ಮೀಸಲಾತಿ ಹೇಳಿಕೆ | ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ನಾಯಕರಿಂದ ದೂರು ದಾಖಲು

Date:

ಮೀಸಲಾತಿ ಕುರಿತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕರು ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಗೆ ಶನಿವಾರ ದೂರು ಸಲ್ಲಿಸಿದ್ದಾರೆ.

ದೂರು ಸಲ್ಲಿಕೆಯಾದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ” ತಕ್ಷಣ ಎಫ್‍ಐಆರ್ ದಾಖಲಿಸಲು ಪೊಲೀಸರನ್ನು ಕೋರಿದ್ದೇವೆ. ಇದರಲ್ಲಿ ಜಾಮೀನುರಹಿತ ವಾರಂಟ್ ಇದೆ. ಆದ್ದರಿಂದ ಅವರ ಮೇಲೆ ಕ್ರಮ ಜರುಗಿಸಬೇಕಿದೆ” ಎಂದು ಒತ್ತಾಯಿಸಿದರು.

“ಭಾರತದ ಬಗ್ಗೆ ಹೊರದೇಶದಲ್ಲಿ ಕುಳಿತು ಅಪಮಾನಕರ ಹೇಳಿಕೆ ನೀಡಿದ್ದಾರೆ. ದಲಿತ ಸಮುದಾಯಗಳನ್ನು ನಿಂದಿಸಿದ್ದಾರೆ. ರಾಹುಲ್ ಗಾಂಧಿ ಅವರು ಪ್ರಬುದ್ಧರಾಗಿದ್ದಾರೆಂದು ಭಾವಿಸಿದ್ದೆವು. ಅವರು ಇನ್ನೂ ಪ್ರಬುದ್ಧತೆ ಹೊಂದಿಲ್ಲ ಎಂಬುದು ಅವರ ಹೇಳಿಕೆಗಳಿಂದ ಗೊತ್ತಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“1977-78ರಲ್ಲಿ ಮೊರಾರ್ಜಿ ದೇಸಾಯಿಯವರ ಸರಕಾರ ಇದ್ದಾಗ ರಾಹುಲ್ ಅವರ ಅಜ್ಜಿ ಇಂದಿರಾ ಗಾಂಧಿಯವರನ್ನು ಬಂಧಿಸಿದ್ದರು. ಮತ್ತೆ ಚುನಾವಣೆ ನಡೆದಾಗ ಇಂದಿರಾ ಅವರು ಮತ್ತೆ ಪ್ರಧಾನಿಯಾದರು. ಅಮೆರಿಕಕ್ಕೆ ಹೋದಾಗ ಅಲ್ಲಿನ ಪತ್ರಕರ್ತರು ಇಂದಿರಾ ಅವರನ್ನು ನೀವು ಎಲ್ಲರನ್ನು ತುರ್ತು ಪರಿಸ್ಥಿತಿ ವೇಳೆ ಜೈಲಿಗೆ ಕಳಿಸಿದ್ದೀರಿ. ಈಗ ನಿಮ್ಮ ಜೈಲಿನ ಅನುಭವ ಹೇಳಿ ಎಂದು ಪ್ರಶ್ನಿಸಿದ್ದರು. ಆಗ ಅವರ ಅಜ್ಜಿ, ಅದು ನನ್ನ ದೇಶದ ವಿಚಾರ; ಹೊರಗಡೆ ಅದನ್ನು ನಾನು ಪ್ರಸ್ತಾಪ ಮಾಡುವುದಿಲ್ಲ ಎಂದಿದ್ದರು. ರಾಹುಲ್ ಅವರೇ, ನಿಮ್ಮ ಅಜ್ಜಿಯನ್ನು ನೋಡಿ ನೀವು ಕಲಿತಿಲ್ಲ ಅಲ್ಲವೇ? ಇನ್ನೇನು ಕಲೀತೀರಿ ನೀವು” ಎಂದು ಪ್ರಶ್ನಿಸಿದರು

“ಮೋದಿಯವರ ಕುರಿತು ಹಗುರವಾಗಿ ಹೊರದೇಶದಲ್ಲಿ ಮಾತನಾಡುತ್ತೀರಿ. ನೀವೇನೇ ಮಾತನಾಡಬೇಕಿದ್ದರೂ ನಮ್ಮ ದೇಶದಲ್ಲಿ ಮಾತನಾಡಿ ಎಂದರಲ್ಲದೆ, ಅಂಥ ಕೆಟ್ಟ ಪರಿಸ್ಥಿತಿಯನ್ನು ಕಾಂಗ್ರೆಸ್ಸಿನಿಂದ ಮತ್ತು ರಾಹುಲ್ ಗಾಂಧಿಯಿಂದ ಈ ದೇಶವಾಸಿಗಳು ಅನುಭವಿಸಬೇಕಾಗಿದೆ” ಎಂದು ಹೇಳಿದರು.

“ವಿಜಯಪುರ, ಬೆಳಗಾವಿ, ಬಾಗಲಕೋಟೆಯಲ್ಲೂ ರಾಹುಲ್‌ ಗಾಂಧಿ ವಿರುದ್ಧ ಇವತ್ತು ದೂರುಗಳನ್ನು ಕೊಡಲಾಗಿದೆ. ಬೇರೆ ರಾಜ್ಯಗಳಲ್ಲೂ ಕೂಡ ದೂರುಗಳು ದಾಖಲಾಗಿವೆ. ಯಾವುದೇ ಸಬೂಬು ನೀಡದೆ ಎಫ್‍ಐಆರ್ ಮಾಡಬೇಕು” ಎಂದು ಆಗ್ರಹಿಸಿದರು.

“ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಸಂವಿಧಾನ ರಕ್ಷಕರು ತಾವೇ ಎನ್ನುತ್ತಾರೆ. ಸಂವಿಧಾನಕ್ಕೆ ಅಪಮಾನ ಮಾಡುತ್ತಾರೆ ಎಂದು ಟೀಕಿಸಿದರು. ಭ್ರಷ್ಟಾಚಾರಗಳನ್ನು ಮುಚ್ಚಿಕೊಳ್ಳುವ ಕಾರಣಕ್ಕಾಗಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತವಾಗಿವೆ” ಎಂದು ಟೀಕಿಸಿದರು.

ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್, ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ಪಕ್ಷದ ಮುಖಂಡ ಭಾಸ್ಕರ್ ರಾವ್, ಬಿಜೆಪಿ ಎಸ್‍ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹೂಡಿ ಮಂಜುನಾಥ್, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ, ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ವಸಂತ್ ಕುಮಾರ್ ಸೇರಿದಂತೆ ಇತರರು ಬಿಜೆಪಿ ನಿಯೋದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...