ಮುಡಾ ಅಕ್ರಮ ತನಿಖೆ ಮಾಡಲು ನಿವೃತ್ತ ನ್ಯಾ. ಪಿ ಎನ್ ದೇಸಾಯಿ ಅನರ್ಹರು: ಆರ್‌ ಅಶೋಕ್

Date:

ಮುಡಾ ಅಕ್ರಮ ತನಿಖೆ ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ರಚಿಸಿರುವ ಆಯೋಗದ ಅಧ್ಯಕ್ಷರಾದ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಮೂರು ವರ್ಷಗಳ ಕಾಲ ಯಾವುದೇ ಶಾಸನಬದ್ಧ ಸಮಿತಿ, ಸ್ವಾಯತ್ತ ಸಮಿತಿ, ನಿಯಂತ್ರಕ ಸಮಿತಿಗೆ ನೇಮಕ ಮಾಡದಂತೆ ನವೆಂಬರ್ 7 ರಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಮುಡಾ ಅಕ್ರಮ ತನಿಖೆ ಮಾಡಲು ಅನರ್ಹರು ಎಂಬ ವಿಷಯ ಬೆಳಕಿಗೆ ಬಂದಿದೆ ಎಂದು ಪ್ರತಿಪ್ರಪಕ್ಷ ನಾಯಕ ಆರ್‌ ಅಶೋಕ್‌ ಹೇಳಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಕೆಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಆರ್‌ ಅಶೋಕ್‌ ಕೇಳಿದ ಪ್ರಶ್ನೆಗಳು ಇಲ್ಲಿವೆ…

1- ನಿವೃತ್ತ ನ್ಯಾಯಮೂರ್ತಿ ದೇಸಾಯಿ ಅವರು ತನಿಖಾ ಆಯೋಗದಲ್ಲಿ ಮುಂದುವರೆಯಲು ಅನರ್ಹರು ಎಂಬ ವಿಷಯ ಸರ್ಕಾರದ ಗಮನಕ್ಕೆ ಬಂದಿದ್ದು ಯಾವಾಗ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2- ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಈ ಕುರಿತಂತೆ ಸರ್ಕಾರಕ್ಕೆ ಪತ್ರ ಬರೆಯುವರೆಗೂ ಈ ವಿಷಯ ಸರ್ಕಾರದ ಗಮನಕ್ಕೆ ಬಂದಿರಲಿಲ್ಲವೆ? ಅಥವಾ ಗಮನಕ್ಕೆ ಬಂದಿದ್ದರೂ ಕಾನೂನು ಬಾಹಿರವಾಗಿ ಮುಂದುವರಿಸಲಾಯಿತೆ?

3- ಅವರ ಅನರ್ಹತೆ ಬಗ್ಗೆ ನ್ಯಾಯಮೂರ್ತಿಗಳು ಸ್ವತಃ ತಾವೇ ಸರ್ಕಾರದ ಗಮನಕ್ಕೆ ತಂದು, ತನಿಖಾ ಆಯೋಗದಿಂದ ಹಿಂದೆ ಸರಿಯಬೇಕಾಗಿತ್ತು. ಆದರೆ ಅನರ್ಹತೆ ಆದೇಶ ಬಂದ 5 ದಿನಗಳ ನಂತರ, ಅಂದರೆ ನವೆಂಬರ್ 12ರಂದು ಅವರು ಮುಡಾ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುತ್ತಾರೆ. ಇದು ತಪ್ಪಲ್ಲವೇ?

4- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಆಯೋಗಕ್ಕೆ ಸಲ್ಲಿಸಿರುವ ದಾಖಲೆಗಳು ಸುರಕ್ಷಿತವಾಗಿದೆಯೇ?

5- ಸ್ವತಃ ನಾಡಿನ ಮುಖ್ಯಮಂತ್ರಿಗಳು ಮತ್ತು ಅವರ ಕುಟುಂಬ ಸದಸ್ಯರು ಆರೋಪಿಗಳಾಗಿರುವ, ಸುಮಾರು 4,000 ಕೋಟಿ ರೂಪಾಯಿ ಮೊತ್ತದ ಬೃಹತ್ ಭ್ರಷ್ಟಚಾರ ನಡೆದಿದ ಎನ್ನಲಾದ ಮುಡಾ ಹಗರಣದ ತನಿಖೆಯಲ್ಲಿ ಸರ್ಕಾರ ಎಷ್ಟು ಗಂಭೀರವಾಗಿದೆ ಎನ್ನುವುದಕ್ಕೆ ಈ ಎಡವಟ್ಟು ನಿದರ್ಶನವಲ್ಲವೇ?

ಸರ್ಕಾರ ಈ ಕೊಡಲೇ ತನಿಖಾ ಆಯೋಗಕ್ಕೆ ನೀಡಿರುವ ಎಲ್ಲ ದಾಖಲೆಗಳನ್ನು ಪರಿಶೀಲಿಸಿ ವಶ ಪಡಿಸಿಕೊಳ್ಳಬೇಕು. ತನಿಖಾ ಆಯೋಗದ ಮುಖ್ಯಸ್ಥರಿಗೆ ನವೆಂಬರ್ 7 ರ ನಂತರ ನೀಡಲಾಗಿರುವ ಎಲ್ಲ ಸಂಬಳ, ಸೌಲಭ್ಯಗಳನ್ನು ಹಿಂಪಡೆಯಬೇಕು. ಅನರ್ಹರಾಗಿದ್ದೂ ಸಹ ತನಿಖಾ ಆಯೋಗದಲ್ಲಿ ಮುಂದುವರೆದ ನಿವೃತ್ತ ನ್ಯಾಯಮೂರ್ತಿಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮತ್ತು ಸುಪ್ರೀಂ ಕೋರ್ಟ್‌ಗೆ ವರದಿ ಸಲ್ಲಿಸಬೇಕು” ಎಂದು ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...