ರೇಣುಕಾಸ್ವಾಮಿ ಕೊಲೆ | ನಟ ದರ್ಶನ್‌ ಪ್ರಭಾವಿ ರಾಜಕಾರಣಿಗೆ ಕರೆ ಮಾಡಿಲ್ಲ: ಗೃಹ ಸಚಿವ ಪರಮೇಶ್ವರ್

Date:

ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ಅಪಹರಿಸಿ ಕೊಲೆ ಮಾಡಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಅವರು ಬಚಾವ್ ಆಗಲು ಪ್ರಭಾವಿ ರಾಜಕಾರಣಿಗೆ ಫೋನ್ ಕರೆ ಮಾಡಿದ್ದಾರೆ ಎನ್ನಲಾಗಿರುವ ಸಂಗತಿಯನ್ನು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅಲ್ಲಗಳೆದಿದ್ದಾರೆ.

ಬೆಂಗಳೂರನಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿ, “ನನಗೆ ಈ ಬಗ್ಗೆ ಮಾಹಿತಿ ಇಲ್ಲ. ನನಗೆ ಗೊತ್ತಿದ್ದ ಹಾಗೆ ಅವರು ಪ್ರಯತ್ನ ಮಾಡಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನಿನಲ್ಲಿ ಏನು ಕ್ರಮ ತೆಗೆದುಕೊಳ್ಳಲು ಅವಕಾಶವಿದೆಯೋ ಪೊಲೀಸರು ಅದನ್ನು ತೆಗೆದುಕೊಳ್ಳುತ್ತಾರೆ” ಎಂದರು.

ದರ್ಶನ್‌ ಬಂಧನ ವಿಚಾರದಲ್ಲಿ ಸರ್ಕಾರದಿಂದ ನಾವ್ಯಾರು ಮಧ್ಯಪ್ರವೇಶ ಮಾಡಲ್ಲ. ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಟ್ಟಿದ್ದೇವೆ.ಕೊಲೆಯಲ್ಲಿ ಭಾಗಿಯಾಗಿದ್ದಾರೆ ಅಂತ ದರ್ಶನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈಗ ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ಯಾವ ಯಾವ ವಿಚಾರ ಹೊರಗೆ ಬರುತ್ತೆ ಅದನ್ನಾದರಿಸಿ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ. ದರ್ಶನ್ ಅವರಿಗೂ ಕಾನೂನು ಒಂದೇ, ಪರಮೇಶ್ವರವರಿಗೂ ಕಾನೂನು ಒಂದೇ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೊಲೆಯಾದ ರೇಣುಕಾಸ್ವಾಮಿ ಕುಟುಂಬದ ಪರವಾಗಿ ಸರ್ಕಾರ ಏನು ಮಾಡಬಹುದು ಅನ್ನೋದನ್ನು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದರು.

“ಎಲ್ಲವನ್ನು ಸಿಬಿಐಗೆ ಕೊಡುವ ಅಗತ್ಯ. ಈಗ 13 ಮಂದಿಯನ್ನು ಅರೆಸ್ಟ್ ಮಾಡಿದ್ದೇವೆ. ಯಾರು ಮಾಡಿದ್ದಾರೆ? ಯಾಕೆ ಮಾಡಿದ್ದಾರೆ ಹೆಚ್ಚು ಕಡಿಮೆ ಎಲ್ಲ ವಿಚಾರಗಳು ಗೊತ್ತಾಗಿದೆ. ಹಾಗಾಗಿಬೇರೆ ಏಜೆನ್ಸಿಗಳಿಗೆ ತನಿಖೆಗೆ ಕೊಡುವ ಅಗತ್ಯ ಇಲ್ಲ” ಎಂದರು.

“ದರ್ಶನ್ ಮೇಲೆ ರೌಡಿ ಶೀಟ್ ಓಪನ್ ಮಾಡೋ ವಿಚಾರ ನಾನು ಮಾಧ್ಯಮಗಳಲ್ಲಿ ನೋಡಿದೆ. ದರ್ಶನ್ ಹಲವು ಪ್ರಕರಣಗಳಲ್ಲಿ ಅವರು ಭಾಗಿಯಾಗಿದ್ದಾರೆ ಅಂತ. ಇದನ್ನು ಪೊಲೀಸರು ತನಿಖೆ ಮಾಡುತ್ತಾರೆ. ಪೊಲೀಸರೇ ಸಮರ್ಥರು. ನಮ್ಮನ್ನು ಕೇಳಿ ಸೆಕ್ಷನ್ ಹಾಕೋದಿಲ್ಲ” ಎಂದು ಹೇಳಿದರು.

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ವಿಚಾರವಾಗಿ ಮಾತನಾಡಿ, “ಅದು ತನಿಖೆ ನಡೆಯುತ್ತಿದೆ. ಅಂತಿಮವಾಗಿ ಬೇಕಾಗಿರುವುದು ಎವಿಡೆನ್ಸ್. ಅದನ್ನೆಲ್ಲಾ ಮಾಡ್ತಾ ಇದ್ದಾರೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...