ಪ್ರಿಯಾಂಕಾ ಗಾಂಧಿ ಕೆನ್ನೆಯಂತೆ ನುಣುಪಾದ ರಸ್ತೆ ನಿರ್ಮಾಣ : ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಖಂಡನೆ

Date:

“ದೆಹಲಿಯ ಕಲ್ಕಾಜಿ ಕ್ಷೇತ್ರದಲ್ಲಿ ಗೆದ್ದರೆ ಕ್ಷೇತ್ರದ ರಸ್ತೆಗಳನ್ನು ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ಅವರ ಕೆನ್ನೆಯಂತೆ ನುಣುಪಾಗಿ ನಿರ್ಮಿಸಲಾಗುವುದು” ಎಂದು ಹೇಳಿಕೆ ನೀಡುವ ಮೂಲಕ ಬಿಜೆಪಿ ಶಾಸಕ ರಮೇಶ್ ಬಿಧುರಿ ಭಾನುವಾರ ವಿವಾದದಲ್ಲಿ ಸಿಲುಕಿದ್ದಾರೆ. ಹಾಗೆಯೇ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಬಿಜೆಪಿಯನ್ನು ‘ಮಹಿಳಾ ವಿರೋಧಿ ಪಕ್ಷ’ ಎಂದು ಕರೆದಿರುವ ಕಾಂಗ್ರೆಸ್, “ಬಿಧುರಿ ಹೇಳಿಕೆ ನಾಚಿಕೆಗೇಡಿನವು, ಮಹಿಳೆಯರ ವಿಷಯದಲ್ಲಿ ಅವರ ಕೊಳಕು ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಇದು ಬಿಜೆಪಿಯ ನಿಜವಾದ ಮುಖ” ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನೇಟ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಲೋಕಸಭೆಯ ಚೊಚ್ಚಲ ಭಾಷಣದಲ್ಲೇ ಕೇಂದ್ರದ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಧುರಿ ಮಾತ್ರವಲ್ಲದೆ ಬಿಜೆಪಿಯ ಉನ್ನತ ನಾಯಕತ್ವವೂ ಕೈಮುಗಿದು ಪ್ರಿಯಾಂಕಾ ಗಾಂಧಿಯವರಲ್ಲಿ ಕ್ಷಮೆ ಕೇಳಬೇಕು” ಎಂದು ಕಾಂಗ್ರೆಸ್ ನಾಯಕಿ ಆಗ್ರಹಿಸಿದ್ದಾರೆ.

ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಬಿಧುರಿ ಬಿಜೆಪಿ ಅಭ್ಯರ್ಥಿಯಾಗಿದ್ದು, ದೆಹಲಿ ಮುಖ್ಯಮಂತ್ರಿ ಆತಿಶಿ ಮತ್ತು ಕಾಂಗ್ರೆಸ್‌ನ ಅಲ್ಕಾ ಲಂಬಾ ವಿರುದ್ಧ ಕಣಕ್ಕಿಳಿದಿದ್ದಾರೆ. ಇಂತಹ ಕೆಟ್ಟ ಮನಸ್ಥಿತಿ ಇರುವ ವ್ಯಕ್ತಿಗೆ ಬಿಜೆಪಿ ಟಿಕೆಟ್ ನೀಡಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಎಎಪಿ ಬಿಧುರಿ ಹೇಳಿಕೆಯನ್ನು ಖಂಡಿಸಿದೆ.

“ಇದು ನಾಚಿಕೆಗೇಡಿನ ಹೇಳಿಕೆ, ಈ ವ್ಯಕ್ತಿ (ಬಿಜೆಪಿ ನಾಯಕ ರಮೇಶ್ ಬಿಧುರಿ) ಈ ರೀತಿ ಹೆಣ್ಣು ಮಕ್ಕಳನ್ನು ನಿಂದಿಸಿದ್ದಾರೆ ಎಂದು ತಿಳಿದ ನಂತರವೂ ಬಿಜೆಪಿ ಅವರಿಗೆ ಟಿಕೆಟ್ ನೀಡಿದೆ. ಹೀಗಿದ್ದಾಗ ಮಹಿಳೆಯರನ್ನು ಅವರು ಸುರಕ್ಷಿತವಾಗಿರಿಸುವುದು ಹೇಗೆ? ಯಾರು ನಂಬುತ್ತಾರೆ? ಗೆಲ್ಲದೆಯೇ ಹೀಗೆ ಮಾಡುತ್ತಾರೆ, ಗೆದ್ದರೆ ಇನ್ನೇನು ಮಾಡಬಹುದು” ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಪ್ರಶ್ನಿಸಿದರು.

ಇದನ್ನು ಓದಿದ್ದೀರಾ? ಲೋಕಸಭೆಯಲ್ಲಿ ಅಣ್ಣ-ತಂಗಿ ಅಬ್ಬರ; ಸಂಸದೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ

ಇನ್ನು ಬಿಧುರಿ ಮಾಧ್ಯಮವೊಂದರ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಈ ಹಿಂದೆ ಆರ್‌ಜೆಡಿ ನಾಯಕ ಬಿಹಾರದ ರಸ್ತೆಗಳನ್ನು ಹೇಮಾ ಮಾಲಿನಿ ಕೆನ್ನೆಯಂತೆ ನುಣುಪಾಗಿ ನಿರ್ಮಿಸುವುದಾಗಿ ಹೇಳಿದ್ದರು ಎನ್ನುವ ಮೂಲಕ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಇನ್ನು ಬಿಧುರಿ ತನ್ನ ವಿವಾದಾತ್ಮಕ ಹೇಳಿಕೆಗಳನ್ನು ಮತ್ತೆ ಮತ್ತೆ ಸಮರ್ಥಿಸಿಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. 2023ರಲ್ಲಿ ಬಿಧುರಿ ಲೋಕಸಭೆಯಲ್ಲಿ ಆಗಿನ ಬಿಎಸ್‌ಪಿ ಸಂಸದ ಡ್ಯಾನಿಶ್ ಅಲಿ ವಿರುದ್ಧ ಕೋಮುವಾದಿ ಟೀಕೆಗಳನ್ನು ಮಾಡಿದ್ದರು. ಡ್ಯಾನಿಶ್ ಅಲಿ ಅವರನ್ನು ಭಯೋತ್ಪಾದಕ ಎಂದು ಬಿಧುರಿ ಕರೆದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...