ಎಸ್.ಸಿ.ಎಸ್.ಪಿ/ಟಿ.ಎಸ್‌.ಪಿ ಯೋಜನೆ ಅನುದಾನ ದುರ್ಬಳಕೆಗೆ ಅವಕಾಶ ನೀಡಲ್ಲ: ಸಚಿವ ಮಹದೇವಪ್ಪ

Date:

  • ಛಲವಾದಿ ಟಿ ನಾರಾಯಣಸ್ವಾಮಿ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರ ಉತ್ತರ
  • ದುರ್ಬಳಕೆ ತಡೆಯುವ ಉದ್ದೇಶದಿಂದಲೇ ಕಾಯ್ದೆಯ ಸೆಕ್ಷನ್ 7 (ಡಿ) ಕೈಬಿಡಲು ನಿರ್ಧಾರ

ರಾಜ್ಯ ಸರ್ಕಾರವು ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಗೆ ಮೀಸಲಿಟ್ಟಿರುವ ಅನುದಾನವನ್ನು ಯಾವುದೇ ಕಾರಣಕ್ಕೂ ದುರ್ಬಳಕೆ ಆಗಲು ಅವಕಾಶ ನೀಡುವುದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಸ್ಪಷ್ಟಪಡಿಸಿದರು.

ಅವರು ಇಂದು ವಿಧಾನಪರಿಷತ್‌ನಲ್ಲಿ ಸದಸ್ಯ ಛಲವಾದಿ ಟಿ ನಾರಾಯಣ ಸ್ವಾಮಿ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆ 62 (562)ಕ್ಕೆ ಉತ್ತರಿಸಿದರು.

“ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅಧಿನಿಯಮ 2013 ಮತ್ತು ನಿಯಮಗಳು 2017 ರಲ್ಲಿ ಪ.ಜಾತಿ ಮತ್ತು ಪಂಗಡದ ಜನರಿಗೆ ನೇರವಾಗಿ ಪ್ರಯೋಜನವಾಗುವ ಕಾರ್ಯಕ್ರಮಗಳಿಗೆ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅನುದಾನವನ್ನು ಹಂಚಿಕೆ ಮಾಡಿ ಅನುಷ್ಠಾನಗೊಳಿಸಲು ಅವಕಾಶವಿದ್ದು ಈ ಅನುದಾನವನ್ನು ಯಾವುದೇ ಸಂದರ್ಭದಲ್ಲೂ ಅನ್ಯ ಉದ್ದೇಶಕ್ಕಾಗಿ ಬಳಸುವುದಿಲ್ಲ ಹಾಗೂ ಕಾಯ್ದೆಯ ಉಲ್ಲಂಘನೆಗೆ ಅವಕಾಶ ನೀಡುವುದಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

”ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿ ಗ್ಯಾರಂಟಿ ಯೋಜನೆಗಳಿಗಾಗಿ, ಗೃಹಲಕ್ಷ್ಮೀ ಯೋಜನೆಗೆ 5075 ಕೋಟಿ ರೂ, ಅನ್ನಬಾಗ್ಯ ಯೋಜನೆಗೆ 2779.50 ಕೋಟಿ ರೂ, ಗೃಹಜ್ಯೋತಿ ಯೋಜನೆಯಡಿ 2410 ಕೋಟಿ ರೂ, ಶಕ್ತಿ ಯೋಜನೆಗೆ 812 ಕೋಟಿ ರೂ, ಯುವನಿಧಿ ಯೋಜನೆಗೆ 67.50 ಕೋಟಿ ರೂ ಒದಗಿಸಲಾಗಿದ್ದು, ಈ ಮೊತ್ತವನ್ನು ಪ.ಜಾತಿ/ಪಂಗಡದವರಿಗೆ ಉಪಯೋಗಿಸುತ್ತಿರುವುದರಿಂದ ಸದರಿ ಅನುದಾನದ ದುರ್ಬಳಕೆ ಪ್ರಶ್ನೆ ಉದ್ಭವಿಸುವುದಿಲ್ಲ” ಎಂದು ತಿಳಿಸಿದರು.

“ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅನುದಾನದಲ್ಲಿ ದುರ್ಬಳಕೆ ತಡೆಯುವ ಉದ್ದೇಶದಿಂದಲೇ ಕಾಯ್ದೆಯ ಸೆಕ್ಷನ್ 7 (ಡಿ) ಯನ್ನು ಕೈಬಿಡಲು ನಿನ್ನೆ ನಡೆದ ಕ್ಯಾಬಿನೆಟ್ ಸಭೆಯಲ್ಲಿ ನಿರ್ಧರಿಸಲಾಗಿದೆ” ಎಂದು ಸಚಿವರು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂಚೆ- ಪಾರ್ಸೆಲುಗಳ ತೆರೆಯುವ ನಿರಂಕುಶ ಅಧಿಕಾರ ಅಪಾಯಕರ

ಪ.ಜಾತಿ ಮತ್ತು ಪ.ವರ್ಗಗಳ ಕಲ್ಯಾಣಕ್ಕಾಗಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಲ್ಲಿ ಮೀಸಲಿಟ್ಟ ಅನುದಾನದಲ್ಲಿ 2023-24 ನೇ ಸಾಲಿನಲ್ಲಿ 11 ಸಾವಿರಕ್ಕೂ ಅಧಿಕ ಮೊತ್ತವನ್ನು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿದೆ ಎಂಬ ವಿಧಾನಪರಿಷತ್ ಸದಸ್ಯ ಛಲವಾದಿ ಟಿ ನಾರಾಯಣ ಸ್ವಾಮಿ ಅವರ ಪ್ರಶ್ನೆಗೆ ಪೂರಕವಾಗಿ ಸದಸ್ಯರಾದ ತೇಜಸ್ವಿನಿಗೌಡ, ಭೋಜೇಗೌಡ, ಕೋಟ ಶ್ರೀನಿವಾಸ ಪೂಜಾರಿ, ತಿಪ್ಪೇಸ್ವಾಮಿ, ಶಾಂತಾರಾಮ್, ರವಿಕುಮಾರ್ ದನಿಗೂಡಿಸಿದರು.

ಸರ್ಕಾರದ ಉತ್ತರದ ಕುರಿತು ಆಕ್ಷೇಪ ವ್ಯಕ್ತಪಡಿಸಿದ ವಿರೋಧ ಪಕ್ಷಗಳ ಸದಸ್ಯರು ಸದನದ ಬಾವಿಗಳಿದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಇದರಿಂದಾಗಿ ಸದನವನ್ನು 2 ಬಾರಿ 10 ನಿಮಿಷಗಳ ಕಾಲ ಮುಂದೂಡಲಾಯಿತು. ಅಂತಿಮವಾಗಿ ಈ ಕುರಿತು ಸೋಮವಾರ ಅರ್ಧ ಗಂಟೆಯ ಚರ್ಚೆಗೆ ಅವಕಾಶ ನೀಡುವುದಾಗಿ ಸಭಾಪತಿಗಳು ಅನುಮತಿ ನೀಡುವ ಮೂಲಕ ವಿರೋಧಪಕ್ಷಗಳ ಪ್ರತಿಭಟನೆಯನ್ನು ತಣ್ಣಗಾಗಿಸಿದರು.

ಸರ್ಕಾರದ ಪರವಾಗಿ ಸಚಿವ ಪ್ರಿಯಾಂಕ ಖರ್ಗೆ, ಕೆ.ಎಚ್. ಮುನಿಯಪ್ಪ ಮಾತನಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...