ಶನಿವಾರ-ಭಾನುವಾರವೂ ತೆರೆಯಲಿವೆ ನೋಂದಣಿ ಕಚೇರಿ: ಸಚಿವ ಕೃಷ್ಣ ಬೈರೇಗೌಡ

Date:

ಜನರಿಗೆ ಸುಗಮ ಆಡಳಿತ ನೀಡುವ ಭಾಗವಾಗಿ ಅಕ್ಟೋಬರ್ 21ರ ನಂತರ ನೋಂದಣಿ ಕಚೇರಿಗಳು ಶನಿವಾರ-ಭಾನುವಾರದ ರಜೆ ದಿನಗಳಲ್ಲೂ ಕಾರ್ಯನಿರ್ವಹಿಸಲಿವೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಸೋಮವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ ಅವರು, “ದುಡಿಯುವ ಮಧ್ಯಮ ವರ್ಗದ ಜನ ವಾರದ ದಿನಗಳಲ್ಲಿ ತಮ್ಮ ಕೆಲಸಗಳನ್ನು ಬಿಟ್ಟು ನೋಂದಣಿ ಕಚೇರಿಗಳಿಗೆ ಆಗಮಿಸುವುದು ಕಷ್ಟ. ಅಲ್ಲದೆ, ನೋಂದಣಿಗಾಗಿ ಹೊರ ರಾಜ್ಯದಿಂದ ಆಗಮಿಸುವವರಿಗೂ ಅನಾನುಕೂಲ ಉಂಟಾಗುತ್ತಿದೆ. ಹೀಗಾಗಿ ದುಡಿಯುವ ವರ್ಗದ ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಎರಡನೇ-ನಾಲ್ಕನೇ ಶನಿವಾರ ಹಾಗೂ ಭಾನುವಾರಗಳಲ್ಲೂ ನೋಂದಣಿ ಕಚೇರಿಗಳನ್ನು ತೆರೆಯಲು ನಿರ್ಧರಿಸಲಾಗಿದೆ” ಎಂದರು.

“ಅಕ್ಟೋಬರ್ 21ರ ನಂತರ ಪ್ರತಿ ನೋಂದಣಿ ಜಿಲ್ಲೆಗಳಲ್ಲಿ ಒಂದು ರಿಜಿಸ್ಟರ್ ಕಚೇರಿ ಶನಿವಾರ ಮತ್ತು ಭಾನುವಾರ ರಜಾ ದಿನಗಳಲ್ಲೂ ಕಾರ್ಯನಿರ್ವಹಿಸಲಿವೆ. ರಜೆ ದಿನಗಳಲ್ಲಿ ಯಾವ ನೋಂದಣಿ ಕಚೇರಿ ಕಾರ್ಯನಿರ್ವಹಿಸಲಿವೆ ಎಂದು ಅವಧಿಗೆ ಮೊದಲೇ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ನೋಂದಣಿಗಾಗಿ ಸಾರ್ವಜನಿಕರು ಅರ್ಜಿ ಹಾಕಿದಾಗ ಯಾವ ಕಚೇರಿ ತೆರೆದಿರುತ್ತದೆ ಎಂಬ ಮಾಹಿತಿಯನ್ನು ಆನ್ಲೈನ್ ಮೂಲಕ ನೀಡಲಾಗುತ್ತದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದುವರೆದು, “ಶನಿವಾರ-ಭಾನುವಾರಗಳಲ್ಲೂ ನೋಂದಣಿ ಕಚೇರಿಗಳನ್ನು ತೆರೆಯಬೇಕು ಎಂಬ ಒತ್ತಾಯ ಈ ಹಿಂದಿನಿಂದಲೂ ಇತ್ತು. ಅಲ್ಲದೆ, ಬಜೆಟ್ ವೇಳೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಇಲಾಖೆಗೆ ಸೂಚನೆ ನೀಡಿದ್ದರು. ಹೀಗಾಗಿ ಇದಕ್ಕೆ ಬೇಕಾದಂತೆ ಕಾನೂನುಗಳನ್ನು ತಿದ್ದುಪಡಿ ಮಾಡಿ, ಈ ಬಗ್ಗೆ ಕ್ಯಾಬಿನೆಟ್ನಿಂದಲೂ ಒಪ್ಪಿಗೆ ಪಡೆಯಲಾಗಿದೆ” ಎಂದರು.

ಅಕ್ರಮ ತಡೆಗೆ ಡಿಜಿಟಲ್ ಇಂಟಗ್ರೇಷನ್ ಖಾತಾ ಜಾರಿ

“ಅಕ್ರಮ ನೋಂದಣಿ ಹಾಗೂ ತೆರಿಗೆ ವಂಚನೆಯನ್ನು ತಡೆಯುವ ಸಲುವಾಗಿ ನೋಂದಣಿ ಸಮಯದಲ್ಲಿ ಡಿಜಿಟಲ್ ಇಂಟಗ್ರೇಷನ್ ಖಾತಾ ನಿಯಮವನ್ನು ಜಾರಿಗೊಳಿಸಲಾಗಿದೆ” ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

“ನಿಜವಾದ ಸ್ವತ್ತಿಗೆ ಖಾತೆ ಇಲ್ಲದಿದ್ದರೂ ಕೆಲವರು ಕೇವಲ ಪೇಪರ್‌ನಲ್ಲಿ ಖಾತೆ ಪ್ರಿಂಟ್ ಮಾಡಿಸಿ ಅದರ ಮೂಲಕ ನೋಂದಣಿ ಮಾಡಿಸಿಕೊಳ್ಳುತ್ತಿದ್ದಾರೆ. ಗ್ರಾಮ ಪಂಚಾಯತ್-ಬಿಬಿಎಂಪಿ ನಗರಸಭೆ ಖಾತೆ ಮಾಡಿಸದಿದ್ದರೂ ಇಂತಹ ಬೋಗಸ್ ಖಾತೆ ಮೂಲಕ ಅಕ್ರಮ ನೋಂದಣಿ ಮಾಡಲಾಗುತ್ತಿದೆ. ಇದರಿಂದ ಹಲವು ಅಮಾಯಕರು ಸಮಸ್ಯೆಗೆ ಸಿಲುಕುತ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

“ನೋಂದಣಿ ಮಾಡಿಸುವಾಗ ಇತರೆ ಎಂಬ ಒಂದು ಕ್ಯಾಟಗರಿ ಇದೆ. ಆಶ್ರಯ ನಿವೇಶನಗಳನ್ನು ನೋಂದಾಯಿಸುವಾಗ ಮಾತ್ರ ಈ ಕ್ಯಾಟಗರಿಯನ್ನು ಬಳಸಲಾಗುತ್ತದೆ. ಇದರಲ್ಲಿ ಮಾರುಕಟ್ಟೆ ಬೆಲೆ (ಗೈಡನ್ಸ್ ವ್ಯಾಲ್ಯೂ) ಕಡಿಮೆ ಇರತ್ತೆ. ನೋಂದಣಿ ಶುಲ್ಕವೂ ಕಡಿಮೆ ಇರುತ್ತದೆ. ಹೀಗಾಗಿ ಹಲವರು ತಮ್ಮದು ಖಾಸಗಿ ಸ್ವತ್ತಾಗಿದ್ರೂ ಇತರೆ ಎಂದು ತೋರಿಸಿ ದೊಡ್ಡ ಪ್ರಮಾಣದಲ್ಲಿ ಕಟ್ಟಬೇಕಿರುವ ವೆಚ್ಚವನ್ನು ಮೋಸ ಮಾಡುತ್ತಿದ್ದಾರೆ” ಎಂದು ವಿವರಿಸಿದರು.

“ಈ ಹಿಂದೆ ನೋಂದಣಿ ಮುಖ್ಯಸ್ಥರಾಗಿದ್ದ ತ್ರಿಲೋಕ್ ಚಂದ್ರ ಅವರು ಈ ಬಗ್ಗೆ ಬೆಂಗಳೂರಿನಲ್ಲಿ ಅಧ್ಯಯನ ನಡೆಸಿ ವರದಿ ನೀಡಿದ್ದಾರೆ. ಅಧ್ಯಯನದ ವೇಳೆ ಬೆಂಗಳೂರಿನ 4 ನೋಂದಣಿ ಕಚೇರಿಯನ್ನು ಆಯ್ಕೆ ಮಾಡಿಕೊಂಡು ಈ ಕಚೇರಿಗಳಲ್ಲಿ ನಕಲಿ ಖಾತೆ ಮೂಲಕ ಎಷ್ಟು ನೋಂದಣಿಯಾಗುತ್ತಿವೆ ಹಾಗೂ ತೆರಿಗೆ ವಂಚನೆ ಪ್ರರಕಣಗಳನ್ನೂ ಗುರುತಿಸಿದ್ದಾರೆ. ಅವರ ಪ್ರಕಾರ 1-7-2018 ರಿಂದ 10-12-2019ರ ಅವಧಿಯಲ್ಲಿ ಬೆಂಗಳೂರು ಒಂದರಲ್ಲೇ ರೂ. 250 ಕೋಟಿ ನಷ್ಟವಾಗಿದೆ ಎಂದು ಅಂದಾಜಿಸಿದ್ದಾರೆ” ಎಂದರು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

“ಇನ್ನೂ ನೋಂದಣಿ ಮಾಡುವಾಗ ಸ್ಕೆಚ್ ಕಡ್ಡಾಯ ಬೇಕು. ಆದರೆ ಕೆಲವೆಡೆ ಸ್ಕೆಚ್ ಇಲ್ಲದೆಯೂ ನೋಂದಣಿ ಮಾಡಲಾಗಿದೆ. ಜನವರಿಯಿಂದ ಈಚೆಗೆ 200 ನೋಂದಣಿ ಸ್ಕೆಚ್ ಇಲ್ಲದೆ ಮಾಡಲಾಗಿದೆ. ಸೈಟು ಅಥವಾ ಜಮೀನನನ್ನು ಟಿಡಿಆರ್ ಅಂತೇಳಿ ನೋಂದಣಿ ಮಾಡಿಸಿದ್ದಾರೆ. ಇದರಿಂದ ಅಕ್ರಮದ ಜೊತೆಗೆ ತೆರಿಗೆ ಹಣವೂ ವಂಚಿಸಲಾಗುತ್ತಿದೆ. ಇದನ್ನು ಹೇಗೆ ತಡೆಗಟ್ಟುವುದು ಎಂದು ಕಳೆದ ಎಂಟು ತಿಂಗಳಿನಿಂದ ಯೋಚಿಸಿ ಬೋಗಸ್ ಖಾತಾ ಮೂಲಕ ಆಗುತ್ತಿರುವ ಅಕ್ರಮಗಳಿಗೆ ತಡೆಯೊಡ್ಡಲು, ಅಮಾಯಕರಿಗೆ ನ್ಯಾಯ ಒದಗಿಸಲು ನಿರ್ಧರಿಸಲಾಯಿತು” ಎಂದರು.

“ಯಾವುದೇ ಖಾತೆ ಇರಲಿ ಪೇಪರ್ ಖಾತೆ ಆಧಾರದಲ್ಲಿ ನೋಂದಣಿಯಾಗುವಾಗ ವೆರಿಫಿಕೇಷನ್‌ಗೆ ತಿಂಗಳೇ ಬೇಕು. ಅಲ್ಲಿಯವರೆಗೆ ನೋಂದಣಿಯನ್ನು ಬಾಕಿ ಇಡಲಾಗಲ್ಲ. ಪೇಪರ್ ಅನ್ನು ಯಾರು ಬೇಕಾದರೂ ಮುದ್ರಿಸಬಹುದು. ಅದಕ್ಕೆ ನಾವೀಗ ಒಂದು ತೀರ್ಮಾನ ಮಾಡಿದ್ದೇವೆ. ಗ್ರಾಮ ಪಂಚಾಯತ್- ಮುನಿಸಿಪಾಲಿಟಿ ಬಿಬಿಎಂಪಿ ಬಿಡಿಎ ಯಾರೇ ಇರಬಹುದು, ಎಲ್ಲಾ ಖಾತೆಯನ್ನೂ ಡಿಜಿಟಲ್ ಮಾಡಬೇಕು. ಖಾತೆ ಡಿಜಿಟಲ್ ಆಗಿರಬೇಕು. ರಿಜಿಸ್ಟ್ರೇಷನ್ ಸಮಯದಲ್ಲಿ ನಮ್ಮ ಹಾಗೂ ಅವರ ಸಿಸ್ಟಂ ಲಿಂಕ್ ಮಾಡಿ, ಖಾತೆ ನಂಬರ್ ಹೆಸರು ಹಾಗೂ ವಿಳಾಸ ಹೊಂದಾಣಿಕೆ ಆದ್ರೆ ಆಟೋಮ್ಯಾಟಿಕ್ ಖಾತೆ ಮಾಡಿಕೊಡಲಾಗುವುದು” ಎಂದರು.

“ಡಿಜಿಟಲ್ ಇಂಟಗ್ರೇಷನ್ ಖಾತಾವನ್ನು ಈ ತಿಂಗಳ ಆರಂಭದಲ್ಲೇ ಪ್ರಾಯೋಗಿಕವಾಗಿ 4 ಜಿಲ್ಲೆಗಳಲ್ಲಿ ಜಾರಿ ಮಾಡಲಾಗಿದೆ. ಇಂದಿನಿಂದ 8 ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗುವುದು. ರಾಜ್ಯದಲ್ಲಿ ಈವರೆಗೆ ಎಲ್ಲೂ ಸಮಸ್ಯೆ ಬಂದಿಲ್ಲ. ಬೆಂಗಳೂರಲ್ಲಿ ಸಮಸ್ಯೆ ಬರಬಹುದು. ಹೀಗಾಗಿ ಫೆಬ್ರವರಿಯಲ್ಲೇ ಬಿಡಿಎ, ಕೆಎಡಿಬಿ, ಕರ್ನಾಟಕ ಹೌಸಿಂಗ್ ಬೋರ್ಡ್, ಕರ್ನಾಟಕ ರಾಜೀವ್ ಗಾಂಧಿ ವಸತಿ ನಿಗಮ ಎಲ್ಲರನ್ನೂ ಕರೆಸಿ ತಮ್ಮ ಖಾತೆಗಳನ್ನು ಡಿಜಿಟಲೀಕರಣಗೊಳಿಸಿ ಎಂದು ತಿಳಿಸಲಾಗಿದೆ. ಬಿಬಿಎಂಪಿಯದ್ದೂ ಮಾಡಬೇಕು. ಅವರಿಗೂ ಸೂಚನೆ ನೀಡಲಾಗಿದೆ. ಮುಂದಿನ ತಿಂಗಳಿನಿಂದ ಬಿಬಿಎಂಪಿಯದ್ದೂ ಇ-ಖಾತಾ ಮೂಲಕವೇ ರಿಜಿಸಸ್ಟ್ರೇಷನ್ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ” ಎಂದು ಹೇಳಿದರು.

“ಇದೆಲ್ಲ ಜಾರಿಯಾದಲ್ಲಿ ಒಂದು ಕಡೆ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ, ಬಹಳ ಮುಖ್ಯವಾಗಿ ಅಕ್ರಮಗಳಿಗೆ ಕಡಿವಾಣ, ಅಮಾಯಕರ ಶೋಷಣೆಗೆ ಕಡಿವಾಣ, ಸರ್ಕಾರಕ್ಕೆ ಬರಬೇಕಾದ ತೆರಿಗೆ ವಂಚನೆ ತಡೆಗೆ ಈ ತೀರ್ಮಾನ ಸಹಕಾರಿಯಾಗಲಿದೆ” ಎಂದು ಸಚಿವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...