ಚಮಚಾಗಿರಿ ಭಾಷಣದಿಂದ ದಸರಾ ಉದ್ಘಾಟನೆಯ ಪಾವಿತ್ರ್ಯತೆ ಹಾಳು: ಎಚ್ ವಿಶ್ವನಾಥ್

Date:

ಚಮಚಾಗಿರಿಯ ಭಾಷಣ ಹಾಗೂ ರಾಜಕಾರಣದ ಘಮಲಿನಿಂದಾಗಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಡೆದ ನಾಡಹಬ್ಬ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದ ಪಾವಿತ್ರ್ಯತೆ ಹಾಳಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್ ವಿಶ್ವನಾಥ್ ದೂರಿದರು.

ಮೈಸೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ರಾಜಕೀಯ ಮಾತನಾಡುವ ವೇದಿಕೆ ಆದಾಗಿರಲಿಲ್ಲ. ದಸರಾ ಉದ್ಘಾಟಿಸಿದ ಸಾಹಿತಿ ಹಂಪ ನಾಗರಾಜಯ್ಯ ಅವರೂ ರಾಜಕೀಯ ಭಾಷಣ ಮಾಡಿದ್ದಾರೆ. ದಸರಾ ಇತಿಹಾಸ, ಮಹಾರಾಜರ ಕೊಡುಗೆ, ನಾಡಹಬ್ಬದ ಐತಿಹಾಸಿಕ ಮಹತ್ವದ ಬಗ್ಗೆ ಮಾತನಾಡದೇ, ಕೆಳಮಟ್ಟದ ಕೆಲಸವನ್ನು ನಮ್ಮ ರಾಜಕಾರಣಿಗಳು ಮಾಡಿದ್ದಾರೆ” ಎಂದು ಬೇಸರ ಹೊರಹಾಕಿದರು.

“ಹಿಂದೆ ಚಾಮುಂಡೇಶ್ವರಿಯ ಬಗ್ಗೆ ಲಘುವಾಗಿ ಮಾತನಾಡುತ್ತಿದ್ದ ಸಿದ್ದರಾಮಯ್ಯ ಈಗ ಪದೇ ಪದೇ ಆ ತಾಯಿಯ ಆಶೀರ್ವಾದ ಬೇಡಿದ್ದಾರೆ. ನಾನೇನೂ ತಪ್ಪು ಮಾಡಿಲ್ಲ ಎಂದು ಪುನರುಚ್ಚರಿಸುತ್ತಿದ್ದಾರೆ. ಇದರ ಅರ್ಥವೇನು”ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜೆಡಿಎಸ್‌ ಪ್ರಮುಖರ ಸಮಿತಿಯ ಅಧ್ಯಕ್ಷ ಜಿ ಟಿ ದೇವೇಗೌಡರು ಸಿದ್ದರಾಮಯ್ಯ ಅವರನ್ನು ಹೊಗಳಿರುವುದು ಬೂಟಾಟಿಕೆ ತರ ಕಾಣುತ್ತಿದೆ. ಅವರೂ ಮುಡಾ ಫಲಾನುಭವಿಯೇ. ಅಷ್ಟೆಲ್ಲ ಹೊಗಳುವ ಅಗತ್ಯ ಇರಲಿಲ್ಲ” ಎಂದರು.

“ಮುಡಾ ಹಗರಣದ ಬಗ್ಗೆ ಇಷ್ಟು ದಿನ ಮಾತನಾಡದ ಜಿಟಿಡಿ ಈಗ ಏಕೆ ಬಾಯಿ ಬಿಟ್ಟಿದ್ದಾರೆ? ಅವರೂ ಮುಡಾ ಫಲಾನುಭವಿ ಆಗಿರುವುದೇ ಇದಕ್ಕೆ ಕಾರಣ. ಅವರದ್ದೂ ಎಷ್ಟೋ‌ ನಿವೇಶನ ಇವೆ ಎಂಬ ಮಾತುಗಳಿವೆ. ಎಲ್ಲ ರಾಜಕಾರಣಿಗಳೂ ಸೇರಿ ಮೈಸೂರನ್ನು ಕಳ್ಳರ ಸಂತೆಯಂತೆ ಬಿಂಬಿಸಿದ್ದಾರೆ” ಎಂದು ಆರೋಪಿಸಿದರು.

“ಜೆಡಿಎಸ್‌ ಶಾಸಕಾಂಗ ‌ಪಕ್ಷದ ನಾಯಕನನ್ನಾಗಿ ಜಿಟಿಡಿ ಅವರನ್ನು ಮಾಡದಿರುವುದು ಅವರ ಕೋಪಕ್ಕೆ ಮತ್ತೊಂದು ಕಾರಣ. ರಾಜ್ಯ ಸರ್ಕಾರವನ್ನು ಬೀಳಿಸುತ್ತೇವೆ ಎಂದು ಯಾರೂ ಹೇಳಿಲ್ಲ. ಆದರೂ ಮುಖ್ಯಮಂತ್ರಿಯೇ ಆ ಬಗ್ಗೆ ಗುಲ್ಲೆಬ್ಬಿಸುತ್ತಿದ್ದಾರೆ” ಎಂದು ಕಿಡಿಕಾರಿದರು.

“ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ, ಜಾರಿ ನಿರ್ದೇಶನಾಲಯ (ಇಡಿ) ಮಧ್ಯಪ್ರವೇಶ ಮಾಡುತ್ತಿದ್ದಂತೆಯೇ ಮುಖ್ಯಮಂತ್ರಿ ಪತ್ನಿ ಪಾರ್ವತಿಯವರು 14 ನಿವೇಶನಗಳನ್ನು ವಾಪಸ್ ಮಾಡಿದ್ದಾರೆ. ಅಪರಾಧ ಒಪ್ಪಿಕೊಂಡಾಕ್ಷಣ, ಮಾಡಿರುವ ಅಪರಾಧ ಹೋಗಿಬಿಡುವುದಿಲ್ಲ” ಎಂದರು.

“ಮುಡಾದಿಂದ ಶೇ 50:50 ಅನುಪಾತದಲ್ಲಿ ಹಂಚಿಕೆಯಾಗಿರುವ ಎಲ್ಲ ನಿವೇಶನಗಳ ಬಗ್ಗೆಯೂ ತನಿಖೆ ಆಗಬೇಕು. 14 ನಿವೇಶನಗಳ ಹಂಚಿಕೆ ಪ್ರಕರಣ, ನ್ಯಾಯಾಲಯದ ಆದೇಶದಂತೆ ತನಿಖೆಯ ಹಂತದಲ್ಲಿರುವಾಗಲೇ ನಿವೇಶನಗಳನ್ನು ವಾಪಸ್ ಪಡೆದುಕೊಳ್ಳಲು ಮುಡಾ ಆಯುಕ್ತರಿಗೆ ಅಧಿಕಾರ ಏನಿದೆ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...