ಕೇರಳ | ದೇವಸ್ಥಾನದಲ್ಲಿ ಆಪರೇಷನ್ ಸಿಂಧೂರ ಬರವಣಿಗೆ, ಆರ್‌ಎಸ್‌ಎಸ್‌ ಧ್ವಜವಿರುವ ರಂಗೋಲಿ: ಎಫ್‌ಐಆರ್ ದಾಖಲು

Date:

ಕೇರಳದ ಕೊಲ್ಲಂನ ಪಾರ್ಥಸಾರಥಿ ದೇವಸ್ಥಾನದ ಹೊರಗೆ ಆರ್‌ಎಸ್‌ಎಸ್ ಧ್ವಜ ಮತ್ತು ಆಪರೇಷನ್ ಸಿಂಧೂರ ಎಂದು ಬರೆದಿರುವ ಹೂವಿನ ರಂಗೋಲಿ(ಪೂಕ್ಕಲಂ) ಕಾಣಿಸಿಕೊಂಡಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಸದ್ಯ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು ಬಿಜೆಪಿ ನಾಯಕರು ಇದು ಆಪರೇಷನ್ ಸಿಂಧೂರ ಬರವಣಿಗೆಯ ರಂಗೋಲಿಗೆ ಪ್ರಕರಣ ದಾಖಲಿಸಿರುವುದು ದೇಶದ್ರೋಹ ಎಂದು ರಾಜಕೀಯಕ್ಕಿಳಿದಿದ್ದಾರೆ. ಆದರೆ ಎಫ್‌ಐಆರ್ ದಾಖಲಿಸಿರುವುದು ರಂಗೋಲಿಯಲ್ಲಿ ಆರ್‌ಎಸ್‌ಎಸ್‌ ಧ್ವಜ ಮಾಡಿರುವುದಕ್ಕೆ ಎಂದು ಪೊಲೀಸರು ಈಗಾಗಲೇ ಸ್ಪಷ್ಟಣೆಯನ್ನು ನೀಡಿದ್ದಾರೆ.

ಎಫ್‌ಐಆರ್ ದಾಖಲಿಸಿರುವುದರ ವಿರುದ್ಧ ಕೇರಳ ಬಿಜೆಪಿ ಮುಖ್ಯಸ್ಥ ರಾಜೀವ್ ಚಂದ್ರಶೇಖರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಇದು ನಾಚಿಕೆಗೇಡಿನ ಮತ್ತು ದೇಶದ್ರೋಹದ ಕೃತ್ಯ’ ಎಂದು ರಾಜೀವ್ ಹೇಳಿದ್ದಾರೆ. ಆದರೆ ಎಫ್‌ಐಆರ್ ದಾಖಲಿಸಿರುವುದು ಆಪರೇಷನ್ ಸಿಂಧೂರ ಎಂಬ ರಂಗೋಲಿ ಸಂಬಂಧವಲ್ಲ, ನಿರ್ದಿಷ್ಟವಾಗಿ ಆರ್‌ಎಸ್‌ಎಸ್ ಧ್ವಜದ ಬಳಕೆ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಣೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಬಿಜೆಪಿ ಪ್ರಕಾರ ‘ಆಪರೇಷನ್ ಸಿಂಧೂರ’ ಯಶಸ್ವಿ: ಅಭಿಯಾನ ಆರಂಭಿಸಿದ ಸ್ತ್ರೀದ್ವೇಷಿಗಳು!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇರಳದಲ್ಲಿ ಓಣಂ ಸಂದರ್ಭ ಹೂವಿನಿಂದಲೇ ರಂಗೋಲಿ ಮಾಡಲಾಗುತ್ತದೆ. ಈ ಪ್ರದೇಶದಲ್ಲಿ ಈ ಹಿಂದೆ ರಾಜಕೀಯವಾಗಿ ಉದ್ವಿಗ್ನತೆ ಕಂಡುಬಂದಿದ್ದ ಕಾರಣ ಈ ಬಾರಿ ಪೂಕ್ಕಳಂನಲ್ಲಿ ಯಾವುದೇ ರಾಜಕೀಯ ಧ್ವಜಗಳು ಅಥವಾ ಚಿಹ್ನೆಗಳನ್ನು ಪ್ರದರ್ಶಿಸಬಾರದು ಎಂದು ಸಿಪಿಐ (ಎಂ) ಮತ್ತು ಬಿಜೆಪಿ ಕಾರ್ಯಕರ್ತರಿಗೆ ಈ ಹಿಂದೆಯೇ ನಿರ್ದೇಶನ ನೀಡಲಾಗಿತ್ತು. ಈ ಷರತ್ತಿಗೆ ಎರಡೂ ಕಡೆಯವರು ಒಪ್ಪಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಷರತ್ತಿಗೆ ಒಪ್ಪಿಕೊಂಡಿದ್ದರೂ ಹಬ್ಬದ ಸಮಯದಲ್ಲಿ ಆರ್‌ಎಸ್‌ಎಸ್ ಧ್ವಜದ ರಂಗೋಲಿ ಬಿಡಿಸಲಾಗಿದೆ. ಒಪ್ಪಂದವನ್ನು ಉಲ್ಲಂಘಿಸಿ ಉದ್ವಿಗ್ನತೆಗೆ ಕಾರಣ ಉಂಟು ಮಾಡಿದ ಕಾರಣಕ್ಕಾಗಿ 27 ಆರ್‌ಎಸ್‌ಎಸ್‌ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆದರೆ ಬಿಜೆಪಿ ಮುಖಂಡರು ಈ ವಿಚಾರವನ್ನು ತಿರುಚುತ್ತಿದ್ದು ಆಪರೇಷನ್ ಸಿಂಧೂರ ಎಂದು ರಂಗೋಲಿ ಮಾಡಿದ್ದಕ್ಕಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸುಳ್ಳು ಮಾಹಿತಿಯನ್ನು ಹರಡುತ್ತಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಜೀವ್ ಚಂದ್ರಶೇಖರ್, “ಆಪರೇಷನ್ ಸಿಂಧೂರ ನಮ್ಮ ಹೆಮ್ಮೆ. ಇದು ಭಾರತದ ಸಶಸ್ತ್ರ ಪಡೆಗಳ ಶೌರ್ಯ ಮತ್ತು ಧೈರ್ಯದ ಸಂಕೇತ. ಎಫ್‌ಐಆರ್ ದಾಖಲಿಸಿ ಕೇರಳ ಪೊಲೀಸರು ಈ ದಾಳಿಯಲ್ಲಿ ಬಲಿಯಾದ 26 ಮಂದಿಗೆ ಮತ್ತು ಅವರ ಕುಟುಂಬಕ್ಕೆ, ಪ್ರತಿಯೊಬ್ಬ ಯೋಧರಿಗೂ ಅವಮಾನ ಮಾಡಿದ್ದಾರೆ” ಎಂದು ದೂರಿದ್ದಾರೆ.

“ಕೇರಳವು ಜಮಾತ್-ಇ-ಇಸ್ಲಾಮಿ ಅಥವಾ ಪಾಕಿಸ್ತಾನದಿಂದ ಆಳಲ್ಪಡುವ ಭೂಮಿಯಲ್ಲ ಮತ್ತು ಎಂದಿಗೂ ಆಗುವುದಿಲ್ಲ. ಇದು ಭಾರತ ಎಂಬುದನ್ನು ಕೇರಳ ಪೊಲೀಸರು ಮರೆಯಬಾರದು. ಅವರಿಗೆ ಮತ್ತು ಮುಖ್ಯಮಂತ್ರಿ/ಗೃಹ ಸಚಿವ ಪಿಣರಾಯಿ ವಿಜಯನ್ ಜಿ ಅವರಿಗೆ, ಈ ನಾಚಿಕೆಗೇಡಿನ ಮತ್ತು ದೇಶದ್ರೋಹದ ಎಫ್‌ಐಆರ್ ಅನ್ನು ಹಿಂತೆಗೆದುಕೊಳ್ಳಿ ಎಂದು ನಾನು ಹೇಳುತ್ತೇನೆ. ಈಗಲೇ!” ಅವರು ಹೇಳಿದರು.

ಅಧಿಕಾರಿಗಳು ಎಫ್‌ಐಆರ್ ಬಗ್ಗೆ ಸ್ಪಷ್ಟಣೆ ನೀಡಿದರೂ ತಪ್ಪು ಮಾಹಿತಿಯನ್ನು ಬಿಜೆಪಿ ನಾಯಕರುಗಳು ಹಬ್ಬುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...