ಸಂಸದರಿಗೆ ನೀಡಿದ ಸಂವಿಧಾನದ ಪ್ರತಿಗಳಲ್ಲಿ ‘ಜಾತ್ಯತೀತ’, ‘ಸಮಾಜವಾದಿ’ ಪದಗಳು ಕಣ್ಮರೆ: ಅಧೀರ್

Date:

ನೂತನ ಸಂಸತ್ ಭವನದ ಉದ್ಘಾಟನಾ ದಿನದಂದು ಉಭಯ ಸದನಗಳ ಸಂಸದರಿಗೆ ನೀಡಿದ ಸಂವಿಧಾನದ ಪ್ರತಿಗಳಲ್ಲಿನ ಪ್ರಸ್ತಾವನೆಯಲ್ಲಿ ‘ಜಾತ್ಯತೀತ’ ಮತ್ತು ‘ಸಮಾಜವಾದಿ’ ಪದಗಳು ಕಣ್ಮರೆಯಾಗಿವೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಆರೋಪಿಸಿದ್ದಾರೆ.

ಆದಾಗ್ಯೂ, ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಈ ಬಗ್ಗೆ ಮಾತನಾಡಿ, ಸಂವಿಧಾನದ ಪ್ರಸ್ತಾವನೆಯು ಮೂಲ ಆವೃತ್ತಿಯನ್ನು ಹೊಂದಿದ್ದು, ಸಂವಿಧಾನಾತ್ಮಕ ತಿದ್ದುಪಡಿಗಳ ನಂತರ ಈ ಉಲ್ಲೇಖಿತ ನಿರ್ದಿಷ್ಟ ಪದಗಳನ್ನು ಸೇರಿಸಲಾಯಿತು. ತಿದ್ದುಪಡಿ ಪ್ರಕ್ರಿಯೆಯ ಮೂಲಕ ಸಂವಿಧಾನದ ಪ್ರಸ್ತಾವನೆಗೆ ಸೇರಿಸಲಾದ ಹೆಚ್ಚುವರಿ ಪದಗಳನ್ನು ಈ ಪ್ರತಿಗಳು ಒಳಗೊಂಡಿಲ್ಲ ಎಂದು ಹೇಳಿದರು.

‘ಇದು ಸಂವಿಧಾನದ ಮೂಲ ಪ್ರಸ್ತಾವನೆಯ ಪ್ರಕಾರವಾಗಿದೆ. ತಿದ್ದುಪಡಿಗಳನ್ನು ನಂತರ ಮಾಡಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಅಧೀರ್ ರಂಜನ್ ಚೌಧರಿ, ಈ ಪದಗಳನ್ನು ‘ಜಾಣತನದಿಂದ ತೆಗೆದುಹಾಕಲಾಗಿದೆ’ ಎಂದು ದೂರಿದ ಅವರು, ಬಿಜೆಪಿ ಸರ್ಕಾರದ ಉದ್ದೇಶಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದರು.

‘ನಾವು ಹೊಸ ಸಂಸತ್ ಕಟ್ಟಡಕ್ಕೆ ಕೊಂಡೊಯ್ದ ಸಂವಿಧಾನದ ಪ್ರಸ್ತಾವನೆಯ ಪ್ರತಿಯಲ್ಲಿ ಜಾತ್ಯತೀತ ಮತ್ತು ಸಮಾಜವಾದಿ ಎನ್ನುವ ಪದಗಳಿಲ್ಲ. ಅವುಗಳನ್ನು ಜಾಣತನದಿಂದ ತೆಗೆದುಹಾಕಲಾಗಿದೆ. ಇದು ಗಂಭೀರ ವಿಷಯ ಮತ್ತು ನಾವು ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸುತ್ತೇವೆ. ಈ ಪದಗಳನ್ನು 1976ರಲ್ಲಿ ಸಂವಿಧಾನಕ್ಕೆ ಸೇರಿಸಲಾಯಿತು ಎಂಬುದು ನನಗೆ ತಿಳಿದಿದೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ತೆಲಂಗಾಣದ ಬಗ್ಗೆ ಮೋದಿ ಅವಹೇಳನ: ರಾಹುಲ್ ಗಾಂಧಿ ಆಕ್ರೋಶ

‘ಇದು ಗಂಭೀರ ಸಮಸ್ಯೆಯಾಗಿದೆ. ಅವರ ಹೃದಯದಲ್ಲಿ ಈ ಬಗ್ಗೆ ಸ್ಪಷ್ಟತೆಯಿಲ್ಲದ ಕಾರಣ ನಾನು ಅವರ ಉದ್ದೇಶಗಳ ಬಗ್ಗೆ ಅನುಮಾನಿಸುತ್ತೇನೆ. ಯಾರಿಗಾದರೂ ಸಂವಿಧಾನದ ಪ್ರತಿಯನ್ನು ನೀಡುವುದೇ ಆದರೆ, ಅದನ್ನು ಇಂದಿನ ಆವೃತ್ತಿಯಲ್ಲಿರುವಂತೆಯೇ ನೀಡಬೇಕು’ ಎಂದು ಹೇಳಿದರು.

ಸಿಪಿಎಂನ ಬಿನೋಯ್ ವಿಶ್ವಂ ಅವರು ಸಂವಿಧಾನದ ಪ್ರಸ್ತಾವನೆಯಿಂದ ಈ ಪದಗಳನ್ನು ತೆಗೆದುಹಾಕುವುದು ‘ಅಪರಾಧ’ ಎಂದು ತಿಳಿಸಿದ್ದಾರೆ.

ಎಡಪಕ್ಷಗಳು ಮತ್ತು ಇತರ ಪಕ್ಷಗಳು ಸೇರಿದಂತೆ ಹಲವಾರು ವಿರೋಧ ಪಕ್ಷದ ಸಂಸದರು ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸುವ ಸಾಧ್ಯತೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...