ಮಂಡ್ಯ | ಕೇಸರಿ ಧ್ವಜ ವಿವಾದ: ಗ್ರಾಮ ಪಂ. ಸರ್ಕಾರಿ ಜಾಗದಲ್ಲಿ ರಾಷ್ಟ್ರಧ್ವಜ ಹಾರಿಸಲಷ್ಟೇ ಅವಕಾಶ: ಸಚಿವ

Date:

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದ ಗ್ರಾಮ ಪಂಚಾಯತಿ ಎದುರು ಸರ್ಕಾರಿ ಜಾಗದಲ್ಲಿ ಹಾರಿಸಲಾಗಿದ್ದ ಕೇಸರಿ ಧ್ವಜವನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಇದರ ವಿರುದ್ಧ ಹಿಂದುತ್ವವಾದಿ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ವಿವಾದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೃಷಿ ಸಚಿವ ಎನ್ ಚಲಯವರಾಯಸ್ವಾಮಿ, “ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಜಾಗದಲ್ಲಿ ರಾಷ್ಟ್ರಧ್ವಜ ಹಾರಿಸಲು ಮಾತ್ರವೇ ಅವಕಾಶವಿದೆ. ಅದರ ಹೊರತಾಗಿ, ಯಾವುದೇ ರಾಜಕೀಯ, ಧಾರ್ಮಿಕ ಧ್ವಜ ಹಾರಿಸಲು ಅವಕಾಶವಿಲ್ಲ” ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, “ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಜಾಗದಲ್ಲಿ ರಾಷ್ಟ್ರೀಯ ಧ್ವಜ ಹಾರಿಸಬಹುದು. ಅದು ಹೊರತು ಪಡಿಸಿ ಸರ್ಕಾರಿ ಜಾಗದಲ್ಲಿ ಬೇರೆ ಧ್ವಜವನ್ನು ಹಾರಿಸುವಂತಿಲ್ಲ. ತ್ರಿವರ್ಣ ಧ್ವಜಕ್ಕೆ ಅನುಮತಿ ಪಡೆದು ಬೇರೆ ಧ್ವಜ ಹಾರಿಸಿದ್ದಾರೆ. ಅದು ತಪ್ಪು. ಇವತ್ತು ಬಿಟ್ಟರೆ, ನಾಳೆ ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಹಾರಿಸ್ತೀವಿ ಅಂತಾರೆ. ಆಗ ಅವಕಾಶ ಕೊಡಲು ಆಗುತ್ತಾ? ಒಂದು ಕಡೆ ಅವಕಾಶ ಕೊಟ್ರೆ ಎಲ್ಲ ಕಡೆ ಕೇಳ್ತಾರೆ” ಎಂದಿದ್ದಾರೆ.

“ಸ್ಥಳೀಯ ಯುವಕರು ಒಳ್ಳೆಯವರೇ, ಅವರನ್ನ ಕೆಲವರು ದಾರಿ ತಪ್ಪಿಸುತ್ತಿದ್ದಾರೆ. ಎಲ್ಲ ಯುವಕರ ಜೊತೆ ಮಾತನಾಡುತ್ತೇನೆ. ಹನುಮ ಧ್ವಜ ಹಾರಿಸಲು ಖಾಸಗಿ ಜಾಗದಲ್ಲಿ ಅಥವಾ ದೇವಾಲಯದ ಮುಂದೆ ಹಾಕಲು ಅವಕಾಶ ಕೊಡೊಣ. ಆದರೆ, ಸರ್ಕಾರಿ ಕಚೇರಿ ಮುಂದೆ ಬೇಡ” ಎಂದರು‌.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಮಂಡ್ಯ | ಕೇಸರಿ ಧ್ವಜ ತೆರವಿಗೆ ಹಿಂದುತ್ವವಾದಿಗಳ ವಿರೋಧ

“ನಾನು ರಾಮ ಭಕ್ತ, ನಮ್ಮ ಮನೆ ದೇವರು ವಿಷ್ಣು. ನಾವು ಯಾವುದೇ ಧ್ವಜದ ವಿರೋಧಿಗಳಲ್ಲ. ಪಂಚಾಯತಿ ಸಭೆಯಲ್ಲಿ ಹನುಮ ಧ್ವಜ ಹಾರಿಸಲು ಅನುಮೋದನೆ ನೀಡದ್ದರೆ ತಪ್ಪು. ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇದರಲ್ಲಿ ನಾನಾಗಲಿ, ಸ್ಥಳೀಯ ಶಾಸಕರಾಗಲಿ ರಾಜಕೀಯ ಮಾಡ್ತಿಲ್ಲ. ಸರ್ಕಾರಿ ಕಚೇರಿ ಮುಂದೆ ಹನುಮ ಧ್ವಜ ಹಾರಿಸಿರುವುದು ಸಂವಿಧಾನಕ್ಕೆ ವಿರುದ್ಧವಾಗಿದೆ. ಹೀಗಾಗಿ, ಅದನ್ನು ತೆರವು ಮಾಡಲಾಗಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...