ದೇಶದ್ರೋಹ ಕಾನೂನು ಹೋಯ್ತು; ಸರ್ಕಾರ ದ್ರೋಹ ಕಾನೂನು ಬಂತು

Date:

ಬ್ರಿಟಿಷರು ಜಾರಿಗೆ ತಂದಿದ್ದ, ಸ್ವಾತಂತ್ರ್ಯಾ ನಂತರವು ಮುಂದುವರೆದಿದ್ದ ಕಾನೂನುಗಳಲ್ಲಿ ಒಂದಾಗಿದ್ದ ‘ದೇಶದ್ರೋಹ’ ಕಾನೂನನ್ನು ತೆಗೆದು ಹಾಕುತ್ತಿರುವುದಾಗಿ ಕೇಂದ್ರ ಸರ್ಕಾರ ಹೇಳಿಕೊಂಡಿದೆ. ಆದರೆ, ಆ ಕಾನೂನಿನ ಹೆಸರನ್ನು ಬದಲಿಸಿ, ಮತ್ತಷ್ಟು ಕಠಿಣವಾಗಿ ಮತ್ತೊಂದೆಡೆ ಅದೇ ಕಾನೂನನ್ನು ಜಾರಿಗೊಳಿಸಲು ಮುಂದಾಗಿದೆ. ಅದಕ್ಕಾಗಿ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ (ಐಪಿಸಿ) 124ಎ ಅಡಿಯಲ್ಲಿ ಕೆಲವು ಚಟುವಟಿಕೆಗಳನ್ನು ದೇಶದ್ರೋಹವೆಂದು ಗುರುತಿಸಲಾಗಿತ್ತು. ಅಂತೆಯೇ ಕಲವು ಚಟುವಟಿಕೆಗಳನ್ನು ಅಪರಾಧವಲ್ಲ ಎಂದು ಪರಿಗಣಿಸಲಾಗಿತ್ತು. ಆದರೆ, ಆ ಸೆಕ್ಷನ್‌ ಅನ್ನು ತೆಗೆದು ಭಾರತೀಯ ನ್ಯಾಯ ಸಂಹಿತೆಯ 150ನೇ ಸೆಕ್ಷನ್‌ಗೆ ಸೇರಿಸಲಾಗಿದೆ. ದೇಶದ್ರೋಹ ಎಂಬ ಪದವನ್ನು ‘ಭಾರತದ ಒಗ್ಗಟ್ಟು, ಸಾರ್ವಭೌಮತೆ ಮತ್ತು ಏಕತೆಗೆ ಧಕ್ಕೆ ತರುವಂತಹ ಕೃತ್ಯಗಳು’ ಎಂದು ಬದಲಿಸಲಾಗಿದೆ.

ಐಪಿಸಿ ಸೆಕ್ಷನ್‌ 124ಎ ಅಡಿಯಲ್ಲಿ ವಿವರಿಸುವ ಕೃತ್ಯಗಳನ್ನು ‘ದೇಶದ್ರೋಹ’ದ ಕೃತ್ಯಗಳು ಎಂದು ಕರೆಯಲಾಗುತ್ತಿದೆ. ಈ ಸೆಕ್ಷನ್‌ನಲ್ಲಿ, ಲಿಖಿತ, ಮೌಖಿಕ, ಸಂಜ್ಞೆ ಅಥವಾ ಪ್ರದರ್ಶನದ ಮೂಲಕ ಭಾರತ ಸರ್ಕಾರದ ವಿರುದ್ಧ ದ್ವೇಷ ಬಿತ್ತುವ, ಪ್ರಚೋದಿಸುವ ಯತ್ನಗಳಷ್ಟೇ ಶಿಕ್ಷಾರ್ಹ ಅಪರಾಧವಾಗಿದ್ದವು. ಸರ್ಕಾರವನ್ನು ಟೀಕಿಸುವುದು, ಸರ್ಕಾರದ ವಿರುದ್ಧ ಪ್ರತಿಭಟಿಸುವುದು, ಸರ್ಕಾರ ಕ್ರಮಗಳನ್ನು ವಿಮರ್ಶೆ ಮಾಡುವುದು ಅಪರಾಧಗಳಲ್ಲ ಎಂದು ಹೇಳಿತ್ತು. ಶಿಕ್ಷಾರ್ಹ ಅಪರಾಧವೆಂದು ಗುರುತಿಸಲಾದ ಕೃತ್ಯಗಳಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ಅಥವಾ ಮೂರು ವರ್ಷ ಜೈಲು ಮತ್ತು ದಂಡ ವಿಧಿಸಲು ಅವಕಾಶವಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಐಪಿಸಿ ಸೆಕ್ಷನ್‌ 124ಎ ಅನ್ನು ಕಿತ್ತುಹಾಕಲಾಗಿದ್ದು, ಭಾರತೀಯ ನ್ಯಾಯ ಸಂಹಿತೆಯ 150ನೇ ಸೆಕ್ಷನ್‌ಗೆ ಸೇರಿಸಲು ಮುಂದಾಗಿದೆ. 150ನೇ ಸೆಕ್ಷನ್‌ಗೆ ಸೇರಿಸಲು ಉದ್ದೇಶಿಸಿರುವ ಪ್ರಸ್ತಾವಿತ ಮಸೂದೆಯು ಸರ್ಕಾರದ ಕ್ರಮಗಳ ವಿರುದ್ಧದ ಟೀಕೆ ಮತ್ತು ಒತ್ತಾಯಗಳನ್ನೂ ‘ಭಾರತದ ಒಗ್ಗಟ್ಟು, ಸಾರ್ವಭೌಮತೆ ಮತ್ತು ಏಕತೆಗೆ ಧಕ್ಕೆ ತರುವಂತಹ ಕೃತ್ಯಗಳು’ (ಹಿಂದಿನ ಹೆಸರಿನಂತೆ ದೇಶದ್ರೋಹ) ಎಂದು ವಿವರಿಸಲಾಗಿದೆ.

ಪ್ರತ್ಯೇಕತಾವಾದಗಳನ್ನು ಪ್ರೋತ್ಸಾಹಿಸುವುದು, ಸಶಸ್ತ್ರ ಬಂಡಾಯಗಳು ಹಾಗೂ ಭಾರತದ ಏಕತೆಗೆ ಧಕ್ಕೆ ತರುವ ಚಟುವಟಿಕೆಗಳು ಮಾತ್ರವಲ್ಲದೆ, ಸರ್ಕಾರಕ್ಕೆ ಧಕ್ಕೆ ತರುವಂತಹ ಚಟುವಟಿಕೆಗಳು ಅಪರಾಧ ಕೃತ್ಯಗಳು ಎಂದು ಸೆಕ್ಷನ್ 150 ಅಡಿಯಲ್ಲಿ ಹೇಳಲಾಗಿದೆ. ಈ ಚಟುವಟಿಕೆಗಳು ಲಿಖಿತ, ಮೌಖಿಕ, ಸಂಜ್ಞೆ, ಪ್ರದರ್ಶನ, ವಿದ್ಯುನ್ಮಾನ ಸಂವಹನ ಅಥವಾ ಆರ್ಥಿಕ ರೂಪದಲ್ಲಿ ಇರಬಹುದು. ಇಂತಹ ಕೃತ್ಯಗಳಿಗೆ ಜೀವಿತಾವಧಿ ಶಿಕ್ಷೆ ಅಥವಾ ಗರಿಷ್ಠ ಏಳು ವರ್ಷಗಳ ಸೆರೆವಾಸ, ಜೊತೆಗೆ, ದಂಡ ವಿಧಿಸಲು ಅವಕಾಶ ನೀಡುತ್ತದೆ.

“ಪ್ರಸ್ತುತ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರವು, ಸರ್ಕಾರದ ವಿರುದ್ಧ ಪ್ರತಿಭಟಿಸುವುದೂ ಕೂಡ ‘ಸರ್ಕಾರಕ್ಕೆ ಧಕ್ಕೆ’ ಎಂದೇ ಭಾವಿಸುತ್ತಿದೆ. ದೆಹಲಿಯಲ್ಲಿ ನಡೆದ ರೈತ ಹೋರಾಟವನ್ನೂ ಮತ್ತು ಹೋರಾಟಗಾರರನ್ನು ಪ್ರತ್ಯೇಕತಾವಾದಿಗಳು ಎಂದು ಈ ಸರ್ಕಾರ ಕರೆದಿತ್ತು. ತನ್ನ ವಿರುದ್ಧ ಪ್ರತಿಭಟಿಸುವುದನ್ನೇ ದೇಶದ್ರೋಹ ಅಥವಾ ಸರ್ಕಾರಕ್ಕೆ ಧಕ್ಕೆ ಎಂದು ಈ ಸರ್ಕಾರ ಹೇಳುತ್ತಿದೆ. ಅದಕ್ಕಾಗಿ, ಸಾಮಾಜಿಕ ಹಾಗೂ ಮಾನವ ಹಕ್ಕುಗಳ ಹೋರಾಟಗಾರರನ್ನೇ ಈಗಾಗಲೇ ಬಂಧಿಸಿ, ಜೈಲಿನಲ್ಲಿಡುತ್ತಿದೆ. ಹೀಗೆ, ಕೇಂದ್ರ ಸರ್ಕಾರವು ಇಷ್ಟು ದಿನ ತನ್ನ ವಿರುದ್ಧದ ಪ್ರತಿಭಟನೆಗಳು ಮತ್ತು ಟೀಕೆಗಳನ್ನು ಅಪ್ರಜಾತಾಂತ್ರಿಕ ಮತ್ತು ಸರ್ವಾಧಿಕಾರಿಯಾಗಿ ಹತ್ತಿಕ್ಕುತ್ತಿದ್ದ ತನ್ನ ಧೋರಣೆಯನ್ನು ಕಾನೂನುಬದ್ದಗೊಳಿಸುವುದರ ಸ್ಪಷ್ಟ ನಿದರ್ಶನವಾಗಿದೆ” ಎಂದು ಸಾಮಾಜಿಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...