ಭಾರತೀಯ ನ್ಯಾಯಾಲಯದಲ್ಲಿ ರಾಹುಲ್ ಪ್ರಕರಣದ ಮೇಲೆ ಕಣ್ಣಿಟ್ಟಿದ್ದೇವೆ: ಅಮೆರಿಕ

Date:

  • ರಾಹುಲ್‌ ಅನರ್ಹತೆ ಪ್ರ‍ಶ್ನೆಗೆ ಅಮೆರಿಕದ ವಕ್ತಾರ ವೇದಾಂತ್‌ ಪ್ರತಿಕ್ರಿಯೆ
  • ಶಿಕ್ಷೆಯ ನಂತರ ರಾಹುಲ್‌ ಸದಸ್ಯತ್ವ ಅನರ್ಹಗೊಳಿಸಿದ ಲೋಕಸಭೆ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ನ್ಯಾಯಾಲಯದ ಶಿಕ್ಷೆ ಹಾಗೂ ಲೋಕಸಭೆ ಸದಸ್ಯತ್ವ ಅಮಾನತು ಭಾರತದಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು ಸೃಷ್ಟಿಸುತ್ತಿರುವ ನಡುವೆ ಅಮೆರಿಕ ಈ ಪ್ರತಿಕ್ರಿಯೆ ನೀಡಿದೆ.

“ಕಾನೂನು ಹಾಗೂ ನ್ಯಾಯಾಂಗದ ಸ್ವಾತಂತ್ರ್ಯ ಯಾವುದೇ ಪ್ರಜಾಪ್ರಭುತ್ವದ ಮೂಲಾಧಾರ. ಹೀಗಾಗಿ ನಾವು ಭಾರತೀಯ ನ್ಯಾಯಾಲಯಗಳಲ್ಲಿ ರಾಹುಲ್‌ ಗಾಂಧಿ ಅವರ ಪ್ರಕರಣ ಇತ್ಯರ್ಥಗೊಳ್ಳುವ ಪ್ರಕ್ರಿಯೆಯನ್ನು ಎಚ್ಚರಿಕೆಯಿಂದ ಗಮನಿಸುತ್ತಿದ್ದೇವೆ” ಎಂದು ಅಮೆರಿಕದ ರಾಜ್ಯ ಪ್ರಧಾನ ಉಪ ವಕ್ತಾರ ವೇದಾಂತ್‌ ಪಟೇಲ್‌ ಸೋಮವಾರ (ಮಾರ್ಚ್ 27) ತಿಳಿಸಿದ್ದಾರೆ.

ವಾಷಿಂಗ್ಟನ್‌ನಲ್ಲಿ ಮಾಧ್ಯಮಗೋಷ್ಠಿಯೊಂದರಲ್ಲಿ ಭಾರತದ ಸಂಸತ್ತಿನಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಅನರ್ಹತೆ ಸಂಬಂಧಿಸಿದ ಪ್ರಶ್ನೆಯೊಂದಕ್ಕೆ ಅವರು ಪ್ರತಿಕ್ರಿಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ ಅಮೆರಿಕದ ಸಂಸತ್ ಸದಸ್ಯ ರೋ ಖನ್ನಾ ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ರಾಹುಲ್ ಗಾಂಧಿ ಅವರನ್ನು ಸಂಸತ್ತಿನಿಂದ ಅನರ್ಹಗೊಳಿಸಿರುವುದು ಗಾಂಧಿವಾದಿ ಮೌಲ್ಯಗಳು ಮತ್ತು ಭಾರತದ ಮೂಲತತ್ವಗಳಿಗೆ ಎಸಗಿದ ದ್ರೋಹ. ನನ್ನ ಮುತ್ತಾತ ವರ್ಷಗಟ್ಟಲೆ ಜೈಲಿನಲ್ಲಿದ್ದು ತ್ಯಾಗ ಮಾಡಿರುವುದು ಭಾರತದ ಪ್ರಜಾಪ್ರಭುತ್ವವನ್ನು ಇಂತಹ ಸ್ಥಿತಿಯಲ್ಲಿ ನೋಡಲೋಸುಗ ಅಲ್ಲ” ಎಂದು ಕಟುವಾಗಿ ಟೀಕಿಸಿದ್ದಾರೆ.

ಆದರೆ, ಅಮೆರಿಕದ ಅಧಿಕೃತ ವಕ್ತಾರರು ಇನ್ನೂ ಭಾರತ ಸರ್ಕಾರವನ್ನು ಸಂಪೂರ್ಣವಾಗಿ ಟೀಕಿಸಿಲ್ಲ. ಬದಲಾಗಿ ಕಾದು ನೋಡುವ ಪ್ರವೃತ್ತಿಯನ್ನು ಅಳವಡಿಸಿಕೊಂಡಿದ್ದಾರೆ. “ಭಾರತ ಸರ್ಕಾರದ ಜೊತೆಗಿನ ಒಪ್ಪಂದದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಸೇರಿದಂತೆ ಪ್ರಜಾಪ್ರಭುತ್ವ ಮೌಲ್ಯಗಳ ಹಂಚಿಕೆಯಲ್ಲಿ ಬದ್ಧತೆಯ ಆಧಾರದಲ್ಲಿ ಅಮೆರಿಕ ಕಾರ್ಯನಿರ್ವಹಿಸುತ್ತಿದೆ. ನಮ್ಮ ಒಪ್ಪಂದಗಳಲ್ಲಿ ಪ್ರಜಾಪ್ರಭುತ್ವ ತತ್ವಗಳ ಪ್ರಾಮುಖ್ಯತೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯ ಸೇರಿದಂತೆ ಮಾನವ ಹಕ್ಕುಗಳ ರಕ್ಷಣೆಯ ಅಂಶಗಳು ನಮ್ಮ ಎರಡೂ ರಾಷ್ಟ್ರಗಳನ್ನು ಸದೃಢಗೊಳಿಸುವ ಪ್ರಮುಖ ಕೀಲಿಕೈ ಎಂದು ಪ್ರತಿಬಿಂಬಿಸುವುದನ್ನು ಮುಂದುವರಿಸುತ್ತೇವೆ” ಎಂದು ವೇದಾಂತ್‌ ಪಟೇಲ್‌ ಹೇಳಿದ್ದಾರೆ.

ಅಮೆರಿಕ, ಭಾರತ ಅಥವಾ ರಾಹುಲ್‌ ಗಾಂಧಿ ಯಾರೊಡನೆ ಸಂಪರ್ಕ ಸಾಧಿಸುತ್ತದೆ? ಎಂಬ ಪ್ರಶ್ನೆಗೆ ಉತ್ತರಿಸಿದ ವೇದಾಂತ್‌ ಪಟೇಲ್, “ಸಂಪರ್ಕ ಸಾಧಿಸಲು ನಿರ್ದಿಷ್ಟ ವಿಷಯಗಳಿಲ್ಲ. ಆದರೆ ಯಾವುದೇ ರಾಷ್ಟ್ರಗಳಲ್ಲಿ ಪ್ರತಿಪಕ್ಷ ನಾಯಕರೊಂದಿಗೆ ನಾವು ಸಂಪರ್ಕ ಸಾಧಿಸುವುದು ಸಾಮಾನ್ಯ. ನಾವು ದ್ವಿಪಕ್ಷೀಯ ಸಂಬಂಧವನ್ನೂ ಸಾಧಿಸುತ್ತೇವೆ. ಆದರೆ ಸಂಪರ್ಕ ಸಾಧಿಸಲು ಯಾವುದೇ ನಿರ್ದಿಷ್ಟ ಒಪ್ಪಂದ ಹೊಂದಿಲ್ಲ” ಎಂದು ಹೇಳಿದರು.

‘ಮೋದಿ ಉಪನಾಮ’ದ ಕುರಿತು ಟೀಕೆಯ ಹಿನ್ನೆಲೆ ದಾಖಲಾದ ಪ್ರಕರಣದ ಆಧಾರದಲ್ಲಿ ಸೂರತ್‌ ನ್ಯಾಯಾಲಯ ರಾಹುಲ್‌ ಗಾಂಧಿ ಅವರನ್ನು ಲೋಕಸಭೆ ಸಂಸತ್‌ ಸದಸ್ಯತ್ವ ಸ್ಥಾನದಿಂದ ಮಾರ್ಚ್‌ 24ರಂದು ವಜಾಗೊಳಿಸಿದ್ದರು. ರಾಹುಲ್‌ ಅವರು ಕೇರಳದ ವಯನಾಡು ಕ್ಷೇತ್ರದ ಸಂಸದರಾಗಿದ್ದರು.

2019ರ ಲೋಕಸಭೆ ಚುನಾವಣೆ ವೇಳೆ ಕರ್ನಾಟಕದಲ್ಲಿ ರಾಹುಲ್‌ ಗಾಂಧಿ ‘ಮೋದಿ ಉಪನಾಮ’ದ ಕುರಿತು ಟೀಕಿಸಿದ್ದರು. ಈ ಸಂಬಂಧ ದಾಖಲಾದ ಪ್ರಕರಣದಲ್ಲಿ ಗುಜರಾತ್‌ನ ಸೂರತ್‌ ನ್ಯಾಯಾಲಯ ಮಾರ್ಚ್ 23ರಂದು ರಾಹುಲ್‌ ಗಾಂಧಿ ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿತ್ತು.

2019ರ ಏಪ್ರಿಲ್‌ನಲ್ಲಿ ಲೋಕಸಭೆ ಚುನಾವಣೆ ವೇಳೆ ಕರ್ನಾಟಕದ ಕೋಲಾರದಲ್ಲಿ ಸಮಾವೇಶದ ವೇಳೆ, “ಎಲ್ಲ ಕಳ್ಳರಿಗೂ ಮೋದಿ ಎಂಬ ಸಾಮಾನ್ಯ ಹೆಸರು ಏಕಿರುತ್ತದೆ?” ಎಂದು ರಾಹುಲ್‌ ವ್ಯಂಗ್ಯವಾಡಿದ್ದರು. ಇದನ್ನು ಖಂಡಿಸಿ ಸೂರತ್‌ನ ಬಿಜೆಪಿ ಶಾಸಕ ಪೂರ್ಣೇಶ್‌ ಮೋದಿ ರಾಹುಲ್‌ ಅವರ ವಿರುದ್ಧ ಅಪರಾಧ ಮಾನಹಾನಿ ಪ್ರಕರಣ ದಾಖಲಿಸಿದ್ದರು.

3fc71c934f523957b32c0dd3d0e48cbcbd9cdd59923741ff837bb405a2b7ba0f?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...