ಆರ್‌ಎಸ್‌ಎಸ್‌-ಬಿಜೆಪಿ ವಿಷದಂತೆ, ವಿಪಕ್ಷಗಳು ಒಗ್ಗಟ್ಟಾಗಿ ಚುನಾವಣೆ ಎದುರಿಸಬೇಕು: ಮಲ್ಲಿಕಾರ್ಜುನ ಖರ್ಗೆ

Date:

“ಆರ್‌ಎಸ್‌ಎಸ್‌-ಬಿಜೆಪಿ ದೇಶವನ್ನು ನಾಶ ಮಾಡಿರುವ ‘ವಿಷ’. ಲೋಕಸಭೆ ಚುನಾವಣೆಯಲ್ಲಿ ಆಡಳಿತ ಪಕ್ಷವನ್ನು ಸೋಲಿಸಲು ಎಲ್ಲ ವಿರೋಧ ಪಕ್ಷಗಳು ಒಂದಾಗಬೇಕು” ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು.

ದೆಹಲಿಯಲ್ಲಿ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಒಕ್ಕೂಟದ ‘ಪ್ರಜಾಪ್ರಭುತ್ವ ಉಳಿಸಿ’ ರ‍್ಯಾಲಿಯಲ್ಲಿ ಮಾತನಾಡಿದ ಅವರು, “ಈ ಚುನಾವಣೆ ಪ್ರಜಾಪ್ರಭುತ್ವ, ದೇಶ ಮತ್ತು ಸಂವಿಧಾನವನ್ನು ಉಳಿಸುವುಕ್ಕಾಗಿ” ಎಂದು ಹೇಳಿದರು.

“ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಬಂಧನದ ನಂತರ ‘ಪ್ರಜಾಪ್ರಭುತ್ವಕ್ಕೆ ಬೆದರಿಕೆ’ ಇರುವುದನ್ನು ಎತ್ತಿ ತೋರಿಸಲು ಈ ರ‍್ಯಾಲಿ ಪ್ರಯತ್ನಿಸುತ್ತದೆ. ಕೇಜ್ರಿವಾಲ್ ಮತ್ತು ಸೋರೆನ್ ಅವರ ಪತ್ನಿಯರು ಕೂಡ ರ‍್ಯಾಲಿಯಲ್ಲಿ ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?   ನಿರಂಕುಶಾಧಿಕಾರದತ್ತ ಸಾಗುತ್ತಿದೆ ಭಾರತ; ‘ಇಂಡಿಯಾ&’ ಮೈತ್ರಿಕೂಟದ ರ್‍ಯಾಲಿಯಲ್ಲಿ ಉದ್ಧವ್ ಠಾಕ್ರೆ

“ನಾವು ಒಂದಾಗಬೇಕು, ನಾವು ಒಂದಾದರೆ ಮಾತ್ರ ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯವಾಗುತ್ತದೆ. ನಾವು ಪರಸ್ಪರ ದಾಳಿ ಮತ್ತು ಹೋರಾಟವನ್ನು ಮುಂದುವರೆಸಿದರೆ ನಾವು ಯಶಸ್ವಿಯಾಗಲು ಸಾಧ್ಯವಾಗದು. ಈ ಚುನಾವಣೆ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವುದಕ್ಕಾಗಿ ಮತ್ತು ನಾವು ಒಗ್ಗಟ್ಟಿನಿಂದ ಹೋರಾಡಬೇಕು” ಎಂದು ಹೇಳಿದರು.

ಇನ್ನು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ ಅವರು, “ಈ ಚುನಾವಣೆಯಲ್ಲಿ ಯಾವುದೇ ಲೆವೆಲ್-ಪ್ಲೇಯಿಂಗ್ ಫೀಲ್ಡ್ (ಎಲ್ಲ ಸ್ಪರ್ಧಿಗಳು ಒಂದೇ ನಿಯಮ, ಅವಕಾಶ) ಇಲ್ಲ. ಪ್ರಧಾನಿ ಮೋದಿ ನೆಲವನ್ನು ಅಗೆದು ಬಳಿಕ ಪ್ರತಿಪಕ್ಷಗಳನ್ನು ಅಗೆದ ನೆಲದಲ್ಲಿ ಕ್ರಿಕೆಟ್ ಆಡಲು ಹೇಳುತ್ತಿದ್ದಾರೆ. ಕಾಂಗ್ರೆಸ್‌ನ ಹಣವನ್ನು ಈಗಾಗಲೇ ಕದಿಯಲಾಗಿದ್ದು, ಈ ಚುನಾವಣೆಯು ನ್ಯಾಯಯುತವಾಗಿಲ್ಲ ಎಂದು ನಾನು ಈಗಾಗಲೇ ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರಿಗೆ ಹೇಳಿದ್ದೇನೆ” ಎಂದರು.

“ಬಿಜೆಪಿ ಮತ್ತು ಆರೆಸ್ಸೆಸ್ ವಿಷದಂತಿವೆ, ಅದರ ರುಚಿ ನೋಡಬೇಡಿ. ಅವರು ದೇಶವನ್ನು ನಾಶಪಡಿಸಿದ್ದಾರೆ ಮತ್ತು ಅದನ್ನು ಇನ್ನಷ್ಟು ನಾಶ ಮಾಡಲು ಬಿಡಬಾರದು. ಮೋದಿ ಮತ್ತು ಅವರ ಸಿದ್ಧಾಂತವನ್ನು ತೊಲಗಿಸುವವರೆಗೆ ದೇಶ ಅಭಿವೃದ್ಧಿಯಾಗಲು ಸಾಧ್ಯವಿಲ್ಲ” ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...