RSS ಭಾರತದ ತಾಲಿಬಾನ್: ಬಿ.ಕೆ ಹರಿಪ್ರಸಾದ್

Date:

ಆರ್‌ಎಸ್‌ಎಸ್‌ – ಭಾರತದ ತಾಲಿಬಾನ್‌ ಇದ್ದಂತೆ. ಅದು ಭಾರತದ ಕಾನೂನಿನ ಅಡಿಯಲ್ಲಿ ನೋಂದಣಿಯಾಗಿಲ್ಲದ ಸಂಘಟನೆ. ನೋಂದಣಿ ಮಾಡಿಕೊಳ್ಳದೆ, ಸರ್ಕಾರದ ಅನುಮತಿ ಪಡೆಯದೆ ಸರ್ಕಾರಿ ಜಾಗಗಳಲ್ಲಿ ತಮ್ಮ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ.

ಆರ್‌ಎಸ್‌ಎಸ್‌ನ ಶಾಖೆ ಚಟುವಟಿಕೆಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, “ಸರ್ಕಾರಿ ಜಾಗಗಳಲ್ಲಿ ಯಾವುದೇ ಕಾರ್ಯಕ್ರಮ ನಡೆಸಿದರೂ, ಮೊದಲು ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯ. ಆದರೆ, ಆರ್‌ಎಸ್‌ಎಸ್‌ ತನ್ನ ಕಾರ್ಯಕ್ರಮಗಳಿಗೆ ಅನುಮತಿ ಪಡೆಯದೆ ಸರ್ಕಾರಿ ಜಾಗಗಳನ್ನು ಬಳಸುತ್ತಿದೆ. ಇದು ಕಾನೂನುಬಾಹಿರ” ಎಂದಿದ್ದಾರೆ.

“ಕರ್ನಾಟಕದಲ್ಲಿ ಆರ್‌ಎಸ್‌ಎಸ್‌ ನಿರಂತರವಾಗಿ ಶಾಖೆಗಳನ್ನು ನಡೆಸುತ್ತಿದೆ. ಕಾರ್ಯಕ್ರಮಗಳನ್ನು ಮಾಡುತ್ತಿದೆ. ಆದರೆ, ಕಾರ್ಯಕ್ರಮಗಳಿಗೆ ಯಾವುದೇ ಅಧಿಕೃತ ಅನುಮತಿ ಪಡೆಯದೆ ಸರ್ಕಾರಿ ಜಾಗಗಳನ್ನು ಬಳಸುತ್ತಿದೆ. ನಾವು ಹೇಳುವುದಿಷ್ಟೇ, ಅವರು ತಮ್ಮ ಸಂಸ್ಥೆ ರಿಜಿಸ್ಟರ್ ಆಗಿರುವುದನ್ನು ತೋರಿಸಲಿ” ಎಂದು ಕೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಬೂಟು- ಅಸ್ತವ್ಯಸ್ತಗೊಂಡ ಭಾರತದ ಸಂಕೇತ

“ಪ್ಯಾಲೇಸ್ತೀನ್ ಪರವಾಗಿ ಪ್ರತಿಭಟನೆ ನಡೆಸುವ ಜನರನ್ನು ಪೊಲೀಸರಿಂದ ತಕ್ಷಣವೇ ಬಂಧಿಸಲಾಗುತ್ತದೆ. ಆದರೆ, ಆರ್‌ಎಸ್‌ಎಸ್ ಶಾಖೆಗಳನ್ನು ಸರ್ಕಾರಿ ಮೈದಾನಗಳಲ್ಲಿ ನಡೆಸಲು ಪೊಲೀಸರು ಅನುಮತಿ ನೀಡುತ್ತಾರೆ. ಈ ಧೋರಣೆಯನ್ನೇ ನಾವು ಪ್ರಶ್ನಿಸುತ್ತಿದ್ದೇವೆ” ಎಂದಿದ್ದಾರೆ.

“ತಮಿಳುನಾಡಿನಲ್ಲಿ ಶಾಲಾ-ಕಾಲೇಜುಗಳಲ್ಲಿ ತನ್ನ ಕಾರ್ಯಕ್ರಮಗಳನ್ನು ನಡೆಸಲು ಹೋಗಿದ್ದ ಆರ್‌ಎಸ್‌ಎಸ್‌ ಸದಸ್ಯರ ಮೇಲೆ ಸರ್ಕಾರ ಕ್ರಮ ಕೈಗೊಂಡಿದೆ. ಅವರನ್ನು ಬಂಧಿಸಿ ಪ್ರಕರಣ ದಾಖಲಿಸಿದೆ. ಅದೇ ರೀತಿಯಲ್ಲಿ ಕರ್ನಾಟಕದಲ್ಲೂ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...