ಜೆಡಿಎಸ್‌ನಿಂದ ಕೋರ್ ಕಮಿಟಿ ಸೇರಿ ಹಲವು ಸಮಿತಿ ರಚನೆ, ಜಿ ಟಿ ದೇವೇಗೌಡರಿಗಿಲ್ಲ ಅವಕಾಶ

Date:

ಜೆಡಿಎಸ್‌ನಿಂದ ರಾಜಕೀಯ ವ್ಯವಹಾರಗಳ ಸಮಿತಿ, ಕೋರ್‌ ಕಮಿಟಿ, ಶಿಸ್ತುಪಾಲನಾ ಸಮಿತಿ ಹಾಗೂ ಪ್ರಚಾರ ಸಮಿತಿ ರಚನೆಯಾಗಿದ್ದು, ಸಮಿತಿಗಳಿಗೆಲ್ಲ ನೂತನ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಿಸಲಾಗಿದೆ. ಆದರೆ, ಪಕ್ಷದ ಹಿರಿಯ ಮುಖಂಡ ಜಿ ಟಿ ದೇವೇಗೌಡರನ್ನು ಎಲ್ಲ ಸಮಿತಿಗಳಿಂದಲೂ ಹೊರಗಿಡಲಾಗಿದೆ.

ಮಾಜಿ ಪ್ರಧಾನಿ ಮತ್ತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್‌ ಡಿ ದೇವೇಗೌಡ ಅವರು ರಾಜಕೀಯ ವ್ಯವಹಾರಗಳ ಸಮಿತಿ ರಚಿಸಿ, ಇದಕ್ಕೆ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.

ಇದೇ ಜೆಡಿಎಸ್‌ನ ಕೋರ್‌ ಕಮಿಟಿ, ಶಿಸ್ತುಪಾಲನಾ ಸಮಿತಿ ಹಾಗೂ ಪ್ರಚಾರ ಸಮಿತಿಗೂ ನೂತನ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಿ ಪಕ್ಷದ ರಾಜ್ಯಾಧ್ಯಕ್ಷ ಹೆಚ್‌ ಡಿ ಕುಮಾರಸ್ವಾಮಿ ಆದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೆಡಿಎಸ್ ಕೋರ್ ಕಮಿಟಿ ಸಮಿತಿಯ ಅಧ್ಯಕ್ಷರಾಗಿ ಮಾಜಿ ಉಪಸಭಾಧ್ಯಕ್ಷ ಎಂ. ಕೃಷ್ಣಾರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಶಾಸಕ ವೈ ಎಸ್ ವಿ ದತ್ತ ಅವರನ್ನು ನೇಮಿಸಲಾಗಿದೆ. ಹಾಗೂ ಶಿಸ್ತುಪಾಲನಾ ಸಮಿತಿ ಅಧ್ಯಕರಾಗಿ ಮಾಜಿ ಸಚಿವ ಡಿ. ನಾಗರಾಜಯ್ಯ ಅವರನ್ನು ಕುಮಾರಸ್ವಾಮಿ ನೇಮಿಸಿದ್ದಾರೆ.

ಕೋರ್ ಕಮಿಟಿ ಎಂಬುದು ಪಕ್ಷದ ಉನ್ನತ ಮಟ್ಟದ ನಿರ್ಧಾರ ತೆಗೆದುಕೊಳ್ಳುವ ಒಂದು ಸಣ್ಣ ಗುಂಪಿನ ಸಮಿತಿಯಾಗಿದ್ದು, ಪಕ್ಷದ ಆಂತರಿಕ ವಿಷಯಗಳು, ಚುನಾವಣಾ ರಣನೀತಿ, ನಾಯಕರ ನೇಮಕ ಮತ್ತು ಪಕ್ಷ ಬಲಪಡಿಸುವಂತಹ ಕಾರ್ಯಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಪಕ್ಷದೊಂದಿಗೆ ಅಂತರ ಕಾಯ್ದುಕೊಂಡಿರುವ ಹಿರಿಯ ಮುಖಂಡ ಜಿ ಟಿ ದೇವೇಗೌಡರನ್ನು ಎಲ್ಲ ಸಮಿತಿಯಿಂದಲೂ ಹೊರಗಿಡಲಾಗಿದೆ ಎಂಬುದು ಗಮನಾರ್ಹ ಸಂಗತಿ.

ಜಿ ಟಿ ದೇವೇಗೌಡ ಪುತ್ರ ಜಿ ಟಿ ಹರೀಶ್‌ ಗೌಡ ಅವನ್ನು ಪ್ರಚಾರ ಸಮಿತಿ ಸದಸ್ಯರನ್ನಾಗಿ ನೇಮಿಸಲಾಗಿದೆ. ಮಾಜಿ ಸಚಿವ ಹೆಚ್‌ ಡಿ ರೇವಣ್ಣ ಅವರನ್ನು ಕೋರ್‌ ಕಮಿಟಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಮಾಜಿ ಸಚಿವ ಎ ಮಂಜು ಇದರ ಸಂಚಾಲಕರಾಗಿದ್ದಾರೆ.

ಜಿ ಟಿ ದೇವೇಗೌಡರ ಅಭಿಪ್ರಾಯ ಪಡೆಯಲು ಈ ದಿನ.ಕಾಮ್‌ ಪ್ರಯತ್ನಿಸಿತು. ಆದರೆ, ಜಿ ಟಿ ದೇವೇಗೌಡ ಅವರು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃದಲ್ಲಿ ನಡೆಯುತ್ತಿರುವ ಕೆಡಿಪಿ ಸಭೆಯಲ್ಲಿ ಭಾಗಿಯಾಗಿದ್ದಾರೆ ಎಂದು ಅವರ ಆಪ್ತರು ತಿಳಿಸಿದರು.

WhatsApp Image 2025 11 10 at 3.57.59 PM
WhatsApp Image 2025 11 10 at 3.55.39 PM
WhatsApp Image 2025 11 10 at 3.57.20 PM
WhatsApp Image 2025 11 10 at 3.58.32 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...