ನನ್ನನ್ನು ಬಂಧಿಸುವಂತಹ ಚಿಲ್ಲರೆ ಕೆಲಸ ನಮ್ಮ ಜಿಲ್ಲೆಯಲ್ಲಿ ಆಗಿಲ್ಲ: ರೇವಣ್ಣ ಹೇಳಿಕೆಗೆ ಜಿ ಟಿ ದೇವೇಗೌಡ ತಿರುಗೇಟು

Date:

ಸಿಎಂ ಸಿದ್ದರಾಮಯ್ಯ ಸೇರಿದಂತೆ ಯಾವ ಮುಖ್ಯಮಂತ್ರಿಯೂ ನನ್ನನ್ನು ಬಂಧಿಸುವಂತೆ ಹೇಳಿಲ್ಲ. ಸಚಿವರೂ ಹೇಳಿಲ್ಲ. ಆ ರೀತಿಯ ಚಿಲ್ಲರೆ ಕೆಲಸ ನಮ್ಮ ಜಿಲ್ಲೆಯಲ್ಲಿ ಆಗಿಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್‌ ಶಾಸಕ ಜಿ.ಟಿ. ದೇವೇಗೌಡ ಹೇಳಿದರು.

‘ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಿಟಿಡಿ ಹಾಗೂ ಅವರ ಪುತ್ರನನ್ನು ಬಂಧಿಸಲು ಸಿದ್ಧತೆಯಾಗಿತ್ತು. ಅದನ್ನು ಎಚ್.ಡಿ.ಕುಮಾರಸ್ವಾಮಿ ತಪ್ಪಿಸಿದ್ದರು. ಇಲ್ಲದಿದ್ದರೆ ಜಿಟಿಡಿ ಮಗನ ಜೊತೆ ಜೈಲಿನಲ್ಲಿರಬೇಕಿತ್ತು’ ಎಂಬ ಶಾಸಕ ಎಚ್.ಡಿ. ರೇವಣ್ಣ ಹೇಳಿಕೆಗೆ ಮೈಸೂರಿನಲ್ಲಿ ಗುರುವಾರ ತಿರುಗೇಟು ನೀಡಿದರು.

“ಸಿದ್ದರಾಮಯ್ಯ ಸೇಡು ತೀರಿಸಿಕೊಳ್ಳಲು ರಾಜಕೀಯ ಮಾಡಿದ್ದಾರೆ. ಆದರೆ, ವೈಯಕ್ತಿಕವಾಗಿ ಏನನ್ನೂ ಮಾಡಿಲ್ಲ. ಬಂಧಿಸುವಂತಹ ಸೇಡನ್ನು ಯಾರೂ ಇಟ್ಟುಕೊಂಡಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಅಥವಾ ನನ್ನ ಮಗನಿಗೆ ಜೈಲಿಗೆ ಹೋಗುವಂಥ ಸ್ಥಿತಿಯೇನೂ ಬಂದಿಲ್ಲ. ಅಂತಹ ಕೆಲಸವನ್ನೇನೂ ನಾವು ಮಾಡಿಲ್ಲ. ನಮ್ಮ ವಿರುದ್ಧ ಯಾವುದಾದರೂ ಪ್ರಕರಣವಿದ್ದರೆ ತಾನೇ ಬಂಧಿಸುವುದು? ನನ್ನ ವಿರುದ್ಧ ಆ ಹೇಳಿಕೆ ನೀಡಿದ ರೇವಣ್ಣ ಅವರನ್ನು ಬೆಳಗಾವಿ ಅಧಿವೇಶನಕ್ಕೆ ಬಂದಾಗ ಕೇಳುತ್ತೇನೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತೀಯ ಜನತಾ ಪಕ್ಷಕ್ಕೆ ನೀತಿಯೂ ಇಲ್ಲ, ರೀತಿಯೂ ಇಲ್ಲ

“ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಿದ್ದೇ ಎಚ್ ಡಿ ರೇವಣ್ಣ. ಅವರು ಸಮ್ಮಿಶ್ರ ಸರ್ಕಾರದಲ್ಲೇ ಮುಖ್ಯಮಂತ್ರಿ ಆಗಬೇಕಿತ್ತು. ಆ ಬಗ್ಗೆ ರೇವಣ್ಣ ಒಪ್ಪಿ ಕ್ಷಮೆಯನ್ನೂ ಕೇಳಿದ್ದಾರೆ. ಡಿಸಿಎಂ ಆಗಲಾಗುತ್ತಿಲ್ಲ ಎಂಬ ಕಾರಣಕ್ಕೆ ಯಡಿಯೂರಪ್ಪ ಅವರಿಗಿದ್ದ ಅವಕಾಶವನ್ನು ದೊಡ್ಡಗೌಡರ ಜೊತೆ ಮಾತನಾಡಿ ತಪ್ಪಿಸಿದ್ದರು” ಎಂದು ಆರೋಪಿಸಿದರು.

“ಸಾರ್ವಜನಿಕ ಜೀವನಕ್ಕೆ ಬಂದು 54 ವರ್ಷಗಳಾಗಿವೆ. ರಾಜಕೀಯವಾಗಿ ನನ್ನ ವಿರುದ್ದ ಯಾರೂ ದೂರು ನೀಡಿಲ್ಲ. ನನ್ನ ಮಗ ಹರೀಶ್ ಗೌಡ 2010ರಿಂದ ಸಾರ್ವಜನಿಕ ಸೇವೆಯಲ್ಲಿದ್ದಾನೆ. ಆತನ ವಿರುದ್ಧವೂ ಯಾವುದೇ ಪ್ರಕರಣವಿಲ್ಲ. ದಬ್ಬಾಳಿಕೆ ನಡೆಸುವುದು ಅಥವಾ ಏಕವಚನದಲ್ಲಿ ಮಾತನಾಡುವುದನ್ನು ನಾವು ಮಾಡಿಲ್ಲ” ಎಂದು ಪರೋಕ್ಷವಾಗಿ ರೇವಣ್ಣ ಅವರನ್ನು ಕುಟುಕಿದರು.

“ನಾನು ಮಾಧ್ಯಮಗಳಿಂದ ದೂರವಿದ್ದೇನೆ. ಏನನ್ನೂ ಮಾತನಾಡಬಾರದೆಂದು ನಿರ್ಧರಿಸಿದ್ದೇನೆ. ಆದರೂ ಪದೇ ಪದೇ ನನ್ನ ಹೆಸರನ್ನೇಕೆ ತೆಗೆಯುತ್ತಾರೆ? ನನ್ನ ಕ್ಷೇತ್ರದ ಅಭಿವೃದ್ಧಿ ಬಿಟ್ಟು ಬೇರೇನೂ ವಿಚಾರ ನನ್ನ ತಲೆಯಲ್ಲಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...