ಪಶ್ಚಿಮ ಬಂಗಾಳ | ಮಕ್ಕಳ ಕಳ್ಳರೆಂದು ಮೂವರು ಸಾಧುಗಳನ್ನು ನಗ್ನಗೊಳಿಸಿ ಹಲ್ಲೆ ನಡೆಸಿದ ಸಾರ್ವಜನಿಕರು

Date:

ಮಕರ ಸಂಕ್ರಾಂತಿಯ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಗಂಗಾಸಾಗರ ಮೇಳಕ್ಕೆ ತೆರಳುತ್ತಿದ್ದ ಉತ್ತರ ಪ್ರದೇಶದ ಮೂವರು ಸಾಧುಗಳನ್ನು ಗುಂಪೊಂದು ಗುರುವಾರ ಸಂಜೆ ಥಳಿಸಿದೆ.

ಘಟನೆಯು ಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ನಡೆದಿದ್ದು ಮಕ್ಕಳ ಕಳ್ಳರೆಂದು ಶಂಕಿಸಿ ಗುಂಪೊಂದು ಸಾಧುಗಳ ಮೇಲೆ ಹಲ್ಲೆ ನಡೆಸಿದೆ ಎನ್ನಲಾಗಿದೆ. ನಗ್ನಗೊಳಿಸಿ ಸಾರ್ವಜನಿಕವಾಗಿಯೇ ಹಲ್ಲೆ ನಡೆಸಿರುವ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತರ ಪ್ರದೇಶದ ಬರೇಲಿ ನಿವಾಸಿಗಳಾದ ವೃದ್ಧ ಸಂತ ಮತ್ತು ಇಬ್ಬರು ಯುವ ಸಂತರು ಬಾಡಿಗೆ ಕಾರಿನಲ್ಲಿ ಗಂಗಾಸಾಗರಕ್ಕೆ ಹೋಗುತ್ತಿದ್ದರು. ಬಂಕೂರದಿಂದ ಕಾಶಿಪುರ-ಬಂಕೂರ ರಸ್ತೆ ಮೂಲಕ ಗಂಗಾಸಾಗರ ಕಡೆಗೆ ಹೋಗಬೇಕಿತ್ತು. ಕಾಶಿಪುರದ ಗೌರಂಗ್ಡಿಹ್ ಎಂಬಲ್ಲಿ ಸಂತರಿಗೆ ಕೆಲವರು ಸ್ವಲ್ಪ ಹಣವನ್ನು ದಾನ ಮಾಡಿದ್ದಾರೆ. ಅದೇ ರೀತಿ ಮುಂದಿರುವ ಇಟ್ಟಿಗೆ ಕಾರ್ಖಾನೆ ಮಾಲೀಕರು ಹೆಚ್ಚಿನ ದಾನ ಧರ್ಮವನ್ನು ಮಾಡುತ್ತಾರೆ ಅಲ್ಲಿಗೆ ಹೋಗಿ ಎಂದು ಹೇಳಿದ್ದಾರೆ. ಆದರೆ ವಿಳಾಸ ಸರಿಯಾಗಿ ಗೊತ್ತಿರದ ಕಾರಣ ರಸ್ತೆಯಲ್ಲಿ ಹೋಗುತಿದ್ದ ಬಾಲಕಿಯರಲ್ಲಿ ಇಟ್ಟಿಗೆ ಕಾರ್ಖಾನೆ ಎಲ್ಲಿ ಎಂದು ಹಿಂದಿಯಲ್ಲಿ ಕೇಳಿದ್ದಾರೆ. ಆದರೆ ಅಲ್ಲಿಯ ಜನ ಮಕ್ಕಳ ಕಳ್ಳರೆಂದು ಅನುಮಾನ ಪಟ್ಟು ಗ್ರಾಮದ ಜನರನ್ನು ಒಟ್ಟು ಮಾಡಿದ್ದಾರೆ.

ವರದಿಗಳ ಪ್ರಕಾರ, ದಾರಿ ಮಧ್ಯೆ ಸಾಧುಗಳಿಗೆ ಹೇಗೆ ಹೋಗಬೇಕು ಅಂತ ಗೊಂದಲ ಆಗಿದೆ. ಅದಕ್ಕೆ ರಸ್ತೆಯ ಪಕ್ಕದಲ್ಲಿ ಆಡುತ್ತಿದ್ದ ಮೂವರು ಹೆಣ್ಮಕ್ಕಳ ಬಳಿ ಕೇಳಿದ್ದಾರೆ. ಆದರೆ ಬಾಲಕಿಯರು ಸಾಧುಗಳನ್ನು ನೋಡಿ ಹೆದರಿ, ಕಣ್ಣೀರು ಇಡುತ್ತ ಓಡಿ ಹೋಗಿದ್ದಾರೆ. ಇದರಿಂದ ಸ್ಥಳೀಯರಿಗೆ ಅನುಮಾನ ಬಂದಿದೆ. ಈ ವೇಳೆ ಗ್ರಾಮಸ್ಥರು ಸಾಧುಗಳನ್ನು ಮಕ್ಕಳ ಕಳ್ಳರೆಂದು ಶಂಕಿಸಿ ಸಾಧುಗಳನ್ನು ಕಾಳಿ ದೇವಸ್ಥಾನದ ಬಳಿ ಕರೆದುಕೊಂಡು ಹೋಗಿ ಥಳಿಸಿದ್ದಾರೆ. ಅಲ್ಲದೆ ವಾಹನವನ್ನೂ ಧ್ವಂಸಗೊಳಿಸಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ನೀಡಿರುವ ಪುರುಲಿಯಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವಿಜಿತ್ ಬ್ಯಾನರ್ಜಿ, ”ಮೂವರು ಸಂತರು ವಾಹನದಲ್ಲಿ ಹೋಗುತ್ತಿದ್ದರು. ಗೌರಂಗ್ಡಿಹ್ ಬಳಿ ಸ್ಥಳೀಯ ಮೂವರು ಹುಡುಗಿಯರು ಕಾಳಿ ಮಂದಿರದ ಬಳಿ ಪೂಜೆಗೆಂದು ತೆರಳುತ್ತಿದ್ದಾಗ ಅವರ ಬಳಿ ಕಾರು ನಿಲ್ಲಿಸಿದ ಸಾಧುಗಳು ಏನನ್ನೋ ಕೇಳಿದರು. ಭಾಷಾ ಸಮಸ್ಯೆಯಿಂದ ಅಲ್ಲಿ ತಪ್ಪು ಕಲ್ಪನೆ ಉಂಟಾಗಿದೆ. ಸಾಧುಗಳು ನಮ್ಮನ್ನು ಹಿಂಬಾಲಿಸುತ್ತಿದ್ದಾರೆ ಎಂದು ಭಾವಿಸಿದ ಹುಡುಗಿಯರು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರು ಬಂದು ಸಾಧುಗಳನ್ನು ದುರ್ಗಾ ಮಂದಿರದ ಬಳಿ ಕರೆದೊಯ್ದು ಹಲ್ಲೆ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅನ್ನಪೂರ್ಣಿ ‘ನಿಷೇಧ’- ಧರ್ಮಗಳ ನಡುವೆ ಬೆಂಕಿ ಇಟ್ಟು ಬೇಳೆ ಬೇಯಿಸುವ ಕೃತ್ಯ

ಮಾಹಿತಿ ದೊರೆತ ಕೂಡಲೇ ಸ್ಥಳಕ್ಕೆ ಪೊಲೀಸರು ತೆರಳಿ, ಸಾಧುಗಳನ್ನು ರಕ್ಷಿಸಿದ್ದಾರೆ. ಹಲ್ಲೆಗೊಳಗಾದ ಸಾಧುಗಳು ನೀಡಿದ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಲಾಗಿದೆ. ಇದುವರೆಗೆ 12 ಮಂದಿಯನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಹನ್ನೆರಡು ಮಂದಿಯನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ವದಂತಿ‌ಹಬ್ಬಿ ಕ್ರೋಧಿತ ಗುಂಪಿನಿಂದ ಹಲ್ಲೆ ನಡೆದಿದೆ. ಘಟನೆಯನ್ನು ಬಿಜೆಪಿ ನಾಯಕರು ಖಂಡಿಸಿದ್ದಾರೆ.

“ಮಮತಾ ಬ್ಯಾನರ್ಜಿ ಅಧಿಕಾರದಲ್ಲಿರುವ ರಾಜ್ಯದಲ್ಲಿ ಹಿಂದೂಗಳಿಗೆ ಪ್ರಾಣಾಪಾಯವಿದೆ. ವ್ಯವಸ್ಥಿತವಾಗಿ ಈ ಕೃತ್ಯ ನಡೆಸಲಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಇಂತಹ ಘಟನೆಗಳು ಮರುಕಳಿಸುತ್ತಲೇ ಇದೆ. ಹಾಗಾಗಿ, ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಿ” ಎಂದು ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ಹೊರಹಾಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...