ಶಾಲಾ ಪಠ್ಯ ಪರಿಷ್ಕರಣೆ : ಅಧಿವೇಶನಕ್ಕೂ ಮುನ್ನ ಸಭೆ ಕರೆದು ಚರ್ಚಿಸಲು ಬಿಜೆಪಿ ನಿರ್ಧಾರ

Date:

  • ಶಾಲಾ ಪಠ್ಯ ಪರಿಷ್ಕರಣೆ ಹಿನ್ನೆಲೆಯಲ್ಲಿ ಸಭೆ ನಡೆಸಿದ ರಾಜ್ಯ ಬಿಜೆಪಿ
  • ಶಿಕ್ಷಣ ಕ್ಷೇತ್ರ ಪೂರ್ವಗ್ರಹ ಪೀಡಿತ ಮನಸ್ಥಿತಿಯಿಂದ ಹೊರ ಬರಬೇಕು

ಶಾಲಾ ಮಕ್ಕಳ ಪಠ್ಯ ಪರಿಷ್ಕರಣೆಗೆ ಮುಂದಾಗಿರುವ ರಾಜ್ಯ ಸರ್ಕಾರ ಕ್ರಮದ ಕುರಿತಂತೆ ಚರ್ಚಿಸಲು ಶಿಕ್ಷಣ ಕ್ಷೇತ್ರ ಪ್ರತಿನಿಧಿತ ವಿಧಾನಪರಿಷತ್ ಸದಸ್ಯರು ಮತ್ತು ಶಿಕ್ಷಣ ಆಸಕ್ತರ ಎಂಎಲ್ಎಗಳ ಸಭೆಯನ್ನು ಬಿಜೆಪಿ ಆಯೋಜಿಸಿತ್ತು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ʼಜಗನ್ನಾಥ ಭವನʼದಲ್ಲಿ ಇಂದು ನಡೆದ ಸಭೆಯಲ್ಲಿ ರಾಜ್ಯದ ನೂತನ ಕಾಂಗ್ರೆಸ್ ಸರಕಾರವು ಪಠ್ಯಪುಸ್ತಕ ಪರಿಷ್ಕರಣೆಗೆ ಮುಂದಾಗಿರುವುದರ ಬಗ್ಗೆ ಚರ್ಚಿಸಲಾಯಿತು. ಜುಲೈನಲ್ಲಿ ಅಧಿವೇಶನ ನಡೆಯಲಿದ್ದು, ಅದಕ್ಕೂ ಮುನ್ನ ಸಭೆ ನಡೆಸಲು ಮುಂದಿನ ಕಾರ್ಯಯೋಜನೆ ರೂಪಿಸುವುದರ ಕುರಿತು ತೀರ್ಮಾನಿಸಲಾಯಿತು.

ಸಭೆ ಬಳಿಕ ಮಾತನಾಡಿದ ಮಾಜಿ ಸಚಿವ ಸಿ ಟಿ ರವಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಶಿಕ್ಷಣ ಕ್ಷೇತ್ರದಲ್ಲಿ ಸಮಗ್ರವಾಗಿ ಅವಲೋಕನ ಮಾಡದೆ, ಸಾಧಕ ಬಾಧಕ ಅಧ್ಯಯನ ಮಾಡದೆ, ರಾಜಕೀಯ ಕಾರಣಕ್ಕಾಗಿ ಪೂರ್ವಗ್ರಹ ಪೀಡಿತರಾಗಿ ಕೊಟ್ಟಿರುವ ಪಠ್ಯ ಪರಿಷ್ಕರಣೆ ಕುರಿತ ಹೇಳಿಕೆಯು ಅಸಹಿಷ್ಣು ಭಾವನೆಯಿಂದ ಕೂಡಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಲವು ಮಹನೀಯರ ಪಾಠವನ್ನು ಕೈಬಿಡಬೇಕು ಎಂಬ ಹೇಳಿಕೆ ಕುರಿತು ಸಮಗ್ರವಾಗಿ ಚರ್ಚಿಸಲಾಗಿದೆ. ಶಿಕ್ಷಣ ಕ್ಷೇತ್ರವು ಪೂರ್ವಗ್ರಹಪೀಡಿತ ಮನಸ್ಥಿತಿಯಿಂದ ಹೊರಬರಬೇಕು. ಉತ್ತಮ ನಾಗರಿಕರನ್ನು ಶಿಕ್ಷಣ ತಯಾರು ಮಾಡಬೇಕು ಎಂದು ಅವರು, ಸಮಾನಮನಸ್ಕರ ಸಭೆ ನಡೆಸಿ ಸಲಹೆಗಳನ್ನು ಪಡೆಯಲಾಗುವುದು. ಅದರ ಬಳಿಕ ಮುಂದಿನ ರೂಪುರೇಷೆ ನಿರ್ಧರಿಸಲಾಗುತ್ತದೆ ಎಂದರು.

ಈ ಸುದ್ದಿ ಓದಿದ್ದೀರಾ?:ಧಮ್ಮು, ತಾಕತ್ತು ಇದ್ದರೆ ಅಡ್ಜಸ್ಮೆಂಟ್ ಮಾಡಿಕೊಂಡವರ ಹೆಸರು ಹೇಳಿ: ಸಿ ಟಿ ರವಿಗೆ ಕಾಂಗ್ರೆಸ್ ಸವಾಲು

ಇನ್ನು ಇದೇ ವಿಚಾರವಾಗಿ ಮಾತನಾಡಿದ ಮಾಜಿ ಸಚಿವ ಬಿ ಸಿ ನಾಗೇಶ್, ಪಠ್ಯ ವಿಚಾರದಲ್ಲಿ ದ್ವೇಷದಿಂದ ವರ್ತಿಸುತ್ತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.

ಎನ್‌ಸಿಆರ್‌ಟಿ ಸೂಚನೆ ಮೇರೆಗೆ ನಾವು ಹಿಂದೆ ಪಠ್ಯ ಬದಲಾವಣೆ ಮಾಡಿದ್ದೆವು ಎಂದು ಸ್ಪಷ್ಟಪಡಿಸಿದ ಅವರು, ತಪ್ಪುಗಳನ್ನು ಸರಿಪಡಿಸುವ ಉದ್ದೇಶ ನಮ್ಮದಾಗಿತ್ತು. ಈಗ ದ್ವೇಷದಿಂದ ಅದನ್ನು ಬದಲಾವಣೆ ಮಾಡಿದರೆ ಅದರಿಂದ ಮಕ್ಕಳು, ಪೋಷಕರ ಮೇಲೆ ದುಷ್ಪರಿಣಾಮ ಬೀರಲಿದೆ ಎಂದರು.

ಇವರು ಬದಲಾವಣೆ ಮಾಡಲೇ ಬೇಕೆಂದಿದ್ದರೆ, ಅದನ್ನು ಪೋಷಕರ ಗಮನಕ್ಕೆ ತಂದು ಮಾಡಬೇಕು ಎಂದು ನಾಗೇಶ್ ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...