಡಾಯವಾಗಿ ಸ್ಪರ್ಧೆ ಮಾಡುತ್ತೇನೆ.

ಮಾಜಿ ಸಚಿವ ಈಶ್ವರಪ್ಪ ಸವಾಲನ್ನ ಸ್ವೀಕಾರ ಮಾಡುತ್ತೇನೆ. ಕೆಎಸ್ ಈಶ್ವರಪ್ಪ ಸಮರ್ಥರಿದ್ದರೇ ನನ್ನನ್ನ ಎದುರಿಸಲಿ ಎಂದು ಸವಾಲು ಹಾಕಿದರು.

ಇದಕ್ಕೂ ಮುನ್ನ ತಮ್ಮ ಸ್ಪರ್ಧೆ ವಿಚಾರವಾಗಿನ ವಿಷಯ ಹಂಚಿಕೊಂಡ ಅವರು, ಈ ಬಾರಿ ವಿಧಾನಸಭೆಗೆ ಕಣಕ್ಕಿಳಿಯಲೇಬೇಕು ಎಂಬ ಇಚ್ಛೆಯಿಂದ ಸಾರ್ವತ್ರಿಕವಾಗಿ ಕಣಕ್ಕಿಳಿಯುವ ಬಗ್ಗೆ ಹೇಳಿಕೆ ಕೊಟ್ಟಿದೆ. ಜೊತೆಗೆ ಪಕ್ಷದ ವೇದಿಕೆಯಲ್ಲೂ ವಿನಂತಿ ಮಾಡಿಕೊಂಡಿದ್ದೆ. ಆದರೆ ನನ್ನ ಪ್ರಯತ್ನಕ್ಕೆ ಪಕ್ಷದೊಳಗಿನಿಂದ ಸಕಾರಾತ್ಮಕ ಸಂದೇಶ ಬರುತ್ತದೆನ್ನುವ ವಿಶ್ವಾಸ ಇಲ್ಲ. ಹೀಗಾಗಿ ಬಂಡಾಯದ ತೀರ್ಮಾನಕ್ಕೆ ಬಂದಿರುವೆ ಎಂದರು.

ಈಶ್ವರಪ್ಪ ಸುಮ್ಮನೆ ನನ್ನನ್ನು ಕೆಣಕಿದ್ದಾರೆ. ಅವರ ಏಕವಚನ ಪ್ರಯೋಗ ಅವರ ಶಿಕ್ಷಣದ ಮಟ್ಟವನ್ನು ತೋರಿಸುತ್ತಿದೆ. ಈಶ್ವರಪ್ಪನಿಗೆ ನಾಲಿಗೆ ಮೇಲೆ ಹಿಡಿತ ಇಲ್ಲ ಎಂಬುದು ರಾಜ್ಯದ ಜನರಿಗೆ ಗೊತ್ತಿದೆ. ‘ನನಗೆ ಅವನದ್ಯಾವ ಲೆಕ್ಕ’ ಎಂದು ಈಶ್ವರಪ್ಪ ಹೇಳಿದ್ದನ್ನು ಈಗ ಸವಾಲಾಗಿ ಸ್ವೀಕರಿಸಿದ್ದೇನೆ ಎಂದು ಆಯನೂರು ಹೇಳಿದರು.

ಈ ಸುದ್ದಿ ಓದಿದ್ದೀರಾ? :ಶಿಗ್ಗಾಂವಿ ಕ್ಷೇತ್ರದಿಂದಲೇ ನನ್ನ ಸ್ಪರ್ಧೆ: ಸಿಎಂ ಬೊಮ್ಮಾಯಿ ಸ್ಪಷ್ಟನೆ

ಈಶ್ವರಪ್ಪ ಅವರ ಬಳಿ ಅಪಾರ ದುಡ್ಡಿದೆ. ಚುನಾವಣೆಗಾಗಿ ವಾರ್ಡ್ ಗಳಲ್ಲಿ ಹಣ ಡಿಪಾಸಿಟ್ ಇಟ್ಟಿದ್ದೀರಿ ಎಂಬುದು ಗೊತ್ತಿದೆ. ಆದರೆ ಈ ಸಲ ನಿಮ್ಮ ಹಣ ಲೆಕ್ಕಕ್ಕೆ ಇಲ್ಲ ಎಂಬುದನ್ನು ತೋರಿಸುತ್ತೇನೆ” ಎಂದು ಆಯನೂರು ಕೆಎಸ್ಈಗೆ ತಿರುಗೇಟು ನೀಡಿದರು.

”32 ವರ್ಷಗಳ ರಾಜಕೀಯದಲ್ಲಿ ಪ್ರಚೋದನಾತ್ಮಕ ಭಾಷಣ ಮಾಡಿ ಗಲಭೆ ಮಾಡಿಸಿ ಚುನಾವಣೆ ಮಾಡಿರುವುದು ಬಿಟ್ಟು ಈಶ್ವರಪ್ಪ ಬೇರೇನೂ ಮಾಡಿಲ್ಲ. ಈ ಬಾರಿ ಅದು ನಡೆಯಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ” ಎಂದು ಮಂಜುನಾಥ್ ಹೇಳಿದರು.

ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಹಿನ್ನೆಲೆಯಲ್ಲಿ ಆಯನೂರು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...