ಅಕ್ರಮ ಮದ್ಯ ಮಾರಾಟಕ್ಕೆ ಎಸ್‍ಸಿ-ಎಸ್‍ಟಿ ಯುವಕರೇ ಹೆಚ್ಚು ಬಲಿ; ವಿಧಾನಸಭೆಯಲ್ಲಿ ಗಂಭೀರ ಚರ್ಚೆ

Date:

ಗ್ರಾಮೀಣ ಪ್ರದೇಶಗಳಲ್ಲಿ ಅನಧಿಕೃತ ಸ್ಥಳಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ವಿಚಾರ ವಿಧಾನಸಭೆ ಅಧಿವೇಶನದಲ್ಲಿ ಮಂಗಳವಾರ ಪ್ರತಿಧ್ವನಿಸಿ, ಪಕ್ಷಬೇಧ ಮರೆತು ಗಂಭೀರ ಚರ್ಚೆಗೆ ದಾರಿಮಾಡಿಕೊಟ್ಟಿತು.

ಬಿಜೆಪಿಯ ಹಿರಿಯ ಶಾಸಕ ಆರಗ ಜ್ಞಾನೇಂದ್ರ ಮಾತನಾಡುತ್ತ, “ಹಳ್ಳಿಗಳಲ್ಲಿ ಕಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟವಾಗುತ್ತಿದೆ. ಸರ್ಕಾರ ಅಕ್ರಮ ಮದ್ಯ ಮಾರಾಟ ತೆಡಲು ಆಗದಿದ್ದರೆ ಇದನ್ನು ಅಧಿಕೃತಗೊಳಿಸಿಬಿಡಿ. ಎಸ್‍ಸಿ/ಎಸ್‍ಟಿ ಕಾಲೋನಿಗಳಲ್ಲಿ ಹೆಚ್ಚು ಮದ್ಯವ್ಯಸನಿಗಳಾಗುತ್ತಿದ್ದಾರೆ. 35 ವಯಸ್ಸಿನೊಳಗೆ ಯುವಕರು ಸಾಯುತ್ತಿದ್ದಾರೆ. ಇದನ್ನು ತಡೆಯಲು ಕಾನೂನು ರೀತಿ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಇದಕ್ಕೆ ಆಕ್ಷೇಪವೆತ್ತಿದ ಆಡಳಿತ ಪಕ್ಷದ ಶಾಸಕ ನಾರಾಯಣಸ್ವಾಮಿ, “ಕೇವಲ ಎಸ್‍ಸಿ/ಎಸ್‍ಟಿಯವರು ಮಾತ್ರ ಕುಡಿಯುತ್ತಾರಾ? ನೀವು ಕುಡಿಯುವುದಿಲ್ಲವೇ? ದೇವರ ಮೇಲೆ ಆಣೆ ಮಾಡಿ ಹೇಳಿ? ಎಂದು ಛೇಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿರೋಧಪಕ್ಷದ ಶಾಸಕರು ಧ್ವನಿ ಏರಿಸಿದಾಗ ಮಧ್ಯಪ್ರವೇಶಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, “ರಾಜ್ಯಪಾಲರ ಭಾಷಣ ಸಂದರ್ಭದಲ್ಲಿ ಹೆಚ್ಚು ಪ್ರಸ್ತಾಪ ಮಾಡಬಹುದು. ಅರಗ ಜ್ಞಾನೇಂದ್ರ ಗೃಹಸಚಿವರಾಗಿದ್ದರು. ಅವರ ಕಾಲದಲ್ಲಿ ಎಷ್ಟು ಅಕ್ರಮ ಮದ್ಯ ಮಾರಾಟ ಮಾಡುವ ಅಂಗಡಿಗಳನ್ನು ಮುಚ್ಚಿಸಿದ್ದಾರೆ ಹೇಳಲಿ? ಸೂಕ್ತ ಸಲಹೆ ನೀಡಲಿ” ಎಂದು ತಿರುಗೇಟು ನೀಡಿದರು.

ಶಾಸಕ ಕೌಜಲಗಿ ಮಹಂತೇಶ್ ಶಿವಾನಂದ್ ಅವರ ಪ್ರಶ್ನೆಗೆ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಉತ್ತರ ನೀಡುತ್ತಿದ್ದ ಸಂದರ್ಭದಲ್ಲಿ ಪ್ರತಿಪಕ್ಷಗಳ ಸದಸ್ಯರು ಅಕ್ರಮ ಮದ್ಯ ಮಾರಾಟ ನಿಯಂತ್ರಿಸುವಂತೆ ಆಗ್ರಹಿಸಿದರು.

“ಗ್ರಾಮೀಣ ಪ್ರದೇಶಗಳಲ್ಲಿ ಕೆಲವು ವ್ಯಕ್ತಿಗಳು ಸ್ವ ಲಾಭಕ್ಕಾಗಿ ಅನಧಿಕೃತ ಸ್ಥಳಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವ ಪ್ರಕರಣಗಳು ಗಮನಕ್ಕೆ ಬಂದಿವೆ. ನಿಯಂತ್ರಣ ಮಾಡುವ ಕೆಲಸವನ್ನು ಇಲಾಖೆಯಿಂದ ಮಾಡುತ್ತಿದ್ದೇವೆ. ಕಾನೂನು ಉಲ್ಲಂಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ” ಸಚಿವ ಆರ್‌ ಬಿ ತಿಮ್ಮಾಪುರ ಉತ್ತರಿಸಿದರು.

“ಅಕ್ರಮ ಮದ್ಯ ಮಾರಾಟದಿಂದ ವಿದ್ಯಾರ್ಥಿಗಳು ಮದ್ಯವ್ಯಸನಿಗಳಾಗುತ್ತಿರುವ ಪ್ರಕರಣಗಳು ಸರ್ಕಾರದ ಗಮನಕ್ಕೆ ಬಂದಿಲ್ಲ. ಅಪ್ರಾಪ್ತ ವಯಸ್ಕರಿಗೆ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಅಂತಹ ಕೃತ್ಯದಲ್ಲಿ ತೊಡಗುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಇಲಾಖೆಯಿಂದ ಅಗತ್ಯ ಸೂಚನೆಗಳನ್ನು ನೀಡಲಾಗುತ್ತಿದೆ” ಎಂದು ಸಚಿವರು ಹೇಳಿದರು.

“ಅಕ್ರಮ ಮದ್ಯ ಮಾರಾಟ ತಡೆಯಲು ಅಬಕಾರಿ ಇಲಾಖೆಯಿಂದ ವಲಯ ವ್ಯಾಪ್ತಿಯ ಮಾರ್ಗಗಳಲ್ಲಿ ನಿರಂತರವಾಗಿ ಗಸ್ತು ನಡೆಸಲಾಗುತ್ತಿದೆ. ಗಸ್ತಿನ ಸಂದರ್ಭದಲ್ಲಿ ಮಹಿಳೆಯರು, ಮಹಿಳಾ ಸಂಘಗಳು ಸಾರ್ವಜನಿಕರಿಂದ ದೂರು ಸ್ವೀಕೃತವಾದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಸ್ಥಳಗಳ ಮೇಲೆ ದಾಳಿ ನಡೆಸಿ ಅಕ್ರಮ ಕಂಡುಬಂದಲ್ಲಿ ಅಬಕಾರಿ ನಿಯಮಗಳ ಪ್ರಕಾರ ಪ್ರಕರಣ ದಾಖಲಿಸಲಾಗುತ್ತಿದೆ” ಎಂದು ಹೇಳಿದರು.

18,253 ಆರೋಪಿತರ ದಸ್ತಗಿರಿ

“2024-25ನೇ ಅಬಕಾರಿ ಸಾಲಿನಲ್ಲಿ ಜನವರಿ ಅಂತ್ಯದವರೆಗೂ 17,390 ಮೊಕದ್ದಮೆಗಳನ್ನು ದಾಖಲಿಸಿ 18,253 ಆರೋಪಿತರನ್ನು ದಸ್ತಗಿರಿಗೆ ಒಳಪಡಿಸಲಾಗಿದೆ. ಮಾಸಿಕವಾಗಿ ಎಲ್ಲ ಮದ್ಯ ಮಾರಾಟ ಸನ್ನದ್ದುಗಳನ್ನು ನಿಯಮಿತವಾಗಿ ಪರಿಶೀಲಿಸಿ ಷರತ್ತು ಉಲ್ಲಂಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ಥಾಯಿ ಸಮಿತಿ ಸಭೆ ನಡೆಸಿ ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಅಕ್ರಮ ಮಾರಾಟ ತಡೆಯಲು ಕ್ರಮ ಕೈಗೊಳ್ಳಲಾಗುತ್ತಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮದ್ಯವ್ಯಸನ ಮತ್ತು ಮಾರಾಟದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ” ಎಂದು ಸಚಿವರು ಮಾಹಿತಿ ನೀಡಿದರು.

ಸಚಿವರ ಉತ್ತರಕ್ಕೆ ತೃಪ್ತರಾಗದ ಪ್ರತಿಪಕ್ಷಗಳ ಶಾಸಕರು, ಅಕ್ರಮ ಮದ್ಯ ಮಾರಾಟ ತಡೆಯಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್‍ಬಾಬು ಮಾತನಾಡಿ, “ಪ್ರತಿ ಮದ್ಯ ಮಾರಾಟದ ಅಂಗಡಿಗೆ ಗುರಿ ನಿಗದಿಪಡಿಸಿರುವುದರಿಂದ ಕಿರಾಣಿ ಅಂಗಡಿಗಳಲ್ಲೂ ಮದ್ಯ ಮಾರಾಟ ಮಾಡುವಂತಾಗಿದೆ” ಎಂದರು.

ಬಿಜೆಪಿ ಶಾಸಕ ಸುನೀಲ್‍ಕುಮಾರ್ ಮಾತನಾಡಿ, “ಸರ್ಕಾರ ಗುರಿ ನಿಗದಿಪಡಿಸಿರುವುದರಿಂದ ಅಕ್ರಮ ಮಾರಾಟಕ್ಕೆ ದಾರಿ ಮಾಡಿಕೊಟ್ಟಂತಾಗಿದೆ” ಎಂದು ಆರೋಪಿಸಿದರು. ಬಿಜೆಪಿಯ ಮತ್ತೊಬ್ಬ ಶಾಸಕ ಸಿದ್ದು ಸವದಿ ಮಾತನಾಡಿ, “ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವವರ ಮಾಹಿತಿ ಅಬಕಾರಿ ಇನ್ಸ್‍ಪೆಕ್ಟರ್‍ಗಳಿಗೆ ಇರುತ್ತವೆ. ಇಂತಹ ಕಾರ್ಯಕ್ಕೆ ಉತ್ತೇಜನ ನೀಡುವ ಅಧಿಕಾರಿಯನ್ನು ಅಮಾನತು ಮಾಡಿ” ಎಂದು ಆಗ್ರಹಿಸಿದರು.

ಮಧ್ಯಪ್ರವೇಶಿಸಿದ ಸಭಾಧ್ಯಕ್ಷ ಯು.ಟಿ.ಖಾದರ್‌, “ಎಲ್ಲೆಲ್ಲಿ ಮದ್ಯ ಅಕ್ರಮವಾಗಿ ಮಾರಾಟವಾಗುತ್ತದೆ ಎಂಬ ಮಾಹಿತಿ ಶಾಸಕರಿಗೆ ಇರುತ್ತದೆ. ಅದರ ಪಟ್ಟಿ ಕೊಟ್ಟು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿ, ಒಂದು ವೇಳೆ ಕ್ರಮ ಕೈಗೊಳ್ಳದಿದ್ದರೆ ಅಧಿಕಾರಿಯ ಮೇಲೆ ಕ್ರಮ ಜರುಗಿಸಿ” ಎಂದು ಸಲಹೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...