ಮಂಡ್ಯ | ಪ್ರಮುಖರ ಸಭೆ ಕರೆದು ಬೆಂಬಲ ಕೋರಿದ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಮಧುಚಂದನ್

Date:

  • ಒಂದು ಸಲ ಅವಕಾಶ ನೀಡುವಂತೆ ಬೆಂಬಲ ಕೋರಿದ ಅಭ್ಯರ್ಥಿ
  • ಸಭೆಯಲ್ಲಿ ಭಾಗಿಯಾದ ಸರ್ವೋದಯ ಕರ್ನಾಟಕ ಪಕ್ಷದ ಪ್ರಮುಖರು

ನಮ್ಮ ಚುನಾವಣಾ ವ್ಯವಸ್ಥೆಯಲ್ಲಿ ತಾತ ಒಳ್ಳೆಯವನೆಂದು ಮೊಮ್ಮಕ್ಕಳಿಗೆ ವೋಟ್ ಹಾಕುವುದು, ಗಂಡ ಒಳ್ಳೆಯವನೆಂದು ಹೆಂಡತಿಗೆ ವೋಟ್ ಹಾಕುವುದು, ನನ್ನ ಜಾತಿಯವನೆಂದು ಮತ ಹಾಕುವುದು ಮೊದಲು ಬದಲಾಗಬೇಕು ಎಂದು ಸರ್ವೋದಯ ಕರ್ನಾಟಕ ಪಕ್ಷ ಅಭ್ಯರ್ಥಿ ಮಧುಚಂದನ್ ಪ್ರತಿಪಾದಿಸಿದರು.

ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಎಸ್ ಸಿ ಮಧುಚಂದನ್ ಹುಲಿವಾನದ ಆರ್ಗ್ಯಾನಿಕ್ ಫಾರ್ಮ್ ನಲ್ಲಿ ಮಂಡ್ಯ ಜಿಲ್ಲೆ ಕೆರಗೋಡು ಹೋಬಳಿ ವ್ಯಾಪ್ತಿಯ ಬೂತ್ ಕಮಿಟಿ ಪ್ರಮುಖರ ಸಭೆ ನಡೆಸಿ, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

“ಯಾವ ವ್ಯಕ್ತಿಗೆ ರೈತರ, ಕೂಲಿ ಕಾರ್ಮಿಕರ, ವಿದ್ಯಾವಂತ ಪದವೀಧರರ, ಹಾಲು ಉತ್ಪಾದಕರ ಸಮಸ್ಯೆಗಳು ತಳಮಟ್ಟದಿಂದ ಅರಿವಿರುತ್ತದೆಯೋ ಅಂಥವರನ್ನು ಗುರುತಿಸಿ ಮತ ಹಾಕಬೇಕು. ನಾನು ಮಧ್ಯಮ ವರ್ಗದ ಜನರ ಬವಣೆಗಳನ್ನು ಅರಿತಿದ್ದೇನೆ. ಹಾಗಾಗಿ ಈ ಬಾರಿ ಮಂಡ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ನನಗೆ ನೀವೆಲ್ಲರೂ ಬೆಂಬಲ ಅತ್ಯಗತ್ಯೆ” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತಮುಖಂಡರಾದ ಉಪ್ಪರಕನಹಳ್ಳಿ ಕೆಂಪಮ್ಮ ಮಾತನಾಡಿ, “ರೈತ ತನ್ನ ಹೊಲಗದ್ದೆಗಳಿಗೆ ನೀರು ಹಾಯಿಸಲು ಸರಿಯಾದ ಪ್ರಮಾಣದಲ್ಲಿ ವಿದ್ಯುತ್‌ ಪೂರೈಕೆ ಆಗುತ್ತಿಲ್ಲ. ವಿದ್ಯಾವಂತರಿಗೆ ಕೆಲಸ ಸಿಗುತ್ತಿಲ್ಲ, ವ್ಯವಸಾಯ ಮಾಡಿಕೊಂಡಿರುವ ಗಂಡು ಮಕ್ಕಳಿಗೆ ಹೆಣ್ಣು ಸಿಗುತ್ತಿಲ್ಲ. ಕೃಷಿ ಪರಿಕರಗಳ ಬೆಲೆ ಮಾತ್ರ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದೆ ಆದರೆ, ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಮಾತ್ರ ಸಿಗುತ್ತಿಲ್ಲ. ಇನ್ನಾದರೂ ಹಣ ಹೆಂಡಕ್ಕೆ ತಮ್ಮ ಮತ ಮಾರಿಕೊಳ್ಳದೆ ಉತ್ತಮ ವ್ಯಕ್ತಿಯನ್ನು ಗೆಲ್ಲಿಸಲು ಕೆಲಸ ಮಾಡೋಣ” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? : ತಲಕಾಡಿನಲ್ಲಿ ಪ್ರವಾಸಿಗರಿಂದ ದುಪ್ಪಟ್ಟು ಹಣ ವಸೂಲಿ; ಇಲ್ಲದ ಮೂಲ ಸೌಕರ್ಯಗಳು

ಸರ್ವೋದಯ ಕರ್ನಾಟಕ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರಕೆರೆ ಪ್ರಸನ್ನ ಗೌಡ ಮಾತನಾಡಿ, “ಚುನಾವಣೆಗಳು ಬಂತೆಂದರೆ ಕುರುಡು ಕಾಂಚಾಣ ತನ್ನ ರುದ್ರ ನರ್ತನವನ್ನು ಮಾಡುತ್ತದೆ. ಕೆಟ್ಟ ಕಾಂಚಣಾದಾಸಗೆ ಬಲಿಯಾಗಿ ನಮ್ಮ ಭವಿಷ್ಯ ಯುವ ಪೀಳಿಗೆಯನ್ನು ಅಂಧಕಾರಕ್ಕೆ ತಳ್ಳುವ ಕೆಲಸ ಮಾಡದಿರೋಣ. ಉತ್ತಮರನ್ನು ಸಮಾಜದ ಸಮಸ್ಯೆಗಳ ಬಗ್ಗೆ ಅರಿವಿರುವ ಹೋರಾಟದ ಹಿನ್ನೆಲೆ ಹೊಂದಿರುವ ಮಧುಚಂದ್ರನ್ ಅವರನ್ನು ಮಂಡ್ಯ ವಿಧಾನಸಭಾ ಕ್ಷೇತ್ರದ ಜನತೆ ಈ ಬಾರಿ ವಿಧಾನಸಭೆಗೆ ಕಳಿಸಿ ಕೊಡಬೇಕು” ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಖಜಾಂಚಿ ತಗ್ಗಳ್ಳಿ ಪ್ರಸನ್ನ, ಮುಖಂಡರಾದ ಹುಲಿವಾನ ಜಗದೀಶ್, ರವಿ, ಕೆ ಗೌಡಗೆರೆ ಗ್ರಾಮದ ರಂಗ ಶೆಟ್ರು, ಮಂಜುನಾಥ್, ಮಾರಗೌಡನಹಳ್ಳಿ ನಿಂಗೇಗೌಡ್ರು, ಕಾಂತರಾಜು ಮರ್ಲಿಂಗದೊಡ್ಡಿ ಲಕ್ಷ್ಮಿ ನಾರಾಯಣ ಸೇರಿದಂತೆ ಹಲವರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...