‘ಜಾತಿಗಣತಿಯಿಂದ ದೇಶದ ಏಕತೆಗೆ ಅಪಾಯ’ ಎಂದ ಆರ್‌ಎಸ್‌ಎಸ್‌!

Date:

2024ರ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಜಾತಿಗಣತಿಯ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಈ ನಡುವೆ ಜಾತಿಗಣತಿಯ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಆರ್‌ಎಸ್‌ಎಸ್‌, “ಜಾತಿಗಣತಿಯಿಂದ ದೇಶದ ಏಕತೆಗೆ ಅಪಾಯವಿದೆ” ಎಂದು ತಿಳಿಸಿದೆ.

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿದರ್ಭ ಸಹ ಸಂಘಚಾಲಕ ಶ್ರೀಧರ ಗಾಡ್ಗೆ, “ಜಾತಿ ಗಣತಿಯಿಂದ ಏನನ್ನೂ ಸಾಧಿಸಲಾಗದು. ಅದರ ಅವಶ್ಯಕತೆಯೂ ಇಲ್ಲ. ಅದರಿಂದ ಯಾವ ಲಾಭವೂ ಇಲ್ಲ. ನಮಗೆ ಅದರಿಂದ ಹಾನಿ ಮಾತ್ರ ಕಾಣುತ್ತಿದೆ” ಎಂದು ಹೇಳಿದ್ದಾರೆ.

“ಜಾತಿ ಆಧಾರಿತ ಜನಗಣತಿಯಿಂದ ಒಂದು ನಿರ್ದಿಷ್ಟ ಜಾತಿಯ ಜನಸಂಖ್ಯೆಯ ದತ್ತಾಂಶ ಒದಗಿಸಬಹುದು. ಇಂತಹ ಕಸರತ್ತು, ರಾಜಕೀಯವಾಗಿ ಕೆಲವು ವ್ಯಕ್ತಿಗಳಿಗೆ ಮಾತ್ರ ಲಾಭವಾಗಬಹುದು. ಆದರೆ, ಇದು ಸಾಮಾಜಿಕವಾಗಿ ಮತ್ತು ರಾಷ್ಟ್ರೀಯ ಏಕತೆಯ ದೃಷ್ಟಿಯಿಂದ ಒಳಿತಲ್ಲ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮಗೆ ಜಾತಿ ಗಣತಿಯ ಅವಶ್ಯಕತೆ ಇಲ್ಲವೆನಿಸುತ್ತದೆ. ಇದಕ್ಕೆ ಬೇರೆ ಕಾರಣವೇನಿಲ್ಲ, ಜಾತಿ ಆಧಾರಿತ ಸಮೀಕ್ಷೆಯಿಂದ ನಾವು ಏನು ಸಾಧಿಸಬಹುದು? ಇದು ತಪ್ಪು. ಅಸಮಾನತೆ, ದ್ವೇಷ, ಜಗಳ ಇರಬಾರದು ಎಂಬುದು ನಮ್ಮ ಸ್ಪಷ್ಟ ನಿಲುವು” ಎಂದು ಶ್ರೀಧರ ಗಾಡ್ಗೆ ತಿಳಿಸಿದರು.

ಅಮಿತ್ ಶಾ ಹೇಳಿಕೆಯನ್ನು ಪ್ರಸ್ತಾಪಿಸಿದ ಗಾಡ್ಗೆ, “ರಾಜಕೀಯ ಪಕ್ಷಗಳು ತಮ್ಮದೇ ಆದ ನಿಲವು ಹೊಂದಿರಬಹುದು. ಆದರೆ ಆರ್‍‌ಎಸ್‌ಎಸ್‌ ಜಾತಿ ಆಧರಿತ ಗಣತಿಯನ್ನು ಖಂಡತುಂಡವಾಗಿ ವಿರೋಧಿಸುತ್ತದೆ. ಆರ್‍‌ಎಸ್‌ಎಸ್‌ ಸಾಮಾಜಿಕ ಸಮಾನತೆಯನ್ನು ಪ್ರೋತ್ಸಾಹಿಸುತ್ತಾ ಬಂದಿದೆ. ನಮ್ಮ ದೇಶದಲ್ಲಿ ಜಾತಿ ಹೆಸರಿನಲ್ಲಿ ಒಡಕು ಮೂಡಿಸಲಾಗುತ್ತದೆ. ಸಮಾಜದಲ್ಲಿ ಜಾತಿ ಎನ್ನುವುದು ಅಸಮಾನತೆಯ ಮೂಲವಾದರೆ, ಜಾತಿಗಣತಿಯಂಥ ಕ್ರಮಗಳಿಂದ ಇದು ಮತ್ತಷ್ಟು ಉಲ್ಬಣಗೊಳ್ಳಲಿದೆ ಎನ್ನುವುದು ನಮ್ಮ ಸ್ಪಷ್ಟ ನಿಲುವು” ಎಂದು ಆರ್‌ಎಸ್‌ಎಸ್‌ ಮುಖಂಡ ಶ್ರೀಧರ ಗಾಡ್ಗೆ ತಿಳಿಸಿದ್ದಾರೆ.

ಮಹಾರಾಷ್ಟ್ರದ ಬಿಜೆಪಿ ಮತ್ತು ಶಿವಸೇನೆ ಶಾಸಕರು ಆರ್‌ಎಸ್‌ಎಸ್‌ ಕೇಂದ್ರ ಕಚೇರಿಗೆ ಮಂಗಳವಾರ ಭೇಟಿ ನೀಡಿ, ಸಭೆ ನಡೆಸಿದ ಬಳಿಕ ಈ ಹೇಳಿಕೆಯನ್ನು ಶ್ರೀಧರ ಗಾಡ್ಗೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...