ರಸ್ತೆಗುಂಡಿ ಕಾಮಗಾರಿ | ಖುದ್ದು ರಾತ್ರಿ ವೇಳೆ ನಗರ ಸಂಚಾರ ನಡೆಸಿ ಪರಿಶೀಲಿಸುವೆ: ಡಿ ಕೆ ಶಿವಕುಮಾರ್

Date:

ರಸ್ತೆ ಗುಂಡಿ ಮುಚ್ಚುವ ಕಾಮಗಾರಿಯ ಗುಣಮಟ್ಟ ವೀಕ್ಷಣೆ ಮಾಡಲು ರಾತ್ರಿ ಸಂಚಾರ ನಡೆಸುತ್ತೇನೆ. ಎರಡು ಮೂರು ದಿನಗಳಲ್ಲಿ ದಿನಾಂಕ ತಿಳಿಸುತ್ತೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಎಷ್ಟು ರಸ್ತೆಗುಂಡಿಗಳಿವೆ ಎಂಬುದರ ಬಗ್ಗೆ ನನ್ನ ಬಳಿ ಲೆಕ್ಕವಿದೆ. ಅಭಿಯಾನದ ರೀತಿ ಕೆಲಸ ಮಾಡಿದ್ದೇವೆ. ಇದು ಸಾಧನೆಯಲ್ಲ ಜವಾಬ್ದಾರಿ. ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಆದೇಶ ಕೊಟ್ಟ ಮೇಲೆ ಅಧಿಕಾರಿಗಳು ಇಷ್ಟು ತ್ವರಿತವಾಗಿ ಕೆಲಸ ಮಾಡಿದ್ದನ್ನು ನಾನು ನೋಡಿರಲಿಲ್ಲ” ಎಂದು ತಿಳಿಸಿದರು.

“ರಸ್ತೆಗುಂಡಿಗಳನ್ನು ಮುಚ್ಚಿಸುವ ವಿಚಾರದಲ್ಲಿ ಬಿಬಿಎಂಪಿ ಅಧಿಕಾರಿಗಳು ಹಗಲು- ರಾತ್ರಿ ಕೆಲಸ ಮಾಡುತ್ತಿದ್ದಾರೆ. ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು. ಮಧ್ಯೆ ಮಳೆ ಬಂದಿದೆ. ನೀವು (ಮಾಧ್ಯಮ)ಗಳು ಅಷ್ಟೋ, ಇಷ್ಟೊ ಕೆಲಸ ಮಾಡಿದ್ದಾರೆ ಎಂದು ವರದಿ ಮಾಡಿದ್ದೀರಿ. ನಾವು ಬದ್ಧತೆಯಿಂದ ನಾಗರೀಕರಿಗೆ ಅನುಕೂಲ ಮಾಡುವ ಕೆಲಸ ಮಾಡಿದ್ದೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೇರೆ ರಾಜ್ಯಗಳಿಗೆ ಅವಮಾನ ಮಾಡಲು ಇಷ್ಟವಿಲ್ಲ

“ನಾನು ಬೇರೆ ರಾಜ್ಯಗಳಿಗೆಲ್ಲಾ ಭೇಟಿ ನೀಡಿದ್ದೇನೆ. ಅಲ್ಲಿನ ರಸ್ತೆಯ ವಿಡಿಯೋಗಳನ್ನು ಹಾಕಿದರೆ ಆ ರಾಜ್ಯಗಳಿಗೆ ಅವಮಾನವಾಗುತ್ತದೆ. ಅದಕ್ಕಿಂತ ಉತ್ತಮವಾಗಿ ನಮ್ಮವರು ಇಲ್ಲಿನ ರಸ್ತೆಗಳ ಪರಿವರ್ತನೆ ಮಾಡಬೇಕು ಎಂದು ಕೆಲಸ ಮಾಡಿದ್ದಾರೆ. ಅದರಲ್ಲಿ ನಾವು ಯಶಸ್ವಿಯಾಗುತ್ತಿದ್ದೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜ್ವಲ್‌-ಮುನಿರತ್ನ ತೋರಿದ ಪಾತಕದ ಮಾದರಿ ಎಂಥವು? ಮಿಕ್ಕವರು ಅನುಸರಿಸಿದರೆ ಹೆಣ್ಣುಮಕ್ಕಳ ಪಾಡೇನು?

ಆರ್. ಅಶೋಕ್ ಮೇಲಿನ ಸಂಚು ಕೇಳಿ ದಿಗ್ಬ್ರಮೆ

ಶಾಸಕ ಮುನಿರತ್ನ ಪ್ರಕರಣಗಳ ವಿಚಾರವಾಗಿ ಎಸ್ ಐಟಿ ರಚನೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಅನೇಕರು ಒತ್ತಡ ಹಾಕುತ್ತಿದ್ದಾರೆ. ನೀವು ಇದರ ಚರ್ಚೆ ನಡೆಸಿದ್ದೀರಾ ಎಂದು ಕೇಳಿದಾಗ “ನನಗೆ ಸಿಎಂ ಭೇಟಿ ಸಾಧ್ಯವಾಗಿಲ್ಲ. ಆದರೆ ಆರ್. ಅಶೋಕ್ ಮೇಲೆ ಮಾಡಿದ್ದ ಸಂಚು ಕೇಳಿ ದಿಗ್ಬ್ರಮೆಯಾಗಿದ್ದೇನೆ. ಈ ರೀತಿಯ ಸಂಚನ್ನು ನಾನು ಇಡೀ ಪ್ರಪಂಚದಲ್ಲಿಯೇ ಕೇಳಿಲ್ಲ” ಎಂದರು.

“ಮುನಿರತ್ನ ವಿಚಾರವಾಗಿ ಅಶೋಕ್ ಅವರು ಮೊದಲು ಮಾತನಾಡಿದ್ದನ್ನು ಕೇಳಿದ್ದೆ. ಈಗ ಮಾತನಾಡಿದ್ದನ್ನು ನಾನು ನೋಡಿಲ್ಲ. ಅಶೋಕಣ್ಣ, ಸಿ.ಟಿ. ರವಿಯಣ್ಣ, ವಿಜಯೇಂದ್ರಣ್ಣ ಅವರುಗಳು ಮಾತನಾಡಬೇಕು. ಈ ವಿಚಾರದಲ್ಲಿ ಸತ್ಯ ಏನಿದೆ ಎಂದು ತಮ್ಮ ಅಭಿಪ್ರಾಯಗಳನ್ನು ಹೇಳಬೇಕು. ಮುಖ್ಯವಾಗಿ ಕುಮಾರಣ್ಣ, ಡಾ. ಮಂಜುನಾಥ್ ಅವರು ಮಾತನಾಡಬೇಕು. ಯಾರು, ಯಾರಿಗೆ ಏನಾಗಿದೆ ಎಂದು ನಾನು ತಿಳಿದುಕೊಳ್ಳಲು ಆಗಿಲ್ಲ” ಎಂದರು.

ಡಿ.ಕೆ.ಸಹೋದರರ ನೇರ ಷಡ್ಯಂತ್ರ ಎಂದು ವಿಜಯೇಂದ್ರ, ಅಶ್ವತ್ಥನಾರಾಯಣ ಅವರ ಆರೋಪದ ಬಗ್ಗೆ ಕೇಳಿದಾಗ “ಅವರುಗಳು ನನ್ನ ನೆನೆಸಿ ಕೊಳ್ಳುತ್ತೀರಬೇಕು” ಎಂದು ಹೇಳಿದರು.

ಕುಮಾರಸ್ವಾಮಿ ಅವರ ಗಂಗೇನಹಳ್ಳಿ ಡಿನೋಟಿಫಿಕೇಟಿನ್ ಪ್ರಕರಣದ ದಾಖಲೆ ಬಿಡುಗಡೆ ಮಾಡಲಾಗಿದ್ದು, ಮುಂದಿನ ರಾಜಕೀಯ ಹೋರಾಟ ಹೇಗಿರಲಿದೆ ಎಂದು ಕೇಳಿದಾಗ “ಇದರ ಬಗ್ಗೆ ಸಂಪೂರ್ಣ ವಿಚಾರ ಗೊತ್ತಿಲ್ಲ. ತಿಳಿದುಕೊಂಡು ಮಾತನಾಡುತ್ತೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...