‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಗಂಭೀರ ಕ್ರಮ: ಸಿದ್ದರಾಮಯ್ಯ

Date:

ರಾಜ್ಯಸಭಾ ಚುನಾವಣೆ ಫಲಿತಾಂಶದ ಬಳಿಕ ಸಂಭ್ರಮಾಚರಣೆ ಸಂದರ್ಭದಲ್ಲಿ ವಿಧಾನಸೌಧದ ಆವರಣದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿರುವ ಆರೋಪ ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಗಂಭೀರ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ ಎನ್ನಲಾಗಿರುವ ಪ್ರಕರಣ ಈಗ ರಾಜಕೀಯ ಆರೋಪ-ಪ್ರತ್ಯಾರೋಪಕ್ಕೆ ವೇದಿಕೆ ಮಾಡಿಕೊಟ್ಟಿದೆ. ಈ ವಿಚಾರವಾಗಿ ಮಾಧ್ಯಮಗಳಿಗೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ್ದಾರೆ.

“ಎಫ್‌ಎಸ್ಎಲ್ ವರದಿ ಬಂದ ನಂತರ ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಈ ಬಗ್ಗೆ ಗಂಭೀರ ಕ್ರಮ ವಹಿಸಲಾಗುವುದು. ಪಾಕಿಸ್ತಾನದ ಪರವಾಗಿ ಘೋಷಣೆ ನಿಜವೇ ಆಗಿದ್ದರೆ ಅಂಥವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಷ್ಟ್ರದ ವಿರುದ್ಧ ಘೋಷಣೆ ಕೂಗಿರುವುದು ಸಾಭೀತಾದರೆ ಯಾರೇ ಆಗಲಿ ಕಠಿಣ ಕ್ರಮ ವಹಿಸಲಾಗುವುದು. ವಿಧಾನಸೌಧದಲ್ಲಿ ಈ ಘಟನೆ ಆಗಿದೆ ಎಂಬ ಪ್ರಶ್ನೆಗೆ ಉತ್ತರಿಸಿ ಕೂಗುವವರಿಗೆ ಇಲ್ಲಿಯಾದರೇನು, ಎಲ್ಲಾದರೇನು ? ನಿಜ ಆಗಿದ್ದರೆ ಕಠಿಣ ಕ್ರಮ ಜರುಗಿಸಲಾಗುವುದು” ಎಂದು ಹೇಳಿದರು.

“ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆಯೇ ಎಂಬ ಬಗ್ಗೆ ಮೊದಲು ತನಿಖೆಯಾಗಬೇಕಿದೆ. ಅದಕ್ಕೆ ಸಂಬಂಧಿಸಿದ ವಿಡಿಯೋ ತುಣುಕುಗಳನ್ನು ಈಗಾಗಲೇ ವಿಧಿವಿಜ್ಞಾನ ಪ್ರಯೋಗಾಯಕ್ಕೆ ತನಿಖೆಗೆ ಕಳುಹಿಸಿಕೊಟ್ಟಿದ್ದೇವೆ. ನಿಜವಿದ್ದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ” ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಪ್ರಸಾದ ಬೇಡ ಬಸ್ ಬೇಕು’ ಎಂದ ಬಾಲಕಿಯ ಮನವಿಯಲ್ಲಿದೆ ಮಹತ್ವದ ಸಂದೇಶ

ಕಾಲ್ಪನಿಕ ಘಟನೆ: ಸಚಿವ ಪ್ರಿಯಾಂಕ್ ಖರ್ಗೆ

ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿ ವಿಧಾನಸೌಧದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿ, “ಇದು ಕಾಲ್ಪನಿಕ ಘಟನೆಯಾಗಿದೆ. ರಾಜ್ಯಸಭೆ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳಿಗೆ ಮುಖಭಂಗವಾಗಿದೆ. ಘೋಷಣೆ ಕೂಗಿರುವ ಆಡಿಯೋದಲ್ಲಿ ಸೈಯದ್ ಸಾಬ್, ನಾಸಿರ್ ಹುಸೇನ್ ಜಿಂದಾಬಾದ್ ಅಂತ ಹೇಳಿದ್ದಾರೆ. ನಾವು ಜವಬ್ದಾರಿಯುತವಾಗಿಯೇ ಪರಿಶೀಲನೆ ಮಾಡಲು ಹೇಳಿದ್ದೆವು. ಪಾಕಿಸ್ತಾನದ ಪರವಾಗಿ ಯಾವುದೇ ಘೋಷಣೆ ಕೂಗಿಲ್ಲ. ವಿಡಿಯೋ ತುಣುಕುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೂ ಕಳುಹಿಸಿಕೊಡಲಾಗಿದೆ” ಎಂದರು.

ಮೂರು ವಿಶೇಷ ತಂಡಗಳ ರಚನೆ

“ಕೆಲವು ಮಾಧ್ಯಮದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಬಗ್ಗೆ ವರದಿಯಾಗಿವೆ. ಖಾಸಗಿಯಾಗಿ ಆಡಿಯೋ ಚೆಕ್ ಮಾಡಲಾಗಿದೆ. ಮಾಧ್ಯಮಗಳು ಸರ್ಕಾರವನ್ನು ನೇಣಿಗೆ ಹಾಕಲು ಸಿದ್ಧವಾಗಿದ್ದರೆ ನಾವೇನು ಮಾಡಲು ಆಗುತ್ತದೆ? ಘೋಷಣೆ ಕೂಗಿಲ್ಲ ಅಂತ ಹೇಳಿದ್ದೇನೆ. ಸಮರ್ಥನೆ ನಾನು ಮಾಡಿಲ್ಲ. ಸರ್ಕಾರದಿಂದ 11 ಗಂಟೆಗೆ ರಿಪೋರ್ಟ್ ಬರುತ್ತದೆ ನೋಡೋಣ. ಇದು ವೈಯಕ್ತಿಕ ಘೋಷಣೆ, ಪಕ್ಷದ ಘೋಷಣೆ ಅಲ್ಲ. ಸುಮ್ಮನೇ ಆರೋಪ ಮಾಡಲಾಗದು. ಸುಳ್ಳು ಸುದ್ದಿಗೆ ಕಾನೂನು ಕೂಡ ಇದೆ. ಬಿಜೆಪಿಯವರು ಹತಾಶರಾಗಿ ಆರೋಪ ಮಾಡುತ್ತಿದ್ದಾರೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...