ಎಸ್‌ಸಿಎಸ್‌ಪಿ/ಟಿಎಸ್‌ಪಿ | ಆಯಾ ವರ್ಷವೇ ಹಣ ಖರ್ಚು ಮಾಡದಿದ್ದರೆ ಶಿಸ್ತು ಕ್ರಮ: ಸಿದ್ದರಾಮಯ್ಯ

Date:

ಇಡೀ ದೇಶದಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ ಮಾಡಿರುವುದು ನಾವು ಮಾತ್ರ. ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿ ಎಸ್‌ಟಿ ಸಮುದಾಯಕ್ಕೆ ಹಣ ಖರ್ಚು ಕೊಡುತ್ತಿರುವುದು ನಮ್ಮ ಸರ್ಕಾರ ಮಾತ್ರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ತಮ್ಮ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರಾಜ್ಯ ಅಭಿವೃದ್ಧಿ ಪರಿಷತ್‌ ಸಭೆಯಲ್ಲಿ ಅವರು ಮಾತನಾಡಿ, “2024-25 ನೇ ಸಾಲಿನಲ್ಲಿ 39121.46 ಕೋಟಿ ಇದ್ದರೆ, ಹಿಂದಿನ ವರ್ಷ 35221.84 ಕೋಟಿ ಇತ್ತು. ಇದರಲ್ಲಿ ಬಿಡುಗಡೆ ವೆಚ್ಚದ ಶೇ.99.64 ಕೋಟಿಯಷ್ಟು ಖರ್ಚಾಗಿದೆ. ಉಳಿದದ್ದು ಏಕೆ ಆಗಿಲ್ಲ” ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

“ಆಯಾಯ ವರ್ಷವೇ ಶೇ.100 ರಷ್ಟು ಖರ್ಚು ಮಾಡಬೇಕು ಎನ್ನುವ ಕಾನೂನು ಮಾಡಿದ್ದು ನಾವೇ. ಖರ್ಚು ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎನ್ನುವ ನಿಯಮವನ್ನೂ ಮಾಡಿದ್ದೇವೆ. ಯಾರು ನಿರ್ಲಕ್ಷ್ಯ ಮಾಡಿದ್ದಾರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ನಿರ್ಲಕ್ಷ್ಯಕ್ಕೆ ಕ್ಷಮೆ ಇಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಎಸ್‌.ಸಿ.ಎಸ್‌.ಪಿ., ಟಿ.ಎಸ್.ಪಿ. ಕಾಯ್ದೆ 2013 ನ್ನು ಜಾರಿಗೆ ತಂದು, ಸರ್ಕಾರದ ಒಟ್ಟಾರೆ ಅಭಿವೃದ್ಧೀ ಆಯವ್ಯಯದ ಶೇ. 24.1 ರಷ್ಟನ್ನು ಈ ಸಮುದಾಯಗಳ ಅಭಿವೃದ್ಧಿಗೆ ವೆಚ್ಚ ಮಾಡಲಾಗುತ್ತಿದೆ. ಶುಕ್ರವಾರ ನಡೆದ ರಾಜ್ಯ ಪರಿಷತ್‌ ಸಭೆಯಲ್ಲಿ 2024-25 ನೇ ಸಾಲಿಗೆ ಎಸ್.ಸಿ.ಎಸ್‌.ಪಿ. / ಟಿಎಸ್‌.ಪಿ. ಅಡಿ ಒಟ್ಟಾರೆ. ರೂ.39,121.46 ಕೋಟಿ ಅನುದಾನ ಒದಗಿಸಲಾಗಿದೆ” ಎಂದು ಹೇಳಿದರು.

“ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಇದು 11% ಅಂದರೆ ರೂ.3897 ಕೋಟಿ ಹೆಚ್ಚಳವಾಗಿದೆ. ಎಸ್‌.ಸಿ.ಎಸ್‌.ಪಿ. ಅಡಿ 27,673.96 ಕೋಟಿ ರೂ. ಹಾಗೂ ಟಿ.ಎಸ್.ಪಿ. ಅಡಿ 11447.50 ಕೋಟಿ ರೂ. ಒದಗಿಸಲಾಗಿದೆ. ಈ ವರ್ಷದ ಕ್ರಿಯಾ ಯೋಜನೆಯಲ್ಲಿ ಮುಖ್ಯವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 8,480 ಕೋಟಿ ರೂ., ಇಂಧನ ಇಲಾಖೆಗೆ 5026 ಕೋಟಿ, ಸಮಾಜ ಕಲ್ಯಾಣ ಇಲಾಖೆಗೆ 4174 ಕೋಟಿ ರೂ., ಕಂದಾಯ ಇಲಾಖೆಗೆ 3403 ಕೋಟಿ ರೂ. , ಗ್ರಾಮೀಣಾಭಿವೃದ್ಧಿ ಇಲಾಖೆಗೆ 3163 ಕೋಟಿ ರೂ. ಒದಗಿಸಲಾಗಿದೆ” ಎಂದು ಹೇಳಿದರು.

“ಕಳೆದ ವರ್ಷ 35221.84 ಕೋಟಿ ರೂ. ಆಯವ್ಯಯ ಹಂಚಿಕೆಗೆ ಎದುರಾಗಿ ಶೇ. 97.23 ರಷ್ಟು ಹಾಗೂ ಬಿಡುಗಡೆಗೆ ಎದುರಾಗಿ ಶೇ. 99.64 ರಷ್ಟು ಸಾಧನೆಯಾಗಿದೆ. ಈ ಅನುದಾನ ಯಾವ ಕಾರಣಕ್ಕೂ ಬಳಕೆಯಾಗದೆ ಉಳಿಕೆ ಆಗಬಾರದು. ಅದೇ ವರ್ಷ ವೆಚ್ಚವಾಗಬೇಕು” ಎಂದು ಸೂಚಿಸಿದರು.

“ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ನಿಗಮಗಳಲ್ಲಿ ಹಣ ವೆಚ್ಚವಾಗಿಲ್ಲ. ಇದಕ್ಕೆ ಶಾಸಕರು ಪಟ್ಟಿ ಕೊಡಲಿಲ್ಲ ಎಂಬ ಕಾರಣ ನೀಡುತ್ತಾರೆ. ನಿಗಮಗಳ ಅಧ್ಯಕ್ಷರು ಹಾಗೂ ಸಂಬಂಧಿಸಿದ ಸಚಿವರು, ಶಾಸಕರು ಫಲಾನುಭವಿಗಳ ಪಟ್ಟಿ ಒದಗಿಸುವಂತೆ ಮನವೊಲಿಸಬೇಕು” ಎಂದರು.

“ಈ ಯೋಜನೆಗಳ ಮೌಲ್ಯಮಾಪನದಿಂದ ಶೇ. 65 ರಷ್ಟು ಉಪಯೋಗವಾಗಿರುವುದು ಕಂಡು ಬರುತ್ತದೆ. ಸೆಕ್ಷನ್‌ 7 (ಡಿ) ಕೈಬಿಡಲಾಗಿದೆ. ಇದರಿಂದಾಗಿ ಈ ಯೋಜನೆಯ ಸಂಪೂರ್ಣ ವೆಚ್ಚ ಈ ಸಮುದಾಯದವರಿಗೇ ಬಳಕೆಯಾಗಲಿದೆ” ಎಂದು ಹೇಳಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ. ಮಹದೇವಪ್ಪ, ಸಚಿವರಾದ ಹೆಚ್.ಕೆ.ಪಾಟೀಲ್, ಪ್ರಿಯಾಂಕ್‌ ಖರ್ಗೆ, ಡಾ. ಎಂ.ಸಿ. ಸುಧಾಕರ್‌, ಪರಿಷತ್ತಿನ ಸದಸ್ಯರಾಗಿರುವ ಶಾಸಕರಾದ ಪ್ರಸಾದ್ ಅಬ್ಬಯ್ಯ, ಬಸಂತಪ್ಪ, ಶ್ರೀನಿವಾಸ್,ನರೇಂದ್ರಸ್ವಾಮಿ, ಕೃಷ್ಣಾನಾಯಕ್ , ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಸಂಸದರಾದ ಸುನಿಲ್ ಬೋಸ್ ಪ್ರಕಾಶ್ ಸೇರಿದಂತೆ ಅಧಿಕಾರಿ ವರ್ಗ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...