ಸ್ಮಾರ್ಟ್ ಮೀಟರ್ ಟೆಂಡರ್‌ನಲ್ಲಿ 15,500 ಕೋಟಿ ರೂ. ಅವ್ಯವಹಾರ: ಆರೋಪ

Date:

ರಾಜ್ಯಾದ್ಯಂತ ಮನೆಗಳ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್‌ ಮೀಟರ್‌ ಅಳವಡಿಸುವ ಟೆಂಡರ್‌ನಲ್ಲಿ ಸುಮಾರು 15,568 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಬಿಜೆಪಿ ನಾಯಕ, ಮಾಜಿ ಸಚಿವ ಡಾ. ಸಿ.ಎನ್‌ ಅಶ್ವತ್ಥನಾರಾಯಣ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಕೆಇಆರ್‌ಸಿ ನಿಯಮದಲ್ಲಿ ಸ್ಮಾರ್ಟ್‌ ಮೀಟರ್ ಅಳವಡಿಕೆ ಕಡ್ಡಾಯವಲ್ಲ. ಆದರೂ, ಎಲ್ಲ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್‌ ಮೀಟರ್ ಅಳವಡಿಸಲು ಇಂಧನ ಇಲಾಖೆ ಮುಂದಾಗಿದೆ. ಬೆಸ್ಕಾಂ ಮತ್ತು ರಾಜ್ಯದ ಇತರ ಎಸ್ಕಾಂಗಳು ಕೆಇಆರ್‌ಸಿ ನಿಯಮಗಳನ್ನು ಉಲ್ಲಂಘಿಸುತ್ತಿವೆ” ಎಂದು ಹೇಳಿದ್ದಾರೆ.

“ಟೆಂಡರ್‌ ಕರೆದಾಗ ಕೆಟಿಪಿಪಿ ಕಾಯ್ದೆಯಡಿ ಬಿಡ್ ಸಾಮರ್ಥ್ಯವನ್ನು ತಿಳಿಸಿಲ್ಲ. ಬಿಡ್‌ ಸಾಮರ್ಥ್ಯವು 6,800 ಕೋಟಿ ರೂ. ಇರಬೇಕಿತ್ತು. ವ್ಯವಹಾರವು 1,920 ಕೋಟಿ ರೂ. ಇರಬೇಕಿತ್ತು. ಆದರೆ, ಬರೀ 107 ಕೋಟಿ ರೂ. ಎಂದು ಉಲ್ಲೇಖಿಸಲಾಗಿದೆ. ಆ ಬಳಿಕ, ಅಂದಾಜು ವೆಚ್ಚ 571 ಕೋಟಿ ರೂ. ಎಂದು ತಿದ್ದಲಾಗಿದೆ. ಟೆಂಟರ್‌ನ ಒಟ್ಟು ಮೊತ್ತ ತಿಳಿಸಿದೆ, ಬಿಡ್‌ ಕರೆಯಲಾಗಿದೆ. ಬಿಡ್ಡಿಂಗ್ ಸಾಮರ್ಥ್ಯವನ್ನು ಉಲ್ಲೇಖಿಸದೇ ಇರುವುದೇ ಆರಂಭದ ಹಗರಣ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ಮಲ್ಪೆ ಮೀನು ಪೇಟೆ ಪ್ರಕರಣ | ಕರಾವಳಿಯ (ಅ)ನ್ಯಾಯ ನಿರ್ಣಯದ ನಮೂನೆ

“ಯಾವುದೇ ಗುತ್ತಿಗೆಯನ್ನು ಕಪ್ಪುಪಟ್ಟಿಗೆ ಸೇರಿದ ಕಂಪನಿಗೆ ಕೊಡುವಂತಿಲ್ಲ. ಆದರೆ, ಉತ್ತರ ಪ್ರದೇಶದಲ್ಲಿ ಕಪ್ಪುಪಟ್ಟಿಗೆ ಸೇರಿರುವ ಬಿಸಿಐಟಿಎಸ್‌ ಕಂಪನಿಯನ್ನು ಇಲ್ಲಿ ಬಿಡ್‌ ಮಾಡಲು ಪರಿಗಣಿಸಲಾಗಿದೆ. ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ, ಬೃಹತ್ ಪ್ರಮಾಣದ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಬಿಡ್‌ ಮಾಡುವ ಕಂಪನಿಗೆ 1 ಲಕ್ಷ ಸ್ಮಾರ್ಟ್ ಮೀಟರ್ ಅಳವಡಿಸಿದ ಅನುಭವ ಇರಬೇಕು. ಆದರೆ, 10 ಲಕ್ಷ ಸಾಮಾನ್ಯ ಮೀಟರ್ ಅಳವಡಿಕೆ ಮಾಡಿರುವುದನ್ನೇ ಮಾನದಂಡ ಮಾಡಿಕೊಳ್ಳಲಾಗಿದೆ” ಎಂದು ದೂರಿದ್ದಾರೆ.

“ಬಿಡ್‌ ಕರೆಯುವಲ್ಲಿ ಕೆಟಿಪಿಪಿ ಕಾಯ್ದೆ ಮತ್ತು ಕೇಂದ್ರ ಸರ್ಕಾರದ ನಿಯಮಾವಳಿಗಳನ್ನು ಕಡೆಗಣಿಸಲಾಗಿದೆ. ಸ್ಮಾರ್ಟ್ ಮೀಟರ್ ತಯಾರಿಸದ, ಅಳವಡಿಸದ, ಕೇವಲ ಡಿಜಿಟಲ್ ಮೀಟರ್ ಅಳವಡಿಸಿರುವ ಕಂಪನಿಯನ್ನು ಬಿಡ್‌ಗೆ ಪರಿಗಣಿಸಲಾಗಿದೆ. ಪ್ರಿ-ಬಿಡ್‍ನಲ್ಲಿ ರಾಜಶ್ರೀಯನ್ನು ಯಾಕೆ ಪರಿಣಗಿಣಿಸಿಲ್ಲ. ಅರ್ಹರನ್ನು ಹೊರಗಿಟ್ಟು, ಫೋನ್ ತಯಾರಕರನ್ನು ಆಯ್ಕೆ ಮಾಡಲಾಗಿದೆ” ಎಂದು ಆರೋಪಿಸಿದ್ದಾರೆ.

“ಕಾಂಗ್ರೆಸ್‌ ಅಧಿಕಾರದಲ್ಲಿರುವ ಹಿಮಾಚಲ ಪ್ರದೇಶ ಮತ್ತು ತೆಲಂಗಾಣ ಹಾಗೂ ಪಕ್ಕದ ಕೇರಳದಲ್ಲಿ ಕಡಿಮೆ ಮೊತ್ತದಲ್ಲಿ ಸ್ಮಾರ್ಟ್‌ ಮೀಟರ್ ಅಳವಡಿಸಲಾಗಿದೆ. ಈ ರಾಜ್ಯಗಳಲ್ಲಿ ಸರಿಸುಮಾರು ಪ್ರತಿ ಮೀಟರ್‌ಗೆ 7,740 ರೂ. ವೆಚ್ಚ ಮಾಡಲಾಗಿದೆ. ಆದರೆ, ಕರ್ನಾಟಕದಲ್ಲಿ ಪ್ರತಿ ಮೀಟರ್‌ಗೆ 17,000 ರೂ. ನಿಗದಿಮಾಡಲಾಗಿದೆ” ಎಂದು ದೂರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...