ಸತ್ಯ ಹರಿಶ್ಚಂದ್ರನ ಮೊಮ್ಮಗ ತರ ಕುಮಾರಸ್ವಾಮಿ ಮಾತಾಡ್ತಾರೆ: ಡಿ ಕೆ ಶಿವಕುಮಾರ್ ವಾಗ್ದಾಳಿ

Date:

ಕುಮಾರಸ್ವಾಮಿ ಅವರಿಗೆ ಮಾನ ಮರ್ಯಾದೆ ಇದೆಯೇ?, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯವರು ಏನನ್ನು ಹಂಚುತ್ತಿದ್ದಾರೆ ಎಂದು ತೋರಿಸಬೇಕಾ? ಸತ್ಯ ಹರಿಶ್ಚಂದ್ರನ ಮೊಮ್ಮಗ ತರ ಮಾತಾಡ್ತಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ತಿರುಗೇಟು ನೀಡಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಕೂಪನ್ ಕಾರ್ಡ್ ಗಳನ್ನು ಹಂಚುತ್ತಿದೆ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ ಅವರು ಪ್ರತಿಕ್ರಿಯಿಸಿದರು.

“ಮುನಿರತ್ನ, ಕುಮಾರಸ್ವಾಮಿ ಸೇರಿದಂತೆ ಎಲ್ಲರೂ ಹಂಚುತ್ತಿದ್ದಾರೆ. ನಾವು ಹಂಚುತ್ತಿರುವುದು ನಮ್ಮ ಪ್ರಣಾಳಿಕೆ ಕಾರ್ಡ್. ಇಷ್ಟಾದರೂ ಭಯ ಬಂದಿದೆಯಲ್ಲ. ಹೆದರಿಕೊಂಡು ರಣ ಹೇಡಿತರ ಬೇರೆ ಕಡೆ ಹೋಗಿದ್ದಾರೆ‌. ಅವರೇ ಚುನಾವಣೆಗೆ ನಿಂತುಕೊಳ್ಳಬೇಕಿತ್ತು. ಅಮಾಯಕರನ್ನು ನಿಲ್ಲಿಸಿ ಮಂಡ್ಯಕ್ಕೆ ಓಡಿ ಹೋಗಿದ್ದಾರೆ” ಎಂದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕುಮಾರಸ್ವಾಮಿ ಏನೇನು ಮಾಡುತ್ತಿದ್ದಾರೆ, ಏನೇನು ಹಂಚುತ್ತಿದ್ದಾರೆ ಎನ್ನುವುದು ನಮಗೆ ಗೊತ್ತಿಲ್ಲವೇ? ಮುನಿರತ್ನನ ಮೂಲಕ ಗೋಲ್ಡ್ ಕಾರ್ಡ್ ಮಾಡಿ ಹಂಚುತ್ತಿದ್ದಾರೆ‌. ಸಿನಿಮಾ ಸ್ಟೈಲ್ ಅಲ್ಲಿ ಮಾಡಿದ್ದಾರೆ. ಅವರೇಕೆ ಇಷ್ಟೊಂದು ಹತಾಶರಾಗಿದ್ದಾರೆ. ಹರಿಶ್ಚಂದ್ರನ ಮೊಮ್ಮಗ ಏನು ಹಂಚಿದ್ದಾನೆ” ಎಂದು ಲೇವಡಿ ಮಾಡಿದರು.

“ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಹೇಳಿ, ಹೆಣ್ಣು ಮಕ್ಕಳನ್ನು ಅಗೌರವದಿಂದ ಕಂಡಿದ್ದಾರೆ. ಮಾಧ್ಯಮಗಳಲ್ಲಿ ಅವರ ಕರ್ಮಕಾಂಡ ತೋರಿಸುತ್ತಿದ್ದಾರೆ. ಇದರ ವಿರುದ್ದ ಹೊಸ ಕಾನೂನು ಮಾಡಬೇಕು ಎಂದು ಯಾರೋ ಹೇಳುತ್ತಿರುವುದನ್ನು ನಾನು ಕೇಳಿದೆ” ಎಂದರು.

ಸಂಸದನೊಬ್ಬ ಹೆಣ್ಣುಮಕ್ಕಳ ಜೊತೆ ಅಗೌರವದಿಂದ ನಡೆದುಕೊಂಡಿದ್ದಾರೆ ಎಂದಾಗ “ಇದರ ಬಗ್ಗೆ ದೇವೇಗೌಡರು, ಕುಮಾರಸ್ವಾಮಿ, ಡಾ.ಮಂಜುನಾಥ್, ರೇವಣ್ಣ ಅವರನ್ನು ಕೇಳಿ. ನಾನು ಉತ್ತರ ಕೊಡಲು ಆಗುವುದಿಲ್ಲ. ಅವರ ಆಚಾರ ವಿಚಾರ ಎಲ್ಲವೂ ಅವರೇ. ನನಗೆ ಇದನ್ನು ನೋಡಿ ಅವಮಾನವಾಗುತ್ತಿದೆ” ಎಂದು ಹೇಳಿದರು.

“ಬಿಜೆಪಿ ಗೊಂದಲದಲ್ಲಿ ಮುಳುಗಿದೆ. ರೈತರು, ತಾಯಂದಿರು, ಯುವ ಸಮುದಾಯ, ಎಲ್ಲಾ ವರ್ಗದ ಜನರು ಹಾಗೂ ದಳ- ಬಿಜೆಪಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತದಾನ ಮಾಡಬೇಕು ಎಂದು ತೀರ್ಮಾನ ಮಾಡಿದ್ದಾರೆ” ಎಂದರು.

ಜೆ.ಪಿ.ನಡ್ಡಾ ಉತ್ತರ ಕರ್ನಾಟಕಕ್ಕೆ ಭೇಟಿ ನೀಡುತ್ತಿರುವುದರ ಬಗ್ಗೆ ಕೇಳಿದಾಗ “ಆಕಾಶದಿಂದ ಯಾರೇ ಕೆಳಗೆ ಉದುರಲಿ ಕಾಂಗ್ರೆಸ್ ಪಕ್ಷಕ್ಕೆ ಏನೂ ಮಾಡಲು ಆಗುವುದಿಲ್ಲ“ ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...