ಅಬಕಾರಿ ನೀತಿ ಪ್ರಕರಣ | ಎಎಪಿ ಸಂಸದ ಸಂಜಯ್‌ಗೆ ಜಾಮೀನು; ‘ಸತ್ಯಮೇವ ಜಯತೆ’ ಎಂದ ಎಎಪಿ

Date:

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಸಂಸದ ಸಂಜಯ್ ಸಿಂಗ್‌ ಅವರಿಗೆ ಜಾಮೀನು ದೊರೆತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಎಎಪಿ, ‘ಸತ್ಯಮೇವ ಜಯತೆ’ (ಎಂದಿಗೂ ಸತ್ಯಕ್ಕೆ ಗೆಲುವು) ಎಂದು ಹೇಳಿದೆ. ಸಂಜಯ್ ಸಿಂಗ್‌ ಅವರಿಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌ನ ನಿರ್ಧಾರವನ್ನು ಸ್ವಾಗತಿಸಿದೆ.

“ಇದು ಪ್ರಜಾಪ್ರಭುತ್ವದ ಅತೀ ಪ್ರಮುಖ ದಿನವಾಗಿದೆ ಮತ್ತು ಭರವಸೆಯ ಕ್ಷಣವಾಗಿದೆ” ಎಂದು ಸಂಜಯ್‌ ಸಿಂಗ್‌ ಅವರಿಗೆ ಜಾಮೀನು ಲಭಿಸಿದ ಬಳಿಕ ಎಎಪಿ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಈ ಜಾಮೀನು ದೆಹಲಿ ಅಬಕಾರಿ ನೀತಿ ಪ್ರಕರಣವು ಬರೀ ಸಾಕ್ಷಿಗಳ ಮತ್ತು ಅನುಮೋದಕರ ಹೇಳಿಕೆ ಎಂಬುವುದನ್ನು ಸಾಬೀತುಪಡಿಸಿದೆ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಅಬಕಾರಿ ನೀತಿ ಹಗರಣದಲ್ಲಿ ಎಎಪಿ ಸಂಸದ ಸಂಜಯ್ ಸಿಂಗ್‌ಗೆ ಸುಪ್ರೀಂನಿಂದ ಜಾಮೀನು

ದೆಹಲಿ ಹಣಕಾಸು ಸಚಿವೆ, ಎಎಪಿ ನಾಯುಕಿ ಅತಿಶಿ ಮಾತನಾಡಿ, “ನಕಲಿ ಪ್ರಕರಣದಲ್ಲಿ ಎರಡು ವರ್ಷದಿಂದ ಎಎಪಿ ನಾಯಕರನ್ನು ಗುರಿಯಾಗಿಸಲಾಗುತ್ತಿದೆ, ಬಂಧಿಸಲಾಗುತ್ತಿದೆ. ಕೋರ್ಟ್ ವಿಚಾರಣೆಯಿಂದ ಪ್ರಮುಖ ಎರಡು ವಿಚಾರಗಳು ಬಹಿರಂಗವಾಗಿದೆ. ಹಣದ ಜಾಡು (money trail) ಎಲ್ಲಿ ಎಂದು ಸುಪ್ರೀಂ ಕೋರ್ಟ್ ಕೇಳಿದಾಗ ಇಡಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಬರೀ ಅನುಮೋದಕರ ಹೇಳಿಕೆ ಆಧಾರದಲ್ಲಿ ಈ ಪ್ರಕರಣ ನಿಂತಿದೆ” ಎಂದು ಆರೋಪಿಸಿದರು.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಈವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ನಾಲ್ವರು ಎಎಪಿ ಮುಖಂಡರುಗಳನ್ನು ಬಂಧಿಸಲಾಗಿದೆ. ಈ ಪೈಕಿ ಈಗ ಸಂಸದ ಸಂಜಯ್‌ ಸಿಂಗ್‌ ಅವರಿಗೆ ಜಾಮೀನು ನೀಡಲಾಗಿದೆ. ಉಳಿದಂತೆ ಸತ್ಯೇಂದ್ರ ಜೈನ್, ಮನೀಶ್ ಸಿಸೋಡಿಯಾ ಒಂದು ವರ್ಷಕ್ಕೂ ಅಧಿಕ ಅವಧಿಯಿಂದ ಜೈಲಿನಲ್ಲಿದ್ದಾರೆ. ಇನ್ನು ಸಂಜಯ್ ಸಿಂಗ್ ಅವರನ್ನು ಅಕ್ಟೋಬರ್ 4ರಂದು ಬಂಧಿಸಲಾಗಿತ್ತು.

ಇದನ್ನು ಓದಿದ್ದೀರಾ?  ಬಿಜೆಪಿ ಸೇರದಿದ್ದರೆ ಒಂದು ತಿಂಗಳಲ್ಲೇ ನಮ್ಮ ಬಂಧನ: ಎಎಪಿ ನಾಯಕಿ ಅತಿಶಿ

ಇನ್ನು”ಬಿಜೆಪಿ ಸೇರುವಂತೆ ನಮ್ಮ ಮೇಲೆ ಒತ್ತಡ ಹಾಕಲಾಗುತ್ತಿದೆ. ಬಿಜೆಪಿ ಸೇರದಿದ್ದರೆ ಒಂದು ತಿಂಗಳ ಒಳಗಾಗಿ ನಮ್ಮ ಬಂಧನ ಮಾಡಲಾಗುವುದು ಎಂದು ಬೆದರಿಕೆ ಹಾಕಲಾಗುತ್ತಿದೆ” ಎಂದು ದೆಹಲಿ ಹಣಕಾಸು ಸಚಿವೆ, ಎಎಪಿ ನಾಯಕಿ ಅತಿಶಿ ಮರ್ಲೆನಾ ಆರೋಪಿಸಿದ್ದಾರೆ.

“ಲೋಕಸಭೆ ಚುನಾವಣೆಗೂ ಮುನ್ನ ಎಎಪಿಯ ನಾಲ್ವರು ನಾಯಕರನ್ನು ಬಂಧಿಸಲು ಬಿಜೆಪಿ ಮುಂದಾಗಿದೆ. ಒಂದು ತಿಂಗಳೊಳಗೆ ನನ್ನನ್ನು, ಸೌರಬ್ ಭಾರದ್ವಾಜ್, ದುರ್ಗೇಶ್ ಪಾಟಕ್, ರಾಘವ್ ಚಡ್ಡಾ ಅವರನ್ನು ಬಂಧಿಸಲಿದೆ” ಎಂದು ದೂರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...