ಸ್ವಚ್ಛವಾಹಿನಿ ಚಾಲಕಿಯರ ವೇತನ, ಸೌಲಭ್ಯ ನಿರ್ವಹಣೆಗೆ ಪ್ರತ್ಯೇಕ ಅಧಿಕಾರಿ ನೇಮಕ

Date:

‘ಸ್ವಚ್ಛವಾಹಿನಿʼ ಗ್ರಾಮೀಣ ನೈರ್ಮಲ್ಯದ ಯೋಜನೆಯಡಿ ಕಾರ್ಯನಿರ್ವಹಿಸುತ್ತರುವ ಮಹಿಳಾ ಚಾಲಕಿಯರ ವೇತನ, ಸುಸಜ್ಜಿತ ಸ್ಥಿತಿಯಲ್ಲಿ ವಾಹನಗಳ ನಿರ್ವಹಣೆ, ಇಂಧನ ಮುಂತಾದ ಅವಶ್ಯಕತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಒಬ್ಬ ಪ್ರತ್ಯೇಕ ಅಧಿಕಾರಿಯನ್ನು ನೇಮಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಗ್ರಾಮೀಣ ಮಹಿಳೆಯರನ್ನು ಔದ್ಯೋಗಿಕವಾಗಿ ತೊಡಗಿಸುವ ಉದ್ದೇಶದೊಂದಿಗೆ ಹಾಗೂ ಮಹಿಳೆಯರಿಗೆ ಸಮಾನ ಅವಕಾಶ ಒದಗಿಸುವ ಮತ್ತು ಆತ್ಮವಿಶ್ವಾಸವನ್ನು ತುಂಬುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿಗಳಲ್ಲಿ ‘ಸ್ವಚ್ಛ ವಾಹಿನಿʼ ಗ್ರಾಮೀಣ ನೈರ್ಮಲ್ಯದ ಯೋಜನೆ ಆರಂಭಿಸಲಾಗಿದೆ. ಸ್ವಚ್ಛ ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳೆಯರ ಸಮಸ್ಯೆಗಳು, ಅವರ ಬೇಡಿಕೆಗಳು ಮತ್ತು ಕೈಗೊಳ್ಳಬಹುದಾದ ಪರಿಹಾರ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ʼಸ್ವಚ್ಛ ವಾಹಿನಿʼ ವಾಹನಗಳನ್ನು ಸುಸ್ಥಿತಿಯಲ್ಲಿರಿಸಿಕೊಂಡು ಗ್ರಾಮೀಣ ಪರಿಸರವನ್ನು ಶುಚಿಯಾಗಿರಿಸಿಕೊಳ್ಳಬೇಕೆಂದು ನಿರ್ದೇಶನ ನೀಡಿದರು.

ರಾಜ್ಯದಲ್ಲಿ 3469 ಮಹಿಳಾ ಚಾಲಕಿಯರು ತ್ಯಾಜ್ಯ ನಿರ್ವಹಣೆಯಲ್ಲಿ ನಿರತರಾಗಿದ್ದಾರೆ ಎಂದೂ ಈ ಸಂದರ್ಭದಲ್ಲಿ ಸಚಿವರು ಹೇಳಿದರು.ಸಭೆಯಲ್ಲಿ ಪಂಚಾಯತ್‌ ರಾಜ್‌ ಇಲಾಖೆಯ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್‌ ಹಾಗೂ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...