ಲೈಂಗಿಕ ದೌರ್ಜನ್ಯ ಪ್ರಕರಣ | ಮತ್ತೆ ವಿಮಾನ ಟಿಕೆಟ್ ರದ್ದು; ಪ್ರಜ್ವಲ್ ರೇವಣ್ಣರಿಂದ ಕಣ್ಣಾಮುಚ್ಚಾಲೆ ಆಟ

Date:

ಅಶ್ಲೀಲ ವಿಡಿಯೋ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದುಕೊಂಡು ಕಣ್ಣಾಮುಚ್ಚಾಲೆ ಆಟ   ಮುಂದುವರಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಜರ್ಮನ್​​​​ನ ಮ್ಯೂನಿಚ್​​ನಿಂದ ಬೆಂಗಳೂರಿಗೆ ಬುಕ್ ಆಗಿದ್ದ ವಿಮಾನ ಟಿಕೆಟ್ ಅನ್ನು ರದ್ದುಪಡಿಸಿಕೊಂಡಿದ್ದಾರೆ. ಹೀಗಾಗಿ ಇಂದೂ ಸಹ ಬೆಂಗಳೂರಿಗೆ ಬರುವುದು ಅನುಮಾನವಾಗಿದೆ.

ತಂದೆ ಮತ್ತು ಶಾಸಕ ಎಚ್‌ ಡಿ ರೇವಣ್ಣ ಅವರಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಬುಧವಾರ ಪ್ರಜ್ವಲ್‌ ರಾಜ್ಯಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿತ್ತು. ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ಈಗಾಗಲೇ ಟಿಕೆಟ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲುಪ್ತಾನ್ಸಾ ವಿಮಾನದಲ್ಲಿ ಬುಕ್ ಆಗಿದ್ದ ಟಿಕೆಟ್ ಅನ್ನು ಪ್ರಜ್ವಲ್‌ ರದ್ದು ಮಾಡಿಕೊಂಡಿರುವುದು ತಿಳಿದುಬಂದಿದೆ. ಆದರೆ, ಟಿಕೆಟ್ ರದ್ದು ಮಾಡಿದರೂ ಅದರ ಹಣ ವಾಪಸ್ ಪಡೆಯದೆ ಪ್ರಜ್ವಲ್ ಗೊಂದಲ ಮೂಡಿಸಿದ್ದಾರೆ. ಇದರ ಅರ್ಥ ಯಾವುದೇ ಕ್ಷಣದಲ್ಲಾದರೂ ಮತ್ತೆ ಟಿಕೆಟ್ ಖರೀದಿಸಲು ಪ್ರಜ್ವಲ್ ಈ ತಂತ್ರ ಹೂಡಿರಬಹುದು ಎನ್ನಲಾಗಿದೆ.

ಎಸ್‌ಐಟಿ ಕಣ್ಣು

ಪ್ರಜ್ವಲ್ ರೇವಣ್ಣ ಚಲನ ವಲನಗಳ ಮೇಲೆ ಎಸ್ಐಟಿ ತಂಡ ನಿಗಾ ಇಟ್ಟಿದೆ. ಬೇರೆ ವಿಮಾನದಲ್ಲಿ ಟಿಕೆಟ್ ಬುಕ್ ಆಗುತ್ತದೆಯೇ, ಆಗಿದೆಯೇ ಎಂದು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ ಎಸ್​ಐಟಿ ತಂಡ ಬೀಡುಬಿಟ್ಟಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...