ಆಯ್ದ 10 ಗ್ರಾ.ಪಂ. ಅರಿವು ಕೇಂದ್ರಗಳಲ್ಲಿ ಬ್ರಿಟಿಷ್ ಕೌನ್ಸಿಲ್ ಕಾರ್ನರ್ ಕಾರ್ಯಕ್ರಮ: ಪ್ರಿಯಾಂಕ್‌ ಖರ್ಗೆ

Date:

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಬ್ರಿಟಿಷ್ ಕೌನ್ಸಿಲ್ ನಡುವೆ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಮವಾರ ಬೆಂಗಳೂರಿನಲ್ಲಿ ʼಬ್ರಿಟಿಷ್ ಕೌನ್ಸಿಲ್ ಕಾರ್ನರ್ʼಗೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಸಚಿವರು, “ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ಲಭ್ಯವಿರುವ ಸೌಲಭ್ಯಗಳಿಗೆ ಮತ್ತೊಂದು ಗರಿ ಸೇರ್ಪಡೆಗೊಂಡಿದೆ. ಭೌತಿಕ ಮತ್ತು ಡಿಜಿಟಲ್ ಕಲಿಕಾ ಸಾಧನಗಳೊಂದಿಗೆ ನಮ್ಮ ಅರಿವು ಕೇಂದ್ರಗಳನ್ನು ಸಬಲೀಕರಣಗೊಳಿಸುತ್ತೇವೆ” ಎಂದು ಹೇಳಿದರು.

“ಗ್ರಾಮೀಣ ಸಮುದಾಯಗಳನ್ನು ಶಿಕ್ಷಣದ ಮೂಲಕ ಸಬಲೀಕರಣಗೊಳಿಸುವ ಉದ್ದೇಶ ನಮ್ಮದು. ಬ್ರಿಟಿಷ್ ಕೌನ್ಸಿಲ್‌ನೊಂದಿಗಿನ ನಮ್ಮ ಪಾಲುದಾರಿಕೆಯೊಂದಿಗೆ, ಗ್ರಾಮೀಣ ಕರ್ನಾಟಕದ ಮಕ್ಕಳಿಗೆ ಎಲ್ಲ ಉತ್ತಮ ಗುಣಮಟ್ಟದ ಕಲಿಕೆಯ ಸಂಪನ್ಮೂಲಗಳಿಗೆ ಪ್ರವೇಶವನ್ನು ಖಚಿತಪಡಿಸಿಕೊಳ್ಳುವ ಮೂಲಕ ಕಲಿಕೆಯನ್ನು ಪ್ರೇರೇಪಿಸುವ, ಕೌಶಲ್ಯಗಳನ್ನು ಬೆಳೆಸುವ ಮತ್ತು ದೊಡ್ಡ ಅವಕಾಶಗಳಿಗೆ ಬಾಗಿಲು ತೆರೆಯುವ ನಿಟ್ಟಿನಲ್ಲಿ ನಾವು ನಿರ್ಣಾಯಕ ಹೆಜ್ಜೆ ಇಡುತ್ತಿದ್ದೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದ 10 ಗ್ರಾಮ ಪಂಚಾಯತಿಗಳಲ್ಲಿ ಅರಿವು ಕೇಂದ್ರ

“ಶೈಕ್ಷಣಿಕ ಅವಕಾಶಗಳು ಮತ್ತು ಸಾಂಸ್ಕೃತಿಕ ಸಂಬಂಧಗಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಯುನೈಟೆಡ್ ಕಿಂಗ್ಡಮ್ ನ ಅಂತಾರಾಷ್ಟ್ರೀಯ ಸಂಸ್ಥೆಯಾದ ಬ್ರಿಟಿಷ್ ಕೌನ್ಸಿಲ್ ಸಂಸ್ಥೆಯು ಅರಿವು ಕೇಂದ್ರಗಳ ಮಕ್ಕಳಲ್ಲಿ ಉತ್ತಮ ಗುಣಮಟ್ಟದ ಇಂಗ್ಲಿಷ್ ಭಾಷಾ ಕಲಿಕೆಗೆ ಅವಕಾಶವನ್ನು ಕಲ್ಪಿಸಲು ಮುಂದಾಗಿದೆ. ಒಡಂಬಡಿಕೆಯನ್ವಯ ಬ್ರಿಟಿಷ್ ಕೌನ್ಸಿಲ್ ಸಂಸ್ಥೆಯಿಂದ ರಾಜ್ಯದ ಆಯ್ದ 10 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಿಗೆ 500 ಮಕ್ಕಳ ಪುಸ್ತಕಗಳನ್ನು ಒದಗಿಸುವುದರ ಮೂಲಕ ಗ್ರಾಮೀಣ ಅರಿವು ಕೇಂದ್ರಗಳಲ್ಲಿ ಭೌತಿಕವಾಗಿ ಪುಸ್ತಕ ಸಂಗ್ರಹದ ವಿಸ್ತರಣೆ ಜೊತೆಗೆ, ರಾಜ್ಯದ 5,000 ಗ್ರಾಮೀಣ ಅರಿವು ಕೇಂದ್ರಗಳಿಗೆ ಬ್ರಿಟಿಷ್ ಕೌನ್ಸಿಲ್ ಡಿಜಿಟಲ್ ಲೈಬ್ರರಿ ಪ್ರಿಮಿಯಂ ಸದಸ್ಯತ್ವವನ್ನು ಉಚಿತವಾಗಿ ಪಡೆದುಕೊಳ್ಳಲು ಅವಕಾಶವನ್ನು ಒದಗಿಸಲಾಗಿದೆ. ಬ್ರಿಟಿಷ್ ಕೌನ್ಸಿಲ್ ನ ಡಿಜಿಟಲ್ ಲೈಬ್ರರಿ ಸಂಪನ್ಮೂಲ ಬಳಕೆಯಿಂದ ಓದುಗರು/ವೀಕ್ಷಕರು ತಮ್ಮ ಶೈಕ್ಷಣಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಅನುಕೂಲವಾಗಲಿದೆ” ಎಂದು ವಿವರಿಸಿದರು.

“ಗ್ರಾಮ ಪಂಚಾಯತಿ ಗ್ರಂಥಾಲಯಗಳ ಸಂಪೂರ್ಣ ನಿರ್ವಹಣೆಯನ್ನು ಸಾರ್ವಜನಿಕ ಗ್ರಂಥಾಲಯಗಳ ಇಲಾಖೆಯಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಪಂಚಾಯತಿಗಳಿಗೆ 2019ರ ಮಾರ್ಚ್ 1ರಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ. ಗ್ರಾಮ ಪಂಚಾಯತಿಗಳ ಮೇಲ್ವಿಚಾರಣೆ ಮೂಲಕ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಅಭಿವೃದ್ಧಿಯಲ್ಲಿ ಸಾಧನೆ ಮಾಡಲಾಗುತ್ತಿದೆ. ಗ್ರಾಮ ಪಂಚಾಯತಿ ಗ್ರಂಥಾಲಯಗಳನ್ನು ʼಅರಿವು ಕೇಂದ್ರʼಗಳಾಗಿ ಮೇಲ್ದರ್ಜೇಗೇರಿಸುವ ಮೂಲಕ ಡಿಜಿಟಲ್ ಕಲಿಕಾ ಸಾಮಾಗ್ರಿಗಳು, ವೃತ್ತಿಪರ ಮಾರ್ಗದರ್ಶನ ವ್ಯವಸ್ಥೆ, ಸಂವಿಧಾನದ ಶೈಕ್ಷಣಿಕ ವ್ಯವಸ್ಥೆ, ವಿಶೇಷ ಚೇತನ ಸ್ನೇಹಿ ತಾಂತ್ರಿಕತೆ ಹಾಗೂ ನುರಿತ ವ್ಯಕ್ತಿಗಳಿಂದ ಜ್ಞಾನರ್ಜನೆ ಮುಂತಾದ ಸೌಲಭ್ಯಗಳನ್ನು ಒದಗಿಸಲು ಕ್ರಮವಹಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಒಟ್ಟು 5,888 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, 5,767 ಅರಿವು ಕೇಂದ್ರಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ರೋಹಿತ್‌ ಕಾಯ್ದೆ’ ಜಾರಿಗಾಗಿ ಆಗಬೇಕಿದೆ ‘ಜನಾಂದೋಲನ’

ಬ್ರಿಟಿಷ್ ಕೌನ್ಸಿಲ್ ಕಾರ್ನರ್ಗಾಗಿ ಗುರುತಿಸಲಾದ 10 ಗ್ರಾಮ ಪಂಚಾಯತಿಗಳು

  1. ಬಾಗಲಕೋಟೆ ಜಿಲ್ಲೆ: ಕುಂದರಗಿ ಗ್ರಾ.ಪಂ. ಅರಿವು ಕೇಂದ್ರ, ಬೀಳಗಿ ತಾಲ್ಲೂಕು
  2. ಬೆಳಗಾವಿ ಜಿಲ್ಲೆ: ಬೈಲೂರು ಗ್ರಾ.ಪಂ. ಅರಿವು ಕೇಂದ್ರ, ಕಿತ್ತೂರು ತಾಲ್ಲೂಕು
  3. ಬೆಂಗಳೂರು ಗ್ರಾಮಾಂತರ ಜಿಲ್ಲೆ: ಕನ್ನಮಂಗಲ, ಗ್ರಾ.ಪಂ. ಅರಿವು ಕೇಂದ್ರ ದೇವನಹಳ್ಳಿ ತಾಲ್ಲೂಕು
  4. ಚಿಕ್ಕಬಳ್ಳಾಪುರ ಜಿಲ್ಲೆ: ವಟದ ಹೊಸಹಳ್ಳಿ ಗ್ರಾ.ಪಂ. ಅರಿವು ಕೇಂದ್ರ, ಗೌರಿಬಿದನೂರು ತಾಲ್ಲೂಕು
  5. ಗದಗ ಜಿಲ್ಲೆ: ಡೋಣಿ ಗ್ರಾ.ಪಂ. ಅರಿವು ಕೇಂದ್ರ, ಮುಂಡರಗಿ ತಾಲ್ಲೂಕು
  6. ಕಲಬುರಗಿ ಜಿಲ್ಲೆ: ನಾಲವಾರ ಗ್ರಾ.ಪಂ. ಅರಿವು ಕೇಂದ್ರ ಚಿತ್ತಾಪುರ ತಾಲ್ಲೂಕು
  7. ಮಂಡ್ಯ ಜಿಲ್ಲೆ: ಉಮ್ಮಡಹಳ್ಳಿ ಗ್ರಾ.ಪಂ. ಅರಿವು ಕೇಂದ್ರ, ಮಂಡ್ಯ ತಾಲ್ಲೂಕು
  8. ರಾಯಚೂರು ಜಿಲ್ಲೆ: ಕಲ್ಲೂರು ಗ್ರಾ.ಪಂ. ಅರಿವು ಕೇಂದ್ರ, ಸಿರವಾರ ತಾಲ್ಲೂಕು
  9. ರಾಮನಗರ ಜಿಲ್ಲೆ: ನೀಲಸಂದ್ರ ಗ್ರಾ.ಪಂ. ಅರಿವು ಕೇಂದ್ರ, ಚನ್ನಪಟ್ಟಣ ತಾಲ್ಲೂಕು
  10. ವಿಜಯಪುರ ಜಿಲ್ಲೆ: ತೊರವಿ ಗ್ರಾ.ಪಂ. ಅರಿವು ಕೇಂದ್ರ, ತಿಕೋಟ ತಾಲ್ಲೂಕು

ರಾಜ್ಯದ ಆಯ್ದ 10 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ಬ್ರಿಟಿಷ್ ಕೌನ್ಸಿಲ್ ಕಾರ್ನರ್ ಸ್ಥಾಪನೆಗೆ ಹಾಗೂ ಬ್ರಿಟಿಷ್ ಕೌನ್ಸಿಲ್ ಬೆಂಬಲಕ್ಕೆ ಚಾಲನೆ ನೀಡಲಾದ ಕಾರ್ಯಕ್ರಮದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಉಮಾ ಮಹಾದೇವನ್ ಮತ್ತು ಅಂಜುಂ ಪರವೇಜ್‌, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತರಾದ ಡಾ.ಅರುಂಧತಿ ಚಂದ್ರಶೇಖರ್ ಉಪಸ್ಥಿತರಿದ್ದರು. ಬ್ರಿಟಿಷ್ ಕೌನ್ಸಿಲ್ ಸಂಸ್ಥೆಯ ಜನಕ ಪುಷ್ಪನಾಥನ್, ಮೇಘಾ ಕಕ್ಕರ್, ಅನಿತಾ ಶಿವಕುಮಾರ್ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...