ವಿಧಾನಸೌಧದೊಳಗೆ ಖಾಸಗಿ ವ್ಯಕ್ತಿ ಪ್ರವೇಶ ಹಿನ್ನೆಲೆ : ಹೈ ಅಲರ್ಟ್ ಆದ ಭದ್ರತಾ ಸಿಬ್ಬಂದಿ

Date:

  • ಭದ್ರತೆ ಪರಿಶೀಲನೆ ನಡೆಸಿದ ಸ್ಪೀಕರ್ ಯು ಟಿ ಖಾದರ್
  • 224 ಶಾಸಕರ ಫೋಟೋ ಹಿಡಿದು ಪರಿಶೀಲಿಸಿದ ಮಾರ್ಷಲ್‌ಗಳು

ಕಳೆದ ಶುಕ್ರವಾರ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆಯ ವೇಳೆ ಸದನ ಪ್ರವೇಶಿಸಿದ್ದ ಖಾಸಗಿ ವ್ಯಕ್ತಿಯೋರ್ವನ ಪ್ರಕರಣದ ಬಳಿಕ ಇಡೀ ವಿಧಾನಸೌಧದ ಚಿತ್ರಣವನ್ನೇ ಸೋಮವಾರ(ಜು.10) ಬದಲಿಸಿದೆ.

ಖುದ್ದು ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಅವರೇ, ‘ಶಕ್ತಿಕೇಂದ್ರ’ದ ಎಲ್ಲ ದ್ವಾರಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಗತ್ಯ ಭದ್ರತಾ ಕ್ರಮ ಜರಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದಾದ ಬಳಿಕ ವಿಧಾನಸೌಧ ಆವರಣ ಖಾಕಿ ಕಣ್ಗಾವಲಿಂದ ಸಾಗುತ್ತಿದೆ.

ಮೊನ್ನೆ ಮೊನ್ನೆಯವರೆಗೂ ಜನರಿಂದ ಸದಾ ಗಿಜಿಗುಡುತ್ತಿದ್ದ ವಿಧಾನಸೌಧದ ಆವರಣ ಇಂದು ಸಂಪೂರ್ಣ ಖಾಲಿಖಾಲಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಜೆಟ್ ಮಂಡನೆಯ ದಿನ ಮೊಳಕಾಲ್ಮೂರು ಶಾಸಕರ ಹೆಸರಿನಲ್ಲಿ ವಿಧಾನಸಭೆ ಪ್ರವೇಶಿಸಿದ ವ್ಯಕ್ತಿಯೋರ್ವನಿಂದ ಆದ ಭ್ರದತಾ ಲೋಪ ಇಡೀ ವಿಧಾನಸೌಧದ ಆವರಣವನ್ನೇ ಬದಲಾಯಿಸಿಬಿಟ್ಟಿದೆ. ಇದರ ಪರಿಣಾಮ ವಿಧಾನಸೌಧದ ದಶದಿಕ್ಕುಗಳಲ್ಲೂ ಪೊಲೀಸ್ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ. ನಾಲ್ಕೂ ದ್ವಾರಗಳಲ್ಲಿ ಮೆಟಲ್ ಡಿಟೆಕ್ಟರ್ ಪರಿಶೀಲನೆ ನಡೆಸಲಾಗುತ್ತಿದೆ. ವಿಧಾನಸೌಧದ ಸಿಬ್ಬಂದಿಗಳನ್ನೂ ಒಳಗೊಂಡಂತೆ ಶಕ್ತಿ ಕೇಂದ್ರ ಪ್ರವೇಶಿಸುವ ಎಲ್ಲರನ್ನೂ ಪೊಲೀಸರು ಹಾಗೂ ಮಾರ್ಷಲ್‌ಗಳು ಬಿಗಿ ತಪಾಸಣೆ ನಡೆಸಿ ಪ್ರವೇಶಾವಕಾಶ ಕಲ್ಪಿಸಿದರು.

ಈ ನಡುವೆಯೇ ವಿಧಾನಸೌಧದ ಮಹಿಳಾ ಸಿಬ್ಬಂದಿಯೋರ್ವರು ಬ್ಯಾಗ್‌ನಲ್ಲಿ ಚಾಕು ತಂದಿದ್ದರು. ಭದ್ರತಾ ಸಿಬ್ಬಂದಿ ಆ ಬಗ್ಗೆ ಅವರಿಂದ ಮಾಹಿತಿ ಪಡೆದು ಅದನ್ನು ವಶಕ್ಕೆ ತೆಗೆದುಕೊಂಡು, ಅವರನ್ನು ಒಳಗೆ ಕಳುಹಿಸಿದರು.

ಈ ಬೆಳವಣಿಗೆ ನಡುವೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್, ನಗರ ಪೊಲೀಸ್ ಆಯುಕ್ತ ದಯಾನಂದ್ ಜೊತೆಗೂಡಿ ಕೆಲ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ವಿಧಾನಸೌಧದ ಎಲ್ಲ ದ್ವಾರಗಳ ಪರಿಶೀಲನೆ ನಡೆಸಿದರು. ಹಾಗೆಯೇ ಹೈಕೋರ್ಟ್ ಗೇಟ್ ದ್ವಾರ ಹಾಗೂ ಕೆಂಗಲ್ ಗೇಟ್ ಬಳಿ ಕೆಟ್ಟು ನಿಂತಿರುವ ಮೆಟಲ್ ಸ್ಕ್ಯಾನರ್ ಗಳನ್ನು ಸರಿಪಡಿಸುವಂತೆ ಸೂಚನೆ ನೀಡಿದರು. ಹಾಗೆಯೇ ಅಗತ್ಯವಿರುವ ಕಡೆ ಭದ್ರತೆ ಹೆಚ್ಚಿಸುವಂತೆ ಸೂಚಿಸಿದರು. ಜೊತೆಗೆ ಜನಸ್ನೇಹಿ ಪರಿಣಾಮಕಾರಿ ಭದ್ರತಾ ವ್ಯವಸ್ಥೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು‌.

ಇವೆಲ್ಲದರ ನಡುವೆ ವಿಧಾನಸಭೆ ಆವರಣಕ್ಕೆ ಶಾಸಕರು ಪ್ರವೇಶಿಸುವ ಬಾಗಿಲುಗಳ ಬಳಿಯ ಭದ್ರತೆಗೂ ಬಿಗಿಯಾಗಿತ್ತು. ಸದನ ಪ್ರವೇಶಿಸುವ ಶಾಸಕರ ಗುರುತಿನ ಚೀಟಿ ಪ್ರದರ್ಶನ ಕಡ್ಡಾಯ ಮಾಡಲಾಗಿತ್ತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸ್ಪೀಕರ್ ಖಾದರ್, ಕನ್ನಡ ಮತ್ತು ಬೆತ್ತಲಾದ ಬಿಜೆಪಿ

ಹಾಗೆಯೇ ಭದ್ರತಾ ಸಿಬ್ಬಂದಿಗೂ ಎಲ್ಲ ಶಾಸಕರ ಫೋಟೋ ಹಾಗೂ ಕ್ಷೇತ್ರದ ಮಾಹಿತಿ ಇರುವ ಪುಸ್ತಿಕೆಯನ್ನು ನೀಡಲಾಗಿದ್ದು, ಅದನ್ನು ಪರಿಶೀಲಿಸಿಯೇ ಒಳಬಿಡಲು ಸೂಚಿಸಲಾಗಿತ್ತು. ಹೀಗೆ ನಾಲ್ಕು ದಿನಗಳ ಹಿಂದಾದ ಭದ್ರತಾ ಲೋಪದ ಪರಿಣಾಮ ವಿಧಾನಸೌಧ ಖಾಕಿ ಕಣ್ಗಾವಲಲ್ಲಿ ಬಿಗಿ ಭದ್ರತೆಯಿಂದ ನಿಲ್ಲುವಂತಾಗಿದೆ.

ಸದನದಲ್ಲಿ ವಿಷಯ ಪ್ರಸ್ತಾಪಿಸಿದ ಯು ಟಿ ಖಾದರ್

ಘಟನೆಯ ಬಗ್ಗೆ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿದ ಸ್ಪೀಕರ್ ಯು ಟಿ ಖಾದರ್, ಶಾಸಕಿ ಕರೆಮ್ಮ ಅವರಿಗೆ ಹಂಚಿಕೆ ಮಾಡಲಾಗಿದ್ದ ಆಸನ ಸಂಖ್ಯೆ 199ರಲ್ಲಿ ಮೊಳಕಾಲ್ಮೂರು ಎಂಎಲ್​ಎ ಅಂತ ಹೇಳಿಕೊಂಡು ಬಂದು ಅಪರಿಚಿತ ವ್ಯಕ್ತಿ ಕೂತಿದ್ದರು. ಆದರೆ ಆ ಕ್ಷೇತ್ರದಿಂದ ಎಸ್‌ ವೈ ಗೋಪಾಲಕೃಷ್ಣ ಆಯ್ಕೆ ಆಗಿದ್ದರು. ಬಳಿಕ ಅನುಮಾನಗೊಂಡು ಅವರನ್ನು ವಿಚಾರಣೆ ನಡೆಸಿದಾಗ ಅವರು ಚಿತ್ರದುರ್ಗದ 76 ವರ್ಷದ ತಿಪ್ಪೇರುದ್ರಪ್ಪ ಎಂದು ತಿಳಿದುಬಂತು. ಬಳಿಕ ಅವರನ್ನು ಪೊಲೀಸರ ವಶಕ್ಕೆ ನೀಡಿ, ವಿಚಾರಣೆ ಕೂಡ ಮಾಡಲಾಗಿದೆ. ಈ ಘಟನೆಯಿಂದಾಗಿ, ದೇವರೇ ಅವರ ಮೂಲಕ ನಮ್ಮ ಕಣ್ಣನ್ನು ತೆರೆಸಿದ್ದಾರೆ. ಎಲ್ಲ ಶಾಸಕರು ಒಳಗೆ ಬರುವ ಸಂದರ್ಭದಲ್ಲಿ ಅಧಿಕಾರಿಗಳ ಜೊತೆಗೆ ಸದ್ವರ್ತನೆ ತೋರುವಂತೆ ಹಾಗೂ ಭದ್ರತೆಯ ಬಗ್ಗೆ ಜಾಗರೂಕರಾಗಿರುವಂತೆ ಸೂಚಿಸಿದರು.

ಅದೇ ರೀತಿ ಈ ಬಗ್ಗೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ವಿಧಾನಸೌಧ, ಹೈಕೋರ್ಟ್ ಹಾಗೂ ರಾಜಭವನವನ್ನು ಸೇರಿಸಿಕೊಂಡು ನೂತನ ಭದ್ರತಾ ತಂತ್ರಜ್ಞಾನವನ್ನು ಅಳವಡಿಸುವ ಬಗ್ಗೆ ಮಾತುಕತೆ ನಡೆಸಲಾಗಿದೆ. ಎಲ್ಲರ ಸಹಕಾರವನ್ನು ಕೋರುವುದಾಗಿ ಸ್ಪೀಕರ್ ಯು ಟಿ ಖಾದರ್ ಅಧಿವೇಶನದಲ್ಲಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...