ಹೇಳೋದೊಂದು ಮಾಡೋದೊಂದು: ಮೋದಿಗಿಂತ ಬೇರೆ ಉದಾಹರಣೆ ಯಾರಿದ್ದಾರೆ?

Date:

ಸದಾ ಕಾಲ ಕಾಂಗ್ರೆಸ್‌ ಟೀಕೆ ಮಾಡಿ ಅಧಿಕಾರಕ್ಕೆ ಬಂದು ಒಂದು ದಶಕವಾಗುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿಯವರ ಕೈಗೆ ಮೈಕ್ ಕೊಟ್ಟರೆ ಕಾಂಗ್ರೆಸ್‌ ಪಕ್ಷವನ್ನು ಟೀಕೆ ಮಾಡುವುದು ಬಿಟ್ಟರೆ ಅಪ್ಪಿ ತಪ್ಪಿಯೂ ತಮ್ಮ ಸರಕಾರ ಮಾಡಿದ ಸಾಧನೆ ಅವರ ಬಾಯಿಂದ ಬರುವುದಿಲ್ಲ; ಮಾಡಿದರೆ ತಾನೇ ಬರುವುದು!?

ಇಲ್ಲಿ ಗಮನಿಸಬೇಕಾದ ಬಹುಮುಖ್ಯ ಅಂಶವೆಂದರೆ ಕಾಂಗ್ರೆಸ್‌ ಹಾಗೂ ಇತರ ರಾಜಕೀಯ ಪಕ್ಷಗಳನ್ನು ನೇರವಾಗಿ ಪರೋಕ್ಷವಾಗಿ ಟೀಕೆ ಮಾಡುತ್ತಾ ಮೋದಿಯವರು ’ವಂಶ ಪಾರಂಪರ್ಯದ ರಾಜಕಾರಣ’ ಎಂದು ಹೀಯಾಳಿಸುತ್ತಾರೆ.

ಕರ್ನಾಟಕದಲ್ಲಿ ಒಂದೇ ಕುಟುಂಬದ ‌ಹತ್ತಾರು ಮಂದಿಗೆ ಟಿಕೆಟ್ ನೀಡಿ ಲೋಕಸಭೆ, ವಿಧಾನಸಭೆ, ರಾಜ್ಯಸಭೆ, ವಿಧಾನ ಪರಿಷತ್, ಜಿಲ್ಲಾ ಪಂಚಾಯತ್ ಹೀಗೆ ಎಲ್ಲಾ ಕಡೆ ತನ್ನ ಕುಟುಂಬದವರನ್ನು ಸದಸ್ಯರನ್ನಾಗಿ ನಿರಂತರ ಮಾಡುವ ಎಚ್.ಡಿ.ದೇವೇಗೌಡರ ಜಾತ್ಯತೀತ ಜನತಾದಳದೊಂದಿಗೆ ಮೋದಿಯವರ ಬಿಜೆಪಿ ಮೈತ್ರಿ ಮಾಡಿಕೊಂಡಿತು. ಈಗ ಬಿ.ಎಸ್.ಯಡಿಯೂರಪ್ಪನವರ ಪುತ್ರ ವಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮಾಡಿದರು. ಮೊದಲ ಬಾರಿ ಶಾಸಕರಾಗಿರುವ ವಿಜಯೇಂದ್ರ ಅವರು ಯಡ್ಯೂರಪ್ಪನವರ ಮಗ ಅಲ್ಲದೇ ಇದ್ದರೆ ಅವರಿಗೆ ಆ ಹುದ್ದೆ ನೀಡುತ್ತಿದ್ದರಾ ಇಲ್ಲವಾ ಎಂಬುದು ಎಲ್ಲರಿಗೂ ಗೊತ್ತಿದ್ದ ವಿಷಯ. ಯಡಿಯೂರಪ್ಪನವರ ಇನ್ನೋರ್ವ ಪುತ್ರ ಸಂಸದರಾಗಿದ್ದಾರೆ. ಹಾಗಾಗಿ ಕರ್ನಾಟಕದಲ್ಲಿ ಎನ್‌ಡಿಎ ಅಂದರೆ ’ಅಪ್ಪ‌ಮಗ ಜೋಡಿ’ಯಿಂದ ಮುನ್ನಡೆಸಲ್ಪಡುವ ಎರಡು ಪಕ್ಷಗಳ ಮೈತ್ರಿಯೇ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡೂ ಪಕ್ಷಗಳ‌ ಕಾರ್ಯಕರ್ತರ ಸ್ವಾಭಿಮಾನವನ್ನು ಅಡವಿಟ್ಟು ಅಧಿಕಾರವನ್ನೆಲ್ಲ ತನ್ನ ಕುಟುಂಬದಲ್ಲೇ ಇಟ್ಟ ಅಪ್ಪ ಮಕ್ಕಳ ಪಕ್ಷಗಳ ಮೈತ್ರಿ ಬಗ್ಗೆ ಮೋದಿಯವರು ಮಾತನಾಡಬಲ್ಲರಾ? ತಾನು ಹೇಳುವುದು ಒಂದಾದರೆ ಮಾಡುವುದು ಇನ್ನೊಂದು ಎಂಬುದಕ್ಕೆ ಈ ಒಂದು ವಿಷಯ ಅಲ್ಲ, ಬಹುತೇಕ ಎಲ್ಲ ವಿಷಯಗಳಲ್ಲಿ ಮೋದಿಯವರಿಗಿಂತ ತಾಜಾ ಉದಾಹರಣೆ ಬೇರೆ ಯಾರಾದರೂ ಇರಲು ಸಾಧ್ಯವೇ ಇಲ್ಲ.

ಇದನ್ನೂ ಓದಿರಿ: ರಾಜಕೀಯ ಲೆಕ್ಕಾಚಾರ ಮತ್ತು ಅಪ್ಪ ಮಕ್ಕಳ ಪಕ್ಷ

WhatsApp Image 2025 11 17 at 3.16.03 PM
ಅಮೃತ್‌ ಶೆಣೈ
+ posts

ಅಧ್ಯಕ್ಷರು, ʼಸಹಬಾಳ್ವೆʼ ಉಡುಪಿ‌

ಪೋಸ್ಟ್ ಹಂಚಿಕೊಳ್ಳಿ:

ಅಮೃತ್‌ ಶೆಣೈ
ಅಮೃತ್‌ ಶೆಣೈ
ಅಧ್ಯಕ್ಷರು, ʼಸಹಬಾಳ್ವೆʼ ಉಡುಪಿ‌

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...