ಶಿಗ್ಗಾಂವಿ | ಕಾಂಗ್ರೆಸ್‌ನೊಳಗೆ ಬಂಡಾಯ, ಇಬ್ಬರು ಮಾಜಿ ಶಾಸಕರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ

Date:

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಒಳಗೆ ಬಂಡಾಯ ನಾಮಪತ್ರ ಸಲ್ಲಿಕೆ ಕೊನೆಯ ದಿನವೇ ಭುಗಿಲೆದ್ದಿದೆ. ಕಾಂಗ್ರೆಸ್‌ನ ಮಾಜಿ ಶಾಸಕ ಸೈಯದ್ ಅಜ್ಜಂಪೀರ್ ಖಾದ್ರಿ ಅವರು ಬಂಡಾಯ ಎದ್ದು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ, ಮತ್ತೊಬ್ಬ ಮಾಜಿ ಶಾಸಕ ಪಕ್ಷೇತರರಾಗಿ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಮಾಜಿ ಶಾಸಕ ಮಂಜುನಾಥ್ ಕುನ್ನೂರು ಸಹ ಕಾಂಗ್ರೆಸ್‌ ಟಿಕೆಟ್‌ಗಾಗಿ ಮಂಜುನಾಥ ಕುನ್ನೂರು ಹಾಗೂ ಅವರ ಮಗ ರಾಜು ಅವರು ಪೈಪೋಟಿ ನಡೆಸಿದ್ದರು. ಆದರೆ, ಯಾಸೀರ್ ಅಹ್ಮದ್ ಖಾನ್ ಪಠಾಣ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಇದಿರಂದ ಅಸಮಾಧಾನಗೊಂಡಿರುವ ಮಂಜುನಾಥ್ ಕುನ್ನೂರು ಬಂಡಾಯ ಎದ್ದು ಅವರೂ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಸಲು ಕೊನೆಯ 13 ನಿಮಿಷ ಬಾಕಿ ಇರುವಾಗ ಖಾದ್ರಿ ಓಡೋಡಿ ಬಂದು ಚುನಾವಣಾಧಿಕಾರಿ ಮಹ್ಮದ್ ಖಿಝರ್​ ಅವರಿಗೆ ನಾಮಪತ್ರ ಸಲ್ಲಿಸಿ ಎಲ್ಲರ ಗಮನಸೆಳೆದದರು. ಬೆಂಬಲಿಗರ ಜೊತೆ ಚುನಾವಣಾಧಿಕಾರಿ ಕಚೇರಿಗೆ ತೆರಳಿದ್ದ ಮಂಜುನಾಥ ಕುನ್ನೂರು ನಾಮಪತ್ರ ಸಲ್ಲಿಸಿದರು. ಈಗಾಗಲೇ ಇದೇ ಕ್ಷೇತ್ರದಿಂದ ಕುನ್ನೂರು ಅವರು ಎರಡು ಬಾರಿ ಶಾಸಕರಾಗಿದ್ದರು. ಕ್ಷೇತ್ರದಲ್ಲಿ ಪಂಚಮಸಾಲಿ ಸಮಾಜದ ಮುಖಂಡರಾಗಿದ್ದಾರೆ. ಕಾಂಗ್ರೆಸ್‌ ಒಳಗಿನ ಬಂಡಾಯ ಪಕ್ಷಕ್ಕೆ ಆಘಾತ ನೀಡುವ ಸಂಗತಿ ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅಜ್ಜಂಪೀರ್ ಖಾದ್ರಿ, “ನಾನು ಶಿಗ್ಗಾಂವ ಕ್ಷೇತ್ರದ ನಿವಾಸಿ. ಬಿಜೆಪಿ ಭರತ್ ಬೊಮ್ಮಾಯಿ ಹುಬ್ಬಳ್ಳಿಯವ, ಕಾಂಗ್ರೆಸ್ ಅಭ್ಯರ್ಥಿ ಯಾಸೀನ್ ಖಾನ್ ಹಾನಗಲ್. ಯಾವುದೇ ಕಾರಣಕ್ಕೂ ನಾನು‌ ನಾಮಪತ್ರ ಹಿಂದೆ ಪಡೆಯಲ್ಲ” ಎಂದು ಕಡ್ಡಿ ಮುರಿದಂತೆ ಹೇಳಿದರು.

ಸಂಧಾನಕ್ಕೆ ಬಂದ ಜಮೀರ್ ಕಾರಿನ ಗಾಜು ಪುಡಿಪುಡಿ

ಟಿಕೆಟ್​ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ ಅಜ್ಜಂಪೀರ್ ಖಾದ್ರಿ ಮನವೊಲಿಸಲು ಸಚಿವ ಜಮೀರ್​​ ಅಹಮ್ಮದ್ ಖಾನ್​ ಕಸರತ್ತು ನಡೆಸಿದರು. ಆದರೆ ಸಂಧಾನ ವಿಫಲವಾಗಿದೆ. ಸಂಧಾನಕ್ಕೆ ಬಂದಿದ್ದ ಸಚಿವ ಜಮೀರ್​​ ಅಹಮ್ಮದ್ ಖಾನ್ ಕಾರಿನ ಮೇಲೆ ಖಾದ್ರಿ ಅಭಿಮಾನಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಕಾರಿನ ಗಾಜು ಪುಡಿಪುಡಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...