ರಾಜ್ಯದಲ್ಲಿ ಏಳು ಹೊಸ ಕೃಷಿ ತರಬೇತಿ ಕೇಂದ್ರ ಆರಂಭ: ಸಚಿವ ಚಲುವರಾಯಸ್ವಾಮಿ

Date:

ರಾಜ್ಯದಲ್ಲಿ ಈ ವರ್ಷ ಏಳು ಜಿಲ್ಲೆಗಳಲ್ಲಿ ಹೊಸದಾಗಿ ಕೃಷಿ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಬೆಳಗಾವಿ ಸುವರ್ಣ ಸೌಧ ಸಭಾಂಗಣದಲ್ಲಿ ಕೃಷಿ ಮತ್ತು ಜಲಾನಯನ ಇಲಾಖೆಗಳ ವಿಭಾಗ ಮಟ್ಟದ ಸಭೆ ನಡೆಸಿ ಮಾತನಾಡಿದ ಅವರು, “ಕೃಷಿಕರಿಗೆ ಯೋಜಿತ ತರಬೇತಿ ನೀಡಿ‌ ಸಾಮರ್ಥ್ಯ ಅಭಿವೃದ್ಧಿಗೆ ಕ್ರಮವಹಿಸಲಾಗುತ್ತಿದೆ. ವಿಜಯನಗರ, ಯಾದಗಿರಿ, ಗದಗ, ಕೋಲಾರ, ಚಾಮರಾಜನಗರ, ರಾಮನಗರ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೃಷಿ ಹೊಸ ತರಬೇತಿ ಕೇಂದ್ರ ಪ್ರಾರಂಭ ಮಾಡಲಾಗುವುದು” ಎಂದರು.

“ಇಲಾಖೆಯಲ್ಲಿ ತರಬೇತಿ ಹಾಗೂ ಗುಣ ನಿಯಂತ್ರಣಕ್ಕೆ ಒತ್ತು ನೀಡಲಾಗುತ್ತಿದೆ. ಪ್ರಯೋಗಾಲಯಗಳನ್ನು ಎನ್.ಎ.ಬಿ.ಎಲ್ ಮಾನ್ಯತೆಗೆ ಒಳಪಡಿಸಲಾಗುವುದು. ಬೈಲಹೊಂಗಲ ಪರತಂತ್ರ ಜೀವಿ ಪ್ರಯೋಗಾಲಯ ಉನ್ನತೀಕರಣಕ್ಕೆ ಕ್ರಮ ವಹಿಸಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಬ್ಬಿನಲ್ಲಿ ಕೀಟ ನಿಯಂತ್ರಣಕ್ಕೆ ಅವಶ್ಯವಿರುವ ಟ್ರೈಕೋಗ್ರಾಮಾ ಪರತಂತ್ರ ಜೀವಿಯ ಉತ್ಪಾದನೆಯಲ್ಲಿ ನೂತನ ತಾಂತ್ರಿಕತೆ ಅಳವಡಿಕೆ ಅಳವಡಿಸಿಕೊಳ್ಳಿ. ಮುಂದಿನ 6 ತಿಂಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದಿಸಿ ರೈತರಿಗೆ ಒದಗಿಸಿ” ಎಂದು ನಿರ್ದೇಶನ ನೀಡಿದರು.

ಸ್ಥಳೀಯವಾಗಿ ಬೀಜೋತ್ಪಾದನೆ ಮಾಡಿ

“ಪ್ರತಿ ಸಾಲಿನಲ್ಲಿ ಜಿಲ್ಲೆಗೆ ಅವಶ್ಯವಿರುವ ಬಿತ್ತನೆ ಬೀಜವನ್ನು ಆಯಾ ಜಿಲ್ಲೆಗಳ ಬೀಜೋತ್ಪಾದನಾ ಕೇಂದ್ರ ಮತ್ತು ಪ್ರಗತಿಪರ ರೈತರ ಹೊಲದಲ್ಲೇ ಉತ್ಪಾದಿಸಿ. ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ, ಜವಾಬ್ದಾರಿಯುತವಾಗಿ ಕೆಲಸಮಾಡಿ” ಎಂದು ಸಚಿವರು ಸೂಚಿಸಿದರು.

“ಬಿತ್ತನೆ ಬೀಜ ರಸಗೊಬ್ಬರಗಳನ್ನು ಬೇಡಿಕೆಗಿಂತಲೂ ಹೆಚ್ಚು ಸರಬರಾಜು ಮಾಡಲಾಗಿದೆ. ಗೊಂದಲ ಇಲ್ಲದಂತೆ ವಿತರಣೆಮಾಡಿ. ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರ ಸಂಘಗಳ ನೆರವನ್ನೂ ಪಡೆಯಿರಿ” ಎಂದು ನಿರ್ದೇಶನ‌ ನೀಡದರು.

“ಬೆಳೆ ವಿಮೆ ಬಗ್ಗೆ ಹೆಚ್ಚಿನ ಪ್ರಚಾರ ನೀಡಿ, ನೊಂದಣಿ ಜಾಸ್ತಿ ‌ಮಾಡಿ, ಜೊತೆಗೆ ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆಗೆ ಗಮನ ಹರಿಸಿ. ಕೃಷಿಯನ್ನು ಲಾಭದಾಯಕ ವೃತ್ತಿಯನ್ನಾಗಿ ಪರಿವರ್ತಿಸಿ. ಹೈಟೆಕ್ ಹಾರ್ವೆಸ್ಟ್‌ ಹಬ್, ಕೃಷಿ ನವೋದ್ಯಮಗಳಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಇದರಿಂದಾಗುವ ಪರಿಣಾಮಕಾರಿ ಬದಲಾವಣೆಗಳ ಬಗ್ಗೆ ಕೃಷಿಕರಿಗೆ ಮಾಹಿತಿ ನೀಡಿ” ಎಂದರು.

ಕೃಷಿ ಆಯುಕ್ತ ವೈ.ಎಸ್ ಪಾಟೀಲ್, ಜಲಾನಯನ ಇಲಾಖೆ ಆಯುಕ್ತ ಗಿರೀಶ್, ನಿರ್ದೇಶಕ  ಪದ್ಮಯ್ಯ ನಾಯಕ್,ಕೃಷಿ ನಿರ್ದೇಶಕರಾದ ಡಾ ಜಿ ಟಿ ಪುತ್ರ ಅಪರ ನಿರ್ದೇಶಕ ವೆಂಕಟರಮಣ ರೆಡ್ಡಿ ಮತ್ತಿತರರು ಈ‌ ಸಂದರ್ಭದಲ್ಲಿ ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...