ದೇವರಾಜ ಅರಸುಗೆ ಮರಣೋತ್ತರ ಭಾರತ ರತ್ನ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು: ಸಿಎಂ ಸಿದ್ದರಾಮಯ್ಯ ಭರವಸೆ

Date:

ಸಮಾಜದಲ್ಲಿ ಬಡತನ ಮತ್ತು ಜಾತಿ ವ್ಯವಸ್ಥೆ ಸಂಪೂರ್ಣವಾಗಿ ತೊಲಗದೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಮಂಗಳವಾರ (ಆ.20) ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಿದ್ದ ಮಾಜಿ ಸಿಎಂ ದಿ. ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಸಮಾಜದಲ್ಲಿ ಮೇಲು ಕೀಳು ಇರಬಾರದು. ಬಡವ ಬಲ್ಲಿದ ಇರಬಾರದು. ಜಾತಿ ವ್ಯವಸ್ಥೆ ಇರಬಾರದು, ಎಲ್ಲರೂ ಮನುಷ್ಯರಾಗಿ ಸಮಾನವಾಗಿ ಬದುಕಬೇಕು ಎಂಬುವುದೇ ಬಸವಾದಿ ಶರಣರ ಕನಸು. ಇದೇ ತತ್ವದ ಆಧಾರದ ಮೇಲೆ ಅಂಬೇಡ್ಕರ್‌ ಅವರು ಸಂವಿಧಾನ ರಚಿಸಿದರು. ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು ಅವರು ಸಹ ಈ ತತ್ವ ಸಿದ್ದಾಂತಗಳ ಆಧಾರದಲ್ಲಿ ಆಡಳಿತ ನಡೆಸಿ, ರಾಜ್ಯದಲ್ಲಿ ಹಲವಾರು ಕ್ರಾಂತಿಕಾರಿ ಬದಲಾವಣೆಗಳನ್ನು” ತಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇವರಾಜ ಅರಸು ಅವರು ಅರಸು ಮನೆತನದಲ್ಲಿ ಹುಟ್ಟಿದ್ದರೂ, ಸಮಾಜದ ತಳ ಸಮುದಾಯವಾದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರ ಬಗ್ಗೆ ಬಹಳ ಕಾಳಜಿ ಹೊಂದಿದ್ದರು. ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಲು, ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಲು ನಮ್ಮ ಸಂವಿಧಾನ ಒತ್ತು ನೀಡಿದೆ. ಇದೇ ಹಾದಿಯಲ್ಲಿ ಸಂವಿಧಾನಕ್ಕೆ ಬದ್ಧವಾಗಿ ನಾವು ಆಡಳಿತ ನಡೆಸುತ್ತಿದ್ದೇವೆ. ನೆಹರು ಕಾಲದಿಂದ ಇಂದಿನವರೆಗೂ ಅಸಮಾನನತೆಯ ಸಮಾಜವನ್ನು ತೊಡೆದು ಸಮ ಸಮಾಜ ನಿರ್ಮಾಣಕ್ಕಾಗಿ ನಿರಂತರವಾಗಿ ಪ್ರಯತ್ನಗಳನ್ನು ನಡೆಸಲಾಗಿದೆ” ಎಂದು ಹೇಳಿದರು.

“ಸ್ವಾತಂತ್ರ್ಯ ಬಂದು 77 ವರ್ಷಗಳು ಕಳೆದರೂ ಇನ್ನೂ ನಮ್ಮಲ್ಲಿ ಸಾಮಾಜಿಕ ಸಮಾನತೆ ಸಾಧ್ಯವಾಗಿಲ್ಲ. ಸಮಾನವಾಗಿ ಸಂಪತ್ತು ಹಂಚಿಕೆ ನಮಗೆ ಸಾಧ್ಯವಾಗಿಲ್ಲ. ವ್ಯಕ್ತಿಯನ್ನು ಜಾತಿ ಆಧಾರದಲ್ಲಿ ಗುರುತಿಸುವಂತಹ ವ್ಯವಸ್ಥೆ ಇನ್ನೂ ನಮ್ಮಲ್ಲಿ ಇದೆ. ಜನರನ್ನು ಅವರ ಪ್ರತಿಭೆ ಮೇಲೆ, ವ್ಯಕ್ತಿತ್ವದ ಮೇಲೆ ಗುರುತಿಸದೆ ಜಾತಿ ಆಧಾರದಲ್ಲಿ ಗುರುತಿಸಲಾಗುತ್ತಿದೆ. ಆದರೆ ಯಾರೂ ಕೂಡಾ ಜಾತಿ ಆಧಾರದಲ್ಲಿ ಸಮಾಜದಲ್ಲಿ ಪ್ರತಿಭಾವಂತ ಆಗಲು ಸಾಧ್ಯವಿಲ್ಲ. ಸರಿಯಾದ ಅವಕಾಶಗಳು ಸಿಕ್ಕಿದರೆ ಮಾತ್ರ ಪ್ರತಿಭಾವಂತ ಆಗಲು ಸಾಧ್ಯ” ಎಂದರು.

“ಎಲ್ಲರಿಗೂ ಸಮಾನ ಅವಕಾಶ ಸಿಗಲು ಹಾವನೂರು ಅವರ ಅಧ್ಯಕ್ಷತೆಯಲ್ಲಿ ಹಿಂದುಳಿದ ವರ್ಗದ ಆಯೋಗ ರಚನೆ ಮಾಡಿ, ಎಷ್ಟೇ ವಿರೋಧ ಇದ್ದರೂ ಆಯೋಗದ ಶಿಫಾರಸುಗಳನ್ನು ಜಾರಿ ಮಾಡಿದರು. ಇದರಿಂದ ಹಿಂದುಳಿದ ವರ್ಗದವರಿಗೆ ಶಿಕ್ಷಣದಲ್ಲಿ ಮೀಸಲಾತಿ ಸಾಧ್ಯವಾಯಿತು. ತಳ ಸಮುದಾಯದವರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಸಬಲಗೊಳಿಸಲು ಎಷ್ಟೇ ವಿರೋಧ ಇದ್ದರೂ, ಜಾರಿಗೊಳಿಸಿದರು. ಹಿಂದುಳಿದವರಿಗೆ ಶೇ.38 ರಷ್ಟು ಮೀಸಲಾತಿ ಸಿಕ್ಕಿದ್ದರೆ ಅದಕ್ಕೆ ಅರಸು ಅವರೇ ಕಾರಣ” ಎಂದು ಹೇಳಿದರು.

“ಹಿಂದುಳಿದವರನ್ನು ತುಳಿಯಲು ಈಗಲೂ ನಿರಂತರ ಹುನ್ನಾರಗಳು ನಡೆಯುತ್ತಿವೆ. ನಾನು ಮುಖ್ಯಮಂತ್ರಿ ಆದ ಮೇಲೆ ಬಡವರಿಗಾಗಿ, ಮಹಿಳೆಯರಿಗಾಗಿ, ರೈತರಿಗೆ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ. ಐದು ಗ್ಯಾರಂಟಿ ಯೋಜನೆಗಳು ಬಡವರು, ಮಹಿಳೆಯರು, ರೈತರು, ಯುವಕರ ಪರವಾಗಿದೆ. ಆದರೆ ಬದಲಾವಣೆ ಬಯಸದ, ಬಡವರ ವಿರೋಧಿ ಪಟ್ಟಭದ್ರರು ಇದನ್ನು ವಿರೋಧಿಸುತ್ತಿದಾರೆ” ಎಂದು ಕಿಡಿಕಾರಿದರು.

“ನಾನು 1984ರಲ್ಲಿ ಮೊದಲ ಬಾರಿಗೆ ಮಂತ್ರಿಯಾದ ಬಳಿಕ ಕಳೆದ 40 ವರ್ಷಗಳಲ್ಲಿ ಇಂದಿನವರೆಗೆ ನನ್ನ ಜೀವನದಲ್ಲಿ ಯಾವುದೇ ಕಳಂಕವಿಲ್ಲ. ನಾನು ಯಾವುದೇ ತಪ್ಪು ಮಾಡದಿದ್ದರೂ ಈಗ ಕಪ್ಪು ಮಸಿ ಬಳಿಯಲು ನಿರಂತರ ಪ್ರಯತ್ನ ನಡೆಯುತ್ತಿದೆ. ಅಧಿಕಾರ ಇದ್ದರೂ, ಇಲ್ಲದಿದ್ದರೂ, ಸಾಮಾಜಿಕ ನ್ಯಾಯದ ವಿಷಯದಲ್ಲಿ, ನಂಬಿರುವ ಸಿದ್ಧಾಂತಗಳ ಕುರಿತು ಯಾವತ್ತೂ ರಾಜಿ ಮಾಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

“ದೇವರಾಜ ಅರಸು ಅವರಿಗೆ ಮರಣೋತ್ತರ ಭಾರತ ರತ್ನ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು. ಎಲೆಕ್ಟ್ರಾನಿಕ್‌ ಸಿಟಿಗೆ ದೇವರಾಜ ಅರಸು ಎಲೆಕ್ಟ್ರಾನಿಕ್‌ ಸಿಟಿ ಎಂದು ನಾಮಕರಣ ಮಾಡಲಾಗುವುದು” ಎಂದು ಇದೇ ವೇಳೆ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...